ಕ್ವಾರಂಟೈನ್‌ ಕೇಂದ್ರದಲ್ಲಿರುವ ಸದಸ್ಯರಿಗೆ ಸೋಂಕು


Team Udayavani, Jun 6, 2020, 6:26 AM IST

ಕ್ವಾರಂಟೈನ್‌ ಕೇಂದ್ರದಲ್ಲಿರುವ ಸದಸ್ಯರಿಗೆ ಸೋಂಕು

ರಾಯಚೂರು: ಜಿಲ್ಲೆಯಲ್ಲಿ ಗುರುವಾರ ದೃಢಪಟ್ಟ 88 ಪ್ರಕರಣಗಳಲ್ಲಿ ಬಹುತೇಕ ಕ್ವಾರಂಟೈನ್‌ನಲ್ಲಿರುವ ಕುಟುಂಬ ಸದಸ್ಯರಲ್ಲೇ ಹರಡಿವೆ. ಬಹುತೇಕ ಮಹಾರಾಷ್ಟ್ರದಿಂದ ಬಂದವರಿಗೆ ಸೋಂಕು ತಗುಲಿದೆ ಎಂದು ಜಿಲ್ಲಾಧಿಕಾರಿ ಆರ್‌. ವೆಂಕಟೇಶಕುಮಾರ ಸ್ಪಷ್ಟಪಡಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವದುರ್ಗದಲ್ಲಿ 75, ರಾಯಚೂರಿನಲ್ಲಿ 9, ಲಿಂಗಸುಗೂಗುರು ತಾಲೂಕಿನಲ್ಲಿ 2, ಮಾನ್ವಿ, ಸಿಂಧನೂರಿನಲ್ಲಿ ತಲಾ ಒಂದು ಪ್ರಕರಣ ದೃಢಪಟ್ಟಿದೆ. ನಗರದಲ್ಲಿ ಪಶ್ಚಿಮ ಠಾಣೆ ಮೂವರು ಪೇದೆಗಳು, ಅಸ್ಕಿಹಾಳನ ಆಶಾ ಕಾರ್ಯಕರ್ತೆ, ರಾಂಪುರದ ಪೋಸ್ಟ್‌ಮ್ಯಾನ್‌ಗೆ ಸೋಂಕು ತಗುಲಿದೆ. ಇನ್ನೂ ನಾಲ್ವರು ಕ್ವಾರಂಟೈನ್‌ನಲ್ಲಿದ್ದು, ಅವರಿಗೆ ಮಹಾರಾಷ್ಟ್ರದ ಹಿನ್ನೆಲೆಯಿದೆ. ಹೀಗಾಗಿ ಗೋಲ್‌ ಮಾರ್ಕೆಟ್‌, ರಾಂಪುರ, ಅಸ್ಕಿಹಾಳಗಳನ್ನು ಕಂಟೆನ್ಮೆಂಟ್‌ ಏರಿಯಾ ಎಂದು ಘೋಷಿಸಿರುವುದಾಗಿ ತಿಳಿಸಿದರು.

ಕೃಷಿ ವಿವಿಯಲ್ಲಿರುವ ಕ್ವಾರಂಟೈನ್‌ನಿಂದ ಪೊಲೀಸರು, ಪೋಸ್ಟ್ ಮ್ಯಾನ್‌ಗೆ ಸೋಂಕು ತಗುಲಿರಬಹುದು. ಆಶಾ ಕಾರ್ಯಕರ್ತೆಯ ಪ್ರಯಾಣ ಹಿನ್ನೆಲೆ ಪತ್ತೆ ಹಚ್ಚಲಾಗುತ್ತಿದೆ. ಅವರ ಸೋದರ ಬೆಂಗಳೂರಿಗೆ ಹೋಗಿ ಬಂದಿದ್ದರು. ಮಾನ್ವಿಯಲ್ಲಿ ಹೈದರಾಬಾದ್‌ನಿಂದ ಬಂದ ಸಾಫ್ಟವೇರ್‌ ಉದ್ಯೋಗಿಗೆ ಸೋಂಕು ತಗುಲಿದೆ. ಮತ್ತೂಬ್ಬ ವೃದ್ಧನಿಗೆ ಸೋಂಕು ತಗುಲಿದ್ದು, ಅವರ ಸ್ಥಿತಿ ತುಸು ಗಂಭೀರವಾಗಿದೆ. ಲಿಂಗಸುಗೂರು ತಾಲೂಕು ಕಡ್ಕಲ್‌, ಹಟ್ಟಿಯಲ್ಲಿ ಮಹಾರಾಷ್ಟ್ರದಿಂದ ಬಂದ ಇಬ್ಬರಲ್ಲಿ ಸೋಂಕು ದೃಢಪಟ್ಟಿದೆ. ಇನ್ನೂ ದೇವದುರ್ಗದ ಕೊತ್ತದೊಡ್ಡಿ ಕ್ವಾರಂಟೈನ್‌ ನಲ್ಲಿ 46, ನಾಗರಗುಂಡಾ ಕ್ವಾರಂಟೈನ್‌ನಲ್ಲಿ 29 ಪ್ರಕರಣ ದೃಢಪಟ್ಟಿವೆ. ಅವರೆಲ್ಲ ಮುಂಬೈನಿಂದ ಬಂದಿದ್ದು, ಕುಟುಂಬದ ಸದಸ್ಯರಿಗೆ ಹೆಚ್ಚಾಗಿ ಸೋಂಕು ತಗುಲಿದೆ ಎಂದು ತಿಳಿಸಿದರು.

ಎಸ್‌ಪಿ ಡಾ| ಸಿ.ಬಿ. ವೇದಮೂರ್ತಿ ಮಾತನಾಡಿ, ಕ್ವಾರಂಟೈನ್‌ ನಿಂದ ರೋಗಿಗಳು ತಪ್ಪಿಸಿಕೊಂಡು ಹೋಗಿಲ್ಲ. ಮಸ್ಕಿಯಿಂದ ಮೂವರು ತಪ್ಪಿಸಿಕೊಂಡು ಹೋಗಿದ್ದು, ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಇನ್ನೂ ಪೇದೆಗಳಿಗೆ ಸೋಂಕು ತಗುಲಿದ್ದು, ಅವರ ಸಂಪರ್ಕಿತರನ್ನು ಪ್ರತ್ಯೇಕ ಕ್ವಾರಂಟೈನ್‌ ಮಾಡಲಾಗಿದೆ. ಎಲ್ಲ ಪೊಲೀಸರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಎಂದು ತಿಳಿಸಿದರು. ಎಡಿಸಿ ದುರುಗೇಶ, ಸಹಾಯಕ ಆಯುಕ್ತ ಸಂತೋಷ ಎಸ್‌. ಕಾಮಗೌಡ, ಆರೋಗ್ಯ ಇಲಾಖೆ ಡಾ| ರಾಮಕೃಷ್ಣ, ಡಾ| ನಾಗರಾಜ್‌ ಇದ್ದರು.

ರಾಜ್ಯ ಸರ್ಕಾರ ಗುರುವಾರ ಬಿಡುಗಡೆ ಮಾಡಿದ ವರದಿಯಲ್ಲಿ ಕೆಲವೊಂದು ತಪ್ಪುಗಳಾಗಿದ್ದು, ಅಲ್ಲಿ ಉಲ್ಲೇಖೀಸಿದ ರೋಗಿಗಳ ಸಂಖ್ಯೆಗೂ ಸೋಂಕಿತರ ಸಂಖ್ಯೆಗೂ ತಾಳೆ ಆಗುತ್ತಿಲ್ಲ. ಸೋಂಕು ಹೆಚ್ಚಾಗಿ ಬಂದಿರುವ ಕ್ವಾರಂಟೈನ್‌ನಗಳಲ್ಲಿ ಆ ಸಂಖ್ಯೆಯ ರೋಗಿಗಳೇ ಇಲ್ಲ. ಕೂಲಂಕಷವಾಗಿ ಪರಿಶೀಲಿಸಿದ ಬಳಿಕ ಸರ್ಕಾರದ ಗಮನಕ್ಕೆ ತರಲಾಗಿದೆ.  -ಆರ್‌. ವೆಂಕಟೇಶಕುಮಾರ, ಜಿಲ್ಲಾಧಿಕಾರಿ

ಟಾಪ್ ನ್ಯೂಸ್

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

2-maski

Maski: ಒಂದೇ ರಾತ್ರಿ ಎರಡು ಮನೆಗಳಲ್ಲಿ ಕಳ್ಳತನ; ಸ್ಥಳೀಯರಲ್ಲಿ ಆತಂಕ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

priyanka gandhi (2)

Modi ಮದುವೆ ಮನೆಯಲ್ಲಿ ಕೂತ ಮಾವ ಇದ್ದಂತೆ: ಪ್ರಿಯಾಂಕಾ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.