ಇನ್ನೊಂದು ವರ್ಷ ಹೊಸ ಯೋಜನೆ ಇಲ್ಲ ; ಕೇಂದ್ರ ವಿತ್ತ ಸಚಿವಾಲಯ ಮಹತ್ವದ ಪ್ರಕಟನೆ
Team Udayavani, Jun 6, 2020, 7:51 AM IST
ಹೊಸದಿಲ್ಲಿ: ಕೋವಿಡ್ ನಿಂದಾಗಿ ದೇಶದ ಆರ್ಥಿಕತೆಗೆ ಪೆಟ್ಟು ಬಿದ್ದಿದ್ದು, ಈಗಾಗಲೇ 20 ಲಕ್ಷ ಕೋ.ರೂ. ಆರ್ಥಿಕ ಪ್ಯಾಕೇಜ್ ಘೋಷಿಸಲಾಗಿದೆ.
ಈ ಹಿನ್ನೆಲೆಯಲ್ಲಿ ಮುಂದಿನ ಒಂದು ವರ್ಷ ಹೊಸ ಯೋಜನೆ ಜಾರಿಗೊಳಿಸುವುದಿಲ್ಲ ಎಂದು ಕೇಂದ್ರ ವಿತ್ತ ಸಚಿವಾಲಯ ತಿಳಿಸಿದೆ.
ದೇಶದ ಸೋಂಕು ಪರಿಸ್ಥಿತಿ ಹಿಂದೆಂದೂ ಕಾಣದಂಥದ್ದು. ಹೀಗಾಗಿ ಸಾರ್ವಜನಿಕ ಹಣವನ್ನು ಕಾಪಾಡುವುದಕ್ಕೆ ಮತ್ತು ಅದರ ಸದ್ವಿನಿಯೋಗಕ್ಕೆ ಪ್ರಾಮುಖ್ಯ ನೀಡಬೇಕಿದೆ.
ಹಾಗಾಗಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯಡಿ ಘೋಷಿಸಿರುವ ಯೋಜನೆ ಮತ್ತು ಇತ್ತೀಚೆಗೆ ಪ್ರಕಟಿಸಲಾದ ಆತ್ಮನಿರ್ಭರ ಪ್ಯಾಕೇಜ್ಗಳಿಗೆ ಮಾತ್ರ ಸಾರ್ವಜನಿಕರ ಹಣ ಬಳಕೆಯಾಗಲಿದೆ ಎಂದದು ಹೇಳಿದೆ.
ಬಜೆಟ್ ಯೋಜನೆಗಳು, ಹಣಕಾಸು ಸ್ಥಾಯೀ ಸಮಿತಿಯ ಅನುಮೋದನೆ ಪಡೆದಿರುವ ಯೋಜನೆಗಳನ್ನು 2021ರ ಮಾ. 31ರ ವರೆಗೆ ಅಮಾನತಿನಲ್ಲಿಡಲಾಗುತ್ತದೆ. ಹೊಸ ಯೋಜನೆಗಳ ಪ್ರಸ್ತಾವನೆ ಕಳುಹಿಸದಿರುವಂತೆ ಇಲಾಖೆಗಳಿಗೆ ಸೂಚಿಸಲಾಗಿದೆ.
ಆರ್ಥಿಕ ಕುಸಿತ ಕಾರಣ
ಕಂಟ್ರೋಲರ್ ಜನರಲ್ ಆಫ್ ಅಕೌಂಟ್ಸ್ (ಸಿಜಿಎ) ಅಂಕಿಅಂಶ ಪ್ರಕಾರ, 2020ರ ಎಪ್ರಿಲ್ನಲ್ಲಿ ದೇಶದ ಆದಾಯ 27,548 ಕೋ.ರೂ. ಇದು ಭಾರತದ ಬಜೆಟ್ನ ಶೇ. 1.2ರಷ್ಟು ಮೊತ್ತ. ಕಳೆದ ವರ್ಷ ಇದೇ ತಿಂಗಳಲ್ಲಿ ಭಾರತದ ಆದಾಯ 3.07 ಲಕ್ಷ ಕೋಟಿ ರೂ. ಆಗಿತ್ತು! ಅದು ಭಾರತದ ಆ ವರ್ಷದ ಬಜೆಟ್ನ ಶೇ.10ರಷ್ಟು ಮೊತ್ತಕ್ಕೆ ಸಮ.
ಭಾರತದ ಒಟ್ಟಾರೆ ದೇಶೀಯ ಉತ್ಪನ್ನ (ಜಿಡಿಪಿ) ಕಳೆದ 11 ವರ್ಷಗಳಲ್ಲಿಯೇ ಅತ್ಯಂತ ಕೆಳಮಟ್ಟಕ್ಕೆ ಕುಸಿದಿದೆ. ಮೂಡೀಸ್ ಇನ್ವೆಸ್ಟರ್ ಕಂಪೆನಿಯು ಭಾರತಕ್ಕೆ ಇದ್ದ ಕ್ರೆಡಿಟ್ ರೇಟಿಂಗ್ ಅನ್ನು ಕೆಳಕ್ಕೆ ಇಳಿಸಿರುವುದು ಹೂಡಿಕೆಯ ಮೇಲೆ ನಕಾರಾತ್ಮಕ ಪರಿಣಾಮ ಬೀರಲಿದೆ. ಈ ಎಲ್ಲ ಬೆಳವಣಿಗೆಗಳಿಂದಾಗಿ ಸರಕಾರ ಹೊಸ ಯೋಜನೆಗಳನ್ನು ಪ್ರಕಟಿಸದಿರಲು ನಿರ್ಧರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?
ಇನ್ಸ್ಟಾ ಪ್ರೊಫೈಲ್ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..
NewsClick ಸ್ಥಾಪಕ ಪ್ರಬೀರ್ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!
ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್: ಪೋಷಕರಿಗೆ ಆತಂಕ
W.Bengal; ಮುಸ್ಲಿಂ ಮುನಿಸಿಗೆ ಮಂದಿರಕ್ಕೆ ಬಾರದ ಮಮತಾ: ಅಮಿತ್ ಶಾ
MUST WATCH
ಹೊಸ ಸೇರ್ಪಡೆ
Extortion: ಆನ್ಲೈನ್ ಗೇಮ್; ಬಾಲಕನ ಬೆದರಿಸಿ ಸುಲಿಗೆ
Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ
Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ
LPG Cylinders: ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?
ಧ್ರುವ್ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್ ಪೋಸ್ಟ್ನ ಸತ್ಯಾಸತ್ಯತೆ ಏನು?