ಇನ್ನೂ ನಡೆದಿಲ್ಲ ಮಳೆಗಾಲ ಪೂರ್ವಭಾವಿ ಕಾಮಗಾರಿ!

 ಉಪ್ಪಿನಂಗಡಿ: ಚರಂಡಿಗಳಿಗೆ ಆವರಿಸಿದ ಗಿಡಗಂಟಿಗಳು

Team Udayavani, Jun 6, 2020, 8:33 AM IST

ಇನ್ನೂ ನಡೆದಿಲ್ಲ ಮಳೆಗಾಲ ಪೂರ್ವಭಾವಿ ಕಾಮಗಾರಿ!

ಉಪ್ಪಿನಂಗಡಿ ಗ್ರಾ.ಪಂ. ವ್ಯಾಪ್ತಿಯ ವಾರ್ಡ್‌ ನಂ.5ರ ಪೆರಿಯಡ್ಕ- ಪಂಚೇರು ರಸ್ತೆಯಲ್ಲಿ ನಿರ್ವಹಣೆಯಿಲ್ಲದೆ ಪೊದೆಗಳಿಂದ ಆವರಿಸಿರುವ ಚರಂಡಿ.

ಉಪ್ಪಿನಂಗಡಿ: ಮಳೆಗಾಲ ಆರಂಭವಾಗಿದೆ. ಇನ್ನೊಂದೆಡೆ ಗ್ರಾ.ಪಂ. ಚುನಾಯಿತ ಸದಸ್ಯರ ಅಧಿಕಾರವಧಿಯು ಕೆಲವೇ ದಿನಗಳಲ್ಲಿ ಮುಗಿಯಲಿವೆ. ಆದರೆ ಮಳೆಗಾಲ ಪೂರ್ವಭಾವಿಯಾಗಿ ಗ್ರಾ.ಪಂ. ವ್ಯಾಪ್ತಿಗಳಲ್ಲಿ ಅಗತ್ಯವಾಗಿ ನಡೆಯಬೇಕಾದ ಚರಂಡಿ ಕಾಮಗಾರಿ, ನಿರ್ವಹಣೆ ಕೆಲಸಗಳು ಹೆಚ್ಚಿನ ಗ್ರಾ.ಪಂ. ವ್ಯಾಪ್ತಿಗಳಲ್ಲಿ ಮಾತ್ರ ಇನ್ನೂ ಆಗಿಲ್ಲ. ಇದ್ದ ಚರಂಡಿಗಳೂ ಕಸಕಡ್ಡಿ, ಮಣ್ಣು, ತ್ಯಾಜ್ಯ ತುಂಬಿ ಹೋಗಿದ್ದು, ಗಿಡಗಂಟಿ ಗಳು ಆವರಿಸಿ ನೀರಿನ ಹರಿವಿಗೆ ತಡೆ ಯೊಡ್ಡುತ್ತಿದೆ. ಕೆಲವೆಡೆ ನೀರು ರಸ್ತೆಯ ಮೇಲೆ ಹರಿಯುತ್ತಿದೆ. ಅಲ್ಲದೆ ಇನ್ನು ಕೆಲವೆಡೆ ಮಳೆನೀರು ನಿಂತು ಸಾಂಕ್ರಾಮಿಕ ರೋಗಗಳನ್ನು ಹರಡುವ ಸೊಳ್ಳೆ ಉತ್ಪಾದನ ಕೇಂದ್ರಗಳು ನಿರ್ಮಾಣವಾಗುತ್ತಿವೆ. ಕೆಲವು ಗ್ರಾ.ಪಂ.ಗಳು ಕೇವಲ ಪೇಟೆಯ ಚರಂಡಿಯ ನಿರ್ವಹಣೆಗಷ್ಟೇ ಒತ್ತು ನೀಡುತ್ತವೆ. ಆದರೆ ಗ್ರಾಮಾಂತರ ಪ್ರದೇಶಗಳಲ್ಲಿ ಚರಂಡಿ ನಿರ್ವಹಣೆ ಮಾಡುವುದೇ ಇಲ್ಲ. ಇನ್ನು ಕೆಲವೆಡೆ ಕ್ರಿಯಾ ಯೋಜನೆ ತಯಾರಿಸಿ, ಅದಕ್ಕೆ ಅನುದಾನ ಬಿಡುಗಡೆಗೊಂಡು ಕೆಲಸ ಆರಂಭಿಸುವಾಗ ಮಳೆಗಾಲ ಮುಗಿದು ಹೋಗಿರುತ್ತದೆ.

ಇಕ್ಕಟ್ಟಾದ ರಸ್ತೆ
ಉಪ್ಪಿನಂಗಡಿ ಗ್ರಾ.ಪಂ. ವ್ಯಾಪ್ತಿಯ ವಾರ್ಡ್‌ ನಂಬರ್‌ 5 ರಲ್ಲಿ ರುವ ಪೆರಿಯಡ್ಕ – ಪಂಚೇರು ರಸ್ತೆ ಆರಂಭ ದಲ್ಲೇ ಇಕ್ಕಟ್ಟಾಗಿದ್ದು, ಎದುರಿನಿಂದ ವಾಹನ ವೊಂದು ಬಂದರೆ ದ್ವಿಚಕ್ರ ಸವಾರ ನಿಗೂ ಹೋಗಲು ಸ್ಥಳವಿಲ್ಲ.  ಒಂದು ಕಡೆ ಚರಂಡಿ ಇದ್ದರೆ ಮತ್ತೂಂದು ಕಡೆ ಚರಂಡಿಯೇ ಇಲ್ಲ. ಇನ್ನು ಇದ್ದ ಚರಂಡಿಯಲ್ಲಿಯೂ ಗಿಡಗಂಟಿಗಳು, ಕಸಕಡ್ಡಿಗಳು ತುಂಬಿ ಹೋಗಿದ್ದು, ನೀರು ಹರಿಯದೇ ಅಲ್ಲೇ ನಿಲ್ಲುವಂತಾಗಿದೆ. ಇನ್ನು ಕೆಲವೆಡೆ ರಸ್ತೆಯ ಇಕ್ಕೆಲಗಳಲ್ಲಿ ಚರಂಡಿ ಇದ್ದರೆ, ಕೆಲವು ಕಡೆ ಚರಂಡಿಯೇ ಇಲ್ಲ. ಇದ್ದ ಚರಂಡಿ ಯಲ್ಲಿಯೂ ಗಿಡ – ಗಂಟಿಗಳು ಬೆಳೆದು ರಸ್ತೆಯನ್ನೇ ಆವರಿಸಿದೆ.

ರಸ್ತೆಯಲ್ಲೇ ಹರಿಯುವ ನೀರು
ನೀರು ರಸ್ತೆಯಲ್ಲೇ ಹರಿದು ಹೋಗುವಂತಾಗಿದೆ. ಇನ್ನೊಂದೆಡೆ ಪೊದೆಗಳು ಬೆಳೆದು ಹಾವು ಸಹಿತ ವಿಷ ಜಂತುಗಳ ಭೀತಿಯೂ ಎದುರಾಗಿದೆ. ಇಲ್ಲಿ ಚರಂಡಿಯನ್ನು ಎರಡು ವರ್ಷಗಳ ಹಿಂದೆ ಸ್ವತ್ಛಗೊಳಿಸಲಾಗಿತ್ತು. ಕಳೆದ ಮಳೆಗಾಲದಲ್ಲಿ ಇಲ್ಲಿ ಚರಂಡಿ ನಿರ್ವಹಣೆಯೇ ನಡೆದಿರಲಿಲ್ಲ. ಈ ಬಾರಿಯೂ ಹಾಗೇ ಇದೆ.

 ಶೀಘ್ರ ಕೆಲಸ ಆರಂಭ
ಈಗಾಗಲೇ ಪಿಡಿಒ ನಿಧಿ 2ರಲ್ಲಿ ತುರ್ತು ಕಾಮಗಾರಿಯನ್ನು ಹಮ್ಮಿ ಕೊಳ್ಳಲು ವಾರ್ಡ್‌ ಸದಸ್ಯರಿಗೆ ಅನುದಾನ ಬಿಡುಗಡೆಗೊಳಿಸುವ ಮೂಲಕ ಕಾಮಗಾರಿ ಮುಂದಿನ ಮೂರು ದಿನಗಳಲ್ಲಿ ಆರಂಭಿಸುವಂತೆ ತಿಳಿಸಲಾಗಿದೆ.
– ಅಬ್ದುಲ್‌ ರಹಿಮಾನ್‌, ಅಧ್ಯಕ್ಷ, ಗ್ರಾ.ಪಂ. ಉಪ್ಪಿನಂಗಡಿ

ಟಾಪ್ ನ್ಯೂಸ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

15-1

ಖಡಕ್ ಬಿಸಿಲು- ಪೊಲೀಸ್ ತಳ್ಳಾಟದಿಂದ ಸಂಸದ ಡಾ.‌ಜಾಧವ್ ಅಸ್ವಸ್ಥ: ಆಸ್ಪತ್ರೆಗೆ ದಾಖಲು

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ಕ್ರಮ ಕೈಗೊಳ್ಳಲು ವಿಳಂಬವಾಗಿಲ್ಲ: ಗೃಹ ಸಚಿವ ಜಿ.‌ಪರಮೇಶ್ವರ್

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ

ಸಲ್ಮಾನ್‌ ನಿವಾಸದ ಮೇಲೆ ಗುಂಡಿನ ದಾಳಿ: ಪೊಲೀಸ್‌ ಕಸ್ಟಡಿಯಲ್ಲಿದ್ದ ಆರೋಪಿ ಆತ್ಮಹತ್ಯೆ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Missing Case ಉಪ್ಪಿನಂಗಡಿ: ತಾಯಿ-ಮಗು ನಾಪತ್ತೆ; ಪ್ರಕರಣ ದಾಖಲು

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Dharmasthala ಇಂದು 52ನೇ ವರ್ಷದ ಸಾಮೂಹಿಕ ವಿವಾಹ

Sullia ಮನೆಯಿಂದ ನಗ, ನಗದು ಕಳವು

Sullia ಮನೆಯಿಂದ ನಗ, ನಗದು ಕಳವು

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

Uppinangady ಸೇನೆಯ ಐಟಿಬಿಪಿ ವಿಭಾಗಕ್ಕೆ ಡಾ| ಗೌತಮ್‌ ರೈ ಸೇರ್ಪಡೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

ಗುಲ್ವಾಡಿ: ಗುಜಿರಿ ಅಂಗಡಿಯಲ್ಲಿ ಅರಳಿದ ಗ್ರಂಥಾಲಯ-ತರಂಗ ವಾರಪತ್ರಿಕೆ ಪ್ರೇರಣೆ

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್‌ಗೆ ಮತಹಾಕಲಿ: ಯೋಗೇಂದ್ರ ಯಾದವ್

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

Manipal ಆಸ್ಪತ್ರೆಯ ಡಾ.ರಾಮದಾಸ್‌ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್‌ ಸೇವೆ ಆರಂಭ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

ರಜಿನಿಕಾಂತ್‌ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್‌ ನೋಟಿಸ್‌ ಕಳುಹಿಸಿದ ಇಳಯರಾಜ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.