ಕಾನೂನಿನ ವ್ಯಾಪ್ತಿಯಲ್ಲಿ ಕೆಲಸ ಮಾಡಿ
Team Udayavani, Jun 5, 2020, 11:21 AM IST
ಹೊಸದುರ್ಗ: ತಾಲೂಕಿನ 33 ಗ್ರಾಮ ಪಂಚಾಯ್ತಿಗಳಲ್ಲಿ ಕಳೆದ 2013-14 ರಿಂದ ಆಗಿರುವ ಕಾಮಗಾರಿಗಳ ಕುರಿತು ಪರಿಶೀಲನೆ ನಡೆಸಲಾಗುವುದು ಈ ಬಗ್ಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲನೆ ವೇಳೆ ನೀಡಬೇಕು ಎಂದು ಶಾಸಕ ಗೂಳಿಹಟ್ಟಿ ಡಿ.ಶೇಖರ್ ಪಿಡಿಒಗಳಿಗೆ ಸೂಚಿಸಿದರು.
ಪಟ್ಟಣದ ತಾಪಂ ಸಭಾಂಗಣದಲ್ಲಿ ನಡೆದ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಪರಿಶೀಲನಾ ಸಭೆಯ ನೇತೃತ್ವ ವಹಿಸಿ ಅವರು ಮಾತನಾಡಿದರು. ಪ್ರತಿ ಗ್ರಾಮ ಪಂಚಾಯ್ತಿಗಳಲ್ಲಿ ಕಾಮಗಾರಿಗಳ ಹಗರಣಗಳಾದರೇ ಉತ್ತರಕೊಡುವವರು ಪಿಡಿಒಗಳೇ ಹೊರತು ಬಿಲ್ ಕಲೆಕ್ಟರ್, ಡಾಟಾಎಂಟ್ರಿ ಆಪರೇಟರ್ಗಳಲ್ಲ. ತನಿಖೆ ವೇಳೆ ಅವ್ಯವಹಾರ ಸಾಬೀತಾದರೇ ಸಮಸ್ಯೆ ಎದುರಿಸಬೇಕಾಗುತ್ತದೆ. ಪಿಡಿಒಗಳು ಯಾರ ಮುಲಾಜಿಗೂ ಒಳಗಾಗದೇ ಕಾನೂನಿನ ವ್ಯಾಪ್ತಿಯಲ್ಲಿ ಕೆಲಸ ಮಾಡಬೇಕು ಎಂದರು.
ಗ್ರಾಮ ಪಂಚಾಯ್ತಿಗಳಲ್ಲಿ ಪಿಡಿಒಗಳು ಸಮಯಕ್ಕೆ ಸರಿಯಾಗಿ ಕಚೇರಿಗಳಿಗೆ ಹಾಜರಾಗುವುದಿಲ್ಲ. ಕೇಳಿದರೇ ತಾಪಂ ಸಭೆ ಇಲ್ಲವೆ ಚಿತ್ರದುರ್ಗದಲ್ಲಿ ಸಭೆಇತ್ತು. ಸ್ಟಾಪ್ ವಿಸೀಟ್ ಹೋಗಿದ್ದೆ ಎಂದು ಉತ್ತರ ನೀಡುತ್ತೀರಾ? ಸಮಯಕ್ಕೆ ಸರಿಯಾಗಿ ಕರ್ತವ್ಯಕ್ಕೆ ಹಾಜರಾಗುವುದನ್ನು ರೂಢಿಸಿಕೊಳ್ಳಿ ಎಂದು ಸೂಚಿಸಿದರು. ತಾಪಂ ಇಒ ಜಾನಕಿರಾಮ್, ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಸಿ.ಎಸ್.ಈಶ, ತೋಟಗಾರಿಕೆ ಇಲಾಖೆ ಎಡಿ ಶ್ರೀಕಾಂತ್ ಮತ್ತಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು