ಪ್ರಾಮಾಣಿಕತೆ ಮೆರೆದ ಅಂಚೆ ಇಲಾಖೆ ನೌಕರರು
Team Udayavani, Jun 5, 2020, 1:15 PM IST
ಭದ್ರಾವತಿ: ಪೋಸ್ಟ್ ಮಾಸ್ಟರ್ ವಿ. ಶ್ರೀಧರ್ ಪರ್ಸ್ ಅನ್ನು ಬೋರಯ್ಯ ಅವರಿಗೆ ನೀಡಿದರು.
ಭದ್ರಾವತಿ: ಅಂಚೆ ಕಚೇರಿಗೆ ಬಂದಿದ್ದ ಗ್ರಾಹಕರೊಬ್ಬರು ಅಲ್ಲಿಯೇ ಮರೆತು ಬಿಟ್ಟು ಹೋಗಿದ್ದ ದಾಖಲೆ ಹಾಗೂ ಹಣವಿದ್ದ ಪರ್ಸ್ ಅನ್ನು ಅವರಿಗೆ ಹಿಂತಿರುಗಿಸುವ ಮೂಲಕ ನಗರದ ಮುಖ್ಯ ಅಂಚೆ ಕಚೇರಿ ನೌಕರರು ಪ್ರಾಮಾಣಿಕತೆ ಮೆರೆದಿದ್ದಾರೆ.
ಹೊಸಮನೆಯ ಬೋರಯ್ಯ ಎನ್ನುವವರು ಬುಧವಾರ ಬೆಳಗ್ಗೆ ಕೆಲಸದ ನಿಮಿತ್ತ ನಗರದ ಮುಖ್ಯ ಅಂಚೆ ಕಚೇರಿಗೆ ಬಂದು ಕೆಲಸ ಮುಗಿಸಿ ಹಿಂತಿರುಗುವ ವೇಳೆ ರೈಟಿಂಗ್ ಡೆಸ್ಕ್ ಮೇಲೆಯೇ ತಮ್ಮ ಪರ್ಸ್ ಮರೆತು ಹೋಗಿದ್ದರು. ಇದೇ ಕಚೇರಿಯಲ್ಲಿ ತಾತ್ಕಾಲಿಕ ಅಟೆಂಡರ್ ಜಾರ್ಜ್ ಎನ್ನುವವರು ಈ ಪರ್ಸನ್ನು ಗಮನಿಸಿ ಪೋಸ್ಟ್ ಮಾಸ್ಟರ್ ವಿ. ಶ್ರೀಧರ್ ಅವರಿಗೆ ನೀಡಿದ್ದಾರೆ. ಇದನ್ನು ಇನ್ಸ್ಪೆಕ್ಟರ್ ಪ್ರಹ್ಲಾದ್ ಅವರ ಸಮ್ಮುಖದಲ್ಲಿ ತೆರೆದು ನೋಡಿದಾಗ ಪರ್ಸ್ನಲ್ಲಿ 5,530 ರೂ. ಹಣ, ಡಿಎಲ್ ,ಆರ್ಸಿ, ಪ್ಯಾನ್ ಕಾರ್ಡ್ ಸೇರಿದಂತೆ ಹಲವು ಮುಖ್ಯವಾದ ಮೂಲ ದಾಖಲೆಗಳಿರುವುದು ಕಂಡುಬಂದಿತು.
ಕೂಡಲೇ ಪೋಸ್ಟ್ ಮ್ಯಾನ್ ಮಧುಸೂಧನ್ ಅವರ ಸಹಾಯದಿಂದ ಪರ್ಸ್ ಕಳೆದುಕೊಂಡ ವ್ಯಕ್ತಿ ಯಾರು ಎಂದು ಪತ್ತೆ ಮಾಡಿ ಅವರನ್ನು ಸಂಪರ್ಕಿಸಿದಾಗ ಆ ವ್ಯಕ್ತಿ ಬೋರಯ್ಯ ಎಂದು ತಿಳಿದು ಬಂದ ನಂತರ, ಅವರನ್ನು ಮುಖ್ಯ ಅಂಚೆ ಕಚೇರಿಗೆ ಕರೆಸಿಕೊಂಡು ಅದು ಅವರದೇ ಎಂದು ಸಾಬೀತು ಮಾಡಿದ ನಂತರ ಪೋಸ್ಟ್ ಮಾಸ್ಟರ್ ವಿ. ಶ್ರೀಧರ್ ಅವರು ಪರ್ಸ್ ನ್ನು ಬೋರಯ್ಯನವರಿಗೆ ಹಸ್ತಾಂತರಿಸಿದ್ದಾರೆ. ಬೋರಯ್ಯ ಅವರು, ಪೋಸ್ಟ್ ಮಾಸ್ಟರ್ ಹಾಗೂ ಅಂಚೆ ಇಲಾಖೆ ಸಿಬ್ಬಂದಿಗಳ ಪ್ರಾಮಾಣಿಕ ಸೇವೆಗಾಗಿ ಧನ್ಯವಾದ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
MUST WATCH
ಹೊಸ ಸೇರ್ಪಡೆ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು
Bidar; ಹಣ ಹಂಚುವ ದೂರು: ನಾಗಮಾರಪಳ್ಳಿ ಮನೆಯಲ್ಲಿ ಪರಿಶೀಲನೆ
Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ