ನಿನ್ನೆ ಮತ್ತೆರಡು ಮಂದಿಗೆ ಸೋಂಕು
Team Udayavani, Jun 6, 2020, 12:18 PM IST
ರಾಯಚೂರು: ಜಿಲ್ಲೆಯಲ್ಲಿ ಗುರುವಾರ 88 ಪಾಸಿಟಿವ್ ಪ್ರಕರಣ ದೃಢಪಟ್ಟಿದ್ದರೆ ಶುಕ್ರವಾರ ಕೇವಲ 2 ಮಾತ್ರ ಬಂದಿರುವುದು ಸಮಾಧಾನ ತಂದಿದೆ. ಆ ಮೂಲಕ ಜಿಲ್ಲೆಯಲ್ಲಿ ಈವರೆಗೆ 358 ಪ್ರಕರಣ ದೃಢಪಟ್ಟಂತಾಗಿದೆ. ದೇವದುರ್ಗ ತಾಲೂಕು ಪಲಕನಮರಡಿ ಗ್ರಾಮದ 35 ವರ್ಷ ವ್ಯಕ್ತಿ (ಆರ್ಸಿಆರ್-357), ದೇವದುರ್ಗ ತಾಲೂಕು ಕರಡಿಗುಡ್ಡ ಗ್ರಾಮದ 24 ವರ್ಷ ಮಹಿಳೆಗೆ (ಆರ್ಸಿಆರ್- 358) ಸೋಂಕು ತಗುಲಿದ್ದು, ಇವರಿಬ್ಬರು ಮಹಾರಾಷ್ಟ್ರದಿಂದ ಬಂದಿದ್ದಾರೆ. 37 ಜನ ಗುಣಮುಖರಾದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಮಾಡಿದ್ದು, 321 ಪ್ರಕರಣ ಸಕ್ರಿಯವಾಗಿವೆ.
ಇನ್ನೂ ಶುಕ್ರವಾರ ಲಿಂಗಸುಗೂರು ತಾಲೂಕಿನಿಂದ 58, ಮಾನ್ವಿ ತಾಲೂಕಿನಿಂದ 62, ಸಿಂಧನೂರು ತಾಲೂಕಿನಿಂದ 9 ಮತ್ತು ರಾಯಚೂರು ತಾಲೂಕಿನಿಂದ 22, ಎರಡು ಸಾರಿ ಸೇರಿ 151 ಜನರ ಗಂಟಲಿನ ದ್ರವ ಮಾದರಿಯನ್ನು ಕೋವಿಡ್ -19 ಶಂಕೆ ಹಿನ್ನೆಲೆಯಲ್ಲಿ ವರದಿಗಾಗಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಈ ಮೊದಲು ಕಳುಹಿಸಿದ ವರದಿಗಳಲ್ಲಿ 140 ನೆಗೆಟಿವ್ ಬಂದಿವೆ. ಈವರೆಗೆ 17,040 ಜನರ ಗಂಟಲಿನ ದ್ರವ್ಯ ಮಾದರಿಯನ್ನು ಕೊರೋನಾ ಪರೀಕ್ಷೆಗಾಗಿ ಕಳುಹಿಸಿದ್ದು, ಅದರಲ್ಲಿ 15645 ವರದಿಗಳು ನೆಗೆಟಿವ್ ಆಗಿವೆ. ಉಳಿದಂತೆ 885 ಮಾದರಿಗಳ ಫಲಿತಾಂಶ ಬರಬೇಕಿದೆ. μವರ್ ಕ್ಲಿನಿಕ್ ಗಳಲ್ಲಿ ಶುಕ್ರವಾರ 538 ಜನರನ್ನು ಥರ್ಮಲ್ ಸ್ಕ್ರೀನಿಂಗ್ಗೆ ಒಳಪಡಿಸಲಾಗಿದೆ.
ಸಾಂಸ್ಥಿಕ ಕ್ವಾರಂಟೈನ್ಗಳಿಂದ 261 ಜನರನ್ನು ಬಿಡುಗಡೆ ಮಾಡಲಾಗಿದೆ. 14 ಜನರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಎಂಟು ಜನರನ್ನು ಬಿಡುಗಡೆ ಮಾಡಲಾಗಿದೆ. ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದು, ಅದರಲ್ಲಿ 15 ಜನ ಗುಣಮುಖರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶ ಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur; ನೀರಿಲ್ಲದೆ ಬರಿದಾದ ಕೆರೆ: ಮೀನುಗಳ ಮಾರಣ ಹೋಮ
Sindhanur; ಒಂದೇ ದಿನ ಗ್ರಾಮದ ನಾಲ್ವರ ಸಾವು: ಭಯಭೀತರಾದ ಗ್ರಾಮಸ್ಥರು
Raichur; ಅಣ್ಣಾಮಲೈ ಸೆಲ್ಫಿಗಾಗಿ ನೂಕುನುಗ್ಗಲು: ವೇದಿಕೆಯಲ್ಲೇ ಲಾಠಿ ಬೀಸಿದ ಪೊಲೀಸರು
Prajwal Revanna Case; ರೆಕಾರ್ಡ್ ಸ್ಪೀಡ್ನಲ್ಲಿ ತನಿಖೆ ನಡೆಸಲಿ: ಅಣ್ಣಾಮಲೈ
Tragedy: ಬಿಸಿಲಿನ ತಾಪ… ಕುಸಿದು ಬಿದ್ದು ಬಿಎಂಟಿಸಿ ಕಂಡಕ್ಟರ್ ಮಲ್ಲಯ್ಯ ಮೃತ್ಯು
MUST WATCH
ಹೊಸ ಸೇರ್ಪಡೆ
Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು
Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್
HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?
65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್ ಸಾಧನೆ: ಹರಿಪ್ರಕಾಶ ಕೋಣೆಮನೆ
Delhi police Station: ಪೊಲೀಸ್ ಠಾಣೆ ಬಾತ್ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!