ಸರಕಾರ ಜಾನಪದ ಕಲಾವಿದರ ಪೋಷಿಸಲಿ


Team Udayavani, Jun 5, 2020, 1:01 PM IST

5-June-13

ಸಾಗರ: ಸರ್ಕಾರಿ ನೌಕರರ ಭವನದಲ್ಲಿ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಹಾಗೂ ಕರ್ನಾಟಕ ಜಾನಪದ ಪರಿಷತ್‌ ವತಿಯಿಂದ ಆಯ್ದ ಜಾನಪದ ಕಲಾವಿದರಿಗೆ ದಿನಸಿ ಕಿಟ್‌ ವಿತರಿಸಲಾಯಿತು.

ಸಾಗರ: ಜಾನಪದ ಕಲಾವಿದರು ಸಾಂಸ್ಕೃತಿಕ ರಾಯಭಾರಿಗಳಾಗಿದ್ದು, ಅವರನ್ನು ಪೋಷಣೆ ಮಾಡುವತ್ತ ಸರ್ಕಾರ ಹಾಗೂ ಸಮಾಜ ಗಮನ ಹರಿಸಬೇಕು ಎಂದು ಕರ್ನಾಟಕ ಜಾನಪದ ಪರಿಷತ್‌ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್‌ ತಿಳಿಸಿದರು.

ನಗರದ ಸರ್ಕಾರಿ ನೌಕರರ ಭವನದಲ್ಲಿ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಹಾಗೂ ಕರ್ನಾಟಕ ಜಾನಪದ ಪರಿಷತ್‌ ವತಿಯಿಂದ ಆಯ್ದ ಜಾನಪದ ಕಲಾವಿದರಿಗೆ ದಿನಸಿ ಕಿಟ್‌ ಮತ್ತು ಆರ್ಥಿಕ ಸಹಾಯಧನ ವಿತರಣೆ ಮಾಡಿ ಮಾತನಾಡಿದ ಅವರು, ಕಲಾವಿದರು ಉಳಿದರೆ ಕಲೆ ಉಳಿಯುತ್ತದೆ. ಕಲೆ ಉಳಿಯಬೇಕಾದರೆ ನಾವು ಜಾನಪದ ಕಲಾವಿದರನ್ನು ಉಳಿಸಿಕೊಳ್ಳುವ ತುರ್ತು ಅವಶ್ಯವಿದೆ. ಆಗ ಮಾತ್ರ ನಮ್ಮ ಮುಂದಿನ ಪೀಳಿಗೆಗೆ ಜಾನಪದ ಕಲೆಯನ್ನು ತೆಗೆದುಕೊಂಡು ಹೋಗಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಈಗಾಗಲೇ ಜಾನಪದ ಪರಿಷತ್‌ ವತಿಯಿಂದ ರಾಜ್ಯಾಧ್ಯಕ್ಷರಾದ ಟಿ.ತಿಮ್ಮೇಗೌಡ ನೇತೃತ್ವದಲ್ಲಿ ಜಾನಪದ ಕಲಾವಿದರಿಗೆ ಆರ್ಥಿಕ ಸಹಕಾರ ನೀಡುವಂತೆ ಮನವಿ ಸಲ್ಲಿಸಲಾಗಿದ್ದು, ಮುಖ್ಯಮಂತ್ರಿಗಳು 2 ಕೋಟಿ ರೂ. ಹಣ ಬಿಡುಗಡೆ ಮಾಡಿದ್ದಾರೆ. ರಾಜ್ಯದ 3 ಸಾವಿರ ಕಲಾವಿದರು ಆರ್ಥಿಕ ಸಹಕಾರಕ್ಕಾಗಿ ಅರ್ಜಿ ಸಲ್ಲಿಸಿದ್ದು, ಶೀಘ್ರದಲ್ಲಿ ಹಣ ಅವರ ಖಾತೆಗೆ ಜಮೆ ಆಗುವ ನಿರೀಕ್ಷೆ ಹೊಂದಲಾಗಿದೆ. ಜೊತೆಗೆ ಆದಿಚುಂಚನಗಿರಿ ಮಠಕ್ಕೆ ಮಾಡಿಕೊಂಡ ಮನವಿ ಮೇರೆಗೆ 3 ಲಕ್ಷ ರೂ. ಹಣ ನೀಡಿದ್ದು, ಅದನ್ನು ಸಹ ಆರ್ಥಿಕ ಸಂಕಷ್ಟದಲ್ಲಿರುವ ಕಲಾವಿದರಿಗೆ ವಿತರಣೆ ಮಾಡಲಾಗುತ್ತಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಸುಮಾರು 300 ಕಲಾವಿದರು ಅರ್ಜಿ ಸಲ್ಲಿಸಿದ್ದು, ಹಂತಹಂತವಾಗಿ ಅವರಿಗೆ ಆರ್ಥಿಕ ಸಹಾಯ, ದಾನಿಗಳಿಂದ ದಿನಸಿ ಕಿಟ್‌ ವಿತರಣೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಜಾನಪದ ಗಾಯಕ ವೈ.ಎನ್‌. ಹುಬ್ಬಳ್ಳಿ, ಯಕ್ಷಗಾನ ಕಲಾವಿದರಾದ ನಾರಾಯಣಪ್ಪ ತುಮರಿ, ಮಣಿಕಂಠ ಆವಿನಹಳ್ಳಿ, ಡೊಳ್ಳು ಕಲಾವಿದರಾದ ಓಂಕಾರಮ್ಮ, ಸುಧಾ, ಜಾನಪದ ಕಲಾವಿದ ರುದ್ರೇಶ್‌ ಅವರಿಗೆ 2 ಸಾವಿರ ರೂ. ಬೆಲೆಬಾಳುವ ದಿನಸಿ ಕಿಟ್‌ ಮತ್ತು 1 ಸಾವಿರ ರೂ. ಸಹಾಯಧನ ನೀಡಲಾಯಿತು. ಶಿಕ್ಷಕ ಚಂದ್ರಪ್ಪ ತುಮರಿ, ನಿವೃತ್ತ ನೌಕರರ ಸಂಘದ ಅಧ್ಯಕ್ಷ ಉಮೇಶ್‌ ಹಿರೇನೆಲ್ಲೂರು, ಪ್ರಮುಖರಾದ ನಾರಾಯಣಪ್ಪ ಕುಗ್ವೆ, ಕಸ್ತೂರಿ, ಚೂಡಾಮಣಿ ರಾಮಚಂದ್ರ, ವಸಂತ ಕುಗ್ವೆ, ಡಾ| ರಾಮಪ್ಪ, ಎಸ್‌.ಎಲ್‌.ಎನ್‌. ಸ್ವಾಮಿ, ಭಾಗೀರಥಿ ಹೆಗ್ಗೋಡು ಇನ್ನಿತರರು ಇದ್ದರು. ವಿ.ಟಿ. ಸ್ವಾಮಿ ಸ್ವಾಗತಿಸಿ, ಪ್ರಾಸ್ತಾವಿಕ ಮಾತನಾಡಿದರು. ಎಸ್‌. ಬಸವರಾಜ್‌ ವಂದಿಸಿದರು. ಪರಮೇಶ್ವರ ಕರೂರ್‌ ನಿರೂಪಿಸಿದರು.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-araga

LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ

3-

LS Polls: ರಾಷ್ಟ್ರ ಪ್ರೇಮ ಬಿಜೆಪಿಯವರಿಂದ ಕಲಿಯಬೇಕಾಗಿಲ್ಲ: ಮಂಜುನಾಥ್ ಭಂಡಾರಿ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

11-

Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.