ವಿಶ್ವ ಪರಿಸರ ದಿನದ ಆಚರಣೆ ತನ್ನ ಮಹತ್ವ ಕಳೆದುಕೊಳ್ಳದಿರಲಿ


Team Udayavani, Jun 5, 2020, 7:15 PM IST

ವಿಶ್ವ ಪರಿಸರ ದಿನದ ಆಚರಣೆ ತನ್ನ ಮಹತ್ವ ಕಳೆದುಕೊಳ್ಳದಿರಲಿ

ಸಾಂದರ್ಭಿಕ ಚಿತ್ರ

ನಮ್ಮ ಪೃಥ್ವಿ ಜೀವಿಗಳನ್ನು ಹೊಂದಿರುವ ಏಕೈಕ ಗ್ರಹ. ಇದು ನಮ್ಮ ವಾಸಸ್ಥಾನ. ಭೂಮಿಯಲ್ಲಿನ ಜೀವಿಗಳ ಉಗಮ, ವಿಕಾಸ, ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸುವುದು ಪಂಚಭೂತಗಳಿಂದ ನಿರ್ಮಿತವಾದ ನಮ್ಮ ಪರಿಸರ. ಸಂಕ್ಷಿಪ್ತವಾಗಿ ಹೇಳುವುದಾದರೆ ನಮ್ಮ ಸುತ್ತಲಿನ ವಾತಾವರಣವೇ ಪರಿಸರ.

21ನೇ ಶತಮಾನದ ಸ್ಪರ್ಧಾತ್ಮಕ, ಯಾಂತ್ರಿಕ ಜೀವನದ ಜಂಜಾಟದಲ್ಲಿ ನಾವೆಲ್ಲರೂ ತಲ್ಲೀನರಾಗಿದ್ದೇವೆ. ಅಭಿವೃದ್ಧಿ, ಹಣದ ಬೆನ್ನತ್ತಿ ಓಡುವ ಈ ಓಟದಲ್ಲಿ, ಪ್ರಕೃತಿ, ಪರಿಸರದ ಕುರಿತಾದ ಆಸ್ಥೆ ಮರೆಯಾಗಿದೆ. ಆ ಕಾರಣದಿಂದ ದಿನೇ ದಿನೇ ಪ್ರಕೃತಿ ತನ್ನ ತನವನ್ನು ಕಳೆದುಕೊಳ್ಳುತ್ತಿದೆ. ತನ್ನ ಜೀವವೈವಿಧ್ಯತೆಯನ್ನು, ತನ್ನ ನೈಸರ್ಗಿಕ ಸೌಂದರ್ಯ, ತನ್ಮಯತೆಯನ್ನು ಕಳೆದುಕೊಳ್ಳುತ್ತಿದೆ.

ನಮ್ಮ ಸುತ್ತಲಿನ ಸ್ವಚ್ಛತಾ ಸಮಸ್ಯೆಯೇ ಇರಲಿ ಅಥವಾ ಜಾಗತಿಕವಾಗಿ ತಾಪಮಾನ ಏರಿಕೆ, ಮಾಲಿನ್ಯದಂತ ಸಮಸ್ಯೆಗಳೇ ಇರಲಿ ಪರಿಸರ ಎದುರಿಸುತ್ತಿರುವ ಸಮಸ್ಯೆಗಳು, ಸವಾಲುಗಳು ಒಂದೆರಡಲ್ಲ. ಅತಿಯಾದ ಪ್ಲಾಸ್ಟಿಕ್‌ ಬಳಕೆಯಿಂದ ಭೂಮಿ ಮೇಲ್ಮೈ ಅಷ್ಟೇ ಅಲ್ಲದೆ ಸಮುದ್ರ ಜೀವಿಗಳೂ ತೊಂದರೆಗೆ ಸಿಲುಕಿರುವ ದುರಂತ ನಮ್ಮ ಕಣ್ಣ ಮುಂದಿದೆ. ಹವಾಮಾನ ಬದಲಾವಣೆ, ಪ್ರಾಕೃತಿಕ ವಿಕೋಪಗಳ ಇತ್ತೀಚೆಗೆ ಸರ್ವೇ ಸಾಮಾನ್ಯವಾಗಿಬಿಟ್ಟಿವೆ. ಆದ್ದರಿಂದ ಇಂಥ ವಿಷಮ ಸ್ಥಿತಿಯಲ್ಲಿ ಭವಿಷ್ಯಕ್ಕಾಗಿ, ಮುಂದಿನ ಪೀಳಿಗೆಗೆ ಭೂಮಿಯನ್ನು ಉಳಿಸುವ ನಿಟ್ಟಿನಲ್ಲಿ ಇಂದಿನ ಯುವ ಜನಾಂಗವಾದ ನಮ್ಮ ಕರ್ತವ್ಯ, ನಮ್ಮ ಪಾತ್ರ ಬಲು ದೊಡ್ಡದು.

ಜಾಗತಿಕ ತಾಪಮಾನ ಏರಿಕೆಯ, ಹವಾಮಾನ ವೈಪರೀತ್ಯ, ಮಾಲಿನ್ಯ ಇತ್ಯಾದಿಗಳನ್ನು ತಡೆಗಟ್ಟಲು ವಿಶ್ವ ಸಂಸ್ಥೆ, ಪ್ರತೀ ರಾಷ್ಟ್ರಗಳು ಪ್ರಯತ್ನಿಸುತ್ತಿವೆ. ಇವುಗಳ ಬೆಂಬಲವಾಗಿ ನಿಲ್ಲಬೇಕಾಗಿದೆ. ಪರಿಸರ ಸಂರಕ್ಷಣೆಯ ಕೂಗು ಕೇವಲ ಒಂದೇ ದಿನಕ್ಕೆ ಸೀಮಿತವಾದರೆ ವಿಶ್ವ ಪರಿಸರ ದಿನಾಚರಣೆ ತನ್ನ ಅರ್ಥ ಕಳೆದುಕೊಂಡಂತೆ. ಪರಿಸರ ಸಂರಕ್ಷಣೆ ಕೇವಲ ಒಂದು ದಿನ ಅಥವಾ ಕೆಲ ದಿನಗಳ ಗದ್ದಲವಲ್ಲ. ಒಂದು ಗಿಡ ನೆಡುವ ಕೆಲಸವಲ್ಲ, ಬದಲಾಗಿ ಇದು ನಮ್ಮ ಭೂಮಿಯ ಉಳಿವಿನ ಕೂಗು. ನಮ್ಮ ಪೃಥ್ವಿಯನ್ನು ಉಳಿಸಬೇಕು ಎಂದು ನೆನಪಿಸುವ ಕರೆಗಂಟೆ. ಈ ಭೂಮಿ ಕೇವಲ ಮನುಷ್ಯರದ್ದಲ್ಲ ಬದಲಾಗಿ ಇದು ಸಕಲ ಜೀವ ವೈವಿಧ್ಯಕ್ಕು ಸೇರಿದೆ ಎಂದು ನಾವು ಅರ್ಥೈಸಿಕೊಳ್ಳಬೇಕಾದ ಸಮಯ.

ಭಾರತೀಯ ಸಂಸ್ಕೃತಿ ಪಂಚಭೂತಗಳನ್ನು ಆರಾಧಿಸುವ ಸಂಸ್ಕೃತಿ. ಹಾಗಾಗಿ ನಮ್ಮ ಜೀವ ಪದ್ಧತಿಯಲ್ಲಿ ಸರ್ವ ಜೀವಿಗಳಿಗೂ ಬದುಕುವ ಎಲ್ಲ ಅವಕಾಶ, ವ್ಯವಸ್ಥೆಗಳಿವೆ. ಈ ವಿಚಾರವನ್ನು ನಾವು ಮನಗಂಡಾಗ ಮಾತ್ರ ಈ ದಿನಾಚರಣೆಗೆ ನಾವು ನಿಜ ಅರ್ಥ ನೀಡಿದಂತೆ.

ಶ್ರೀದೇವಿ, ಸಂತ ಫಿಲೋಮಿನಾ ಕಾಲೇಜು, ಪುತ್ತೂರು

ಟಾಪ್ ನ್ಯೂಸ್

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

vJune 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

June 13: 11 ಮೇಲ್ಮನೆ ಸ್ಥಾನಗಳಿಗೆ ಚುನಾವಣೆ, ಅಂದೇ ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ

Karnataka PUC-2 Result; ಇಂದು ದ್ವಿತೀಯ ಪಿಯು ಪರೀಕ್ಷೆ-2 ಫ‌ಲಿತಾಂಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-uv-fusion

Kind: ಕರುಣೆ ಎಂಬ ಒಡವೆ ತೆಗೆಯದಿರು 

8-uv-fusion

Smile: ನಗುವೇ  ನೆಮ್ಮದಿಗೆ ಸ್ಫೂರ್ತಿ, ಗೆಲುವಿನ ಶಕ್ತಿ

7-uv-fusion

Cleanliness: ಪ್ರವಾಸಿ ತಾಣ ನಮ್ಮ ಆಸ್ತಿ: ಸ್ವಚ್ಛವಾಗಿರಿಸೋಣ

6-uv-fusion

Uv Fusion: ಮೈಮನ ಪುಳಕಿತಗೊಳಿಸುವ ಅಯ್ಯನಕೆರೆ

13-doctor

Health: ಸದಾ ಎಚ್ಚರದಿಂದಿರಿ: ನಿಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಿ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

1-24-tuesday

Daily Horoscope: ಹೊಸ ವ್ಯವಹಾರ ಆರಂಭಿಸಲು ಚಿಂತನೆ, ಆರೋಗ್ಯ ತೃಪ್ತಿಕರ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

Karnataka ಮೇಲ್ಮನೆ ಏರಲು ಮೂರು ಪಕ್ಷದಲ್ಲೂ ಪೈಪೋಟಿ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

ಗೋರ್ಕಲ್ಲುಮನೆ ಕೆರೆ ಹೂಳೆತ್ತಿದರೆ ಹತ್ತಾರು ಎಕರೆ ಕೃಷಿಗೆ ವರದಾನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Karnataka Govt.ಹೊರಗುತ್ತಿಗೆ ನೌಕರರ ನೇಮಕಕ್ಕೂ ಮೀಸಲಾತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.