ಜಿಲ್ಲಾದ್ಯಂತ ಪರಿಸರ ದಿನ ಸಂಭ್ರಮ

ತಾಪಮಾನ ತಗ್ಗಿಸಲು ಹೆಚ್ಚೆಚ್ಚು ಗಿಡ ನೆಡಿ: ಶಾಸಕ ರೆಡ್ಡಿ ಎಲ್ಲೆಡೆ ಸಸಿ ನೆಟ್ಟು ದಿನಾಚರಣೆ

Team Udayavani, Jun 6, 2020, 2:38 PM IST

06-June-25

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಬಳ್ಳಾರಿ: ನಗರದ ಕನಕದುರ್ಗಮ್ಮ ದೇವಸ್ಥಾನದ ಆವರಣ, ತಾರಾನಾಥ್‌ ಸರ್ಕಾರಿ ಆಯುರ್ವೇದಿಕ್‌ ಕಾಲೇಜು ಆವರಣದಲ್ಲಿ ಶಾಸಕ ಜಿ. ಸೋಮಶೇಖರ ರೆಡ್ಡಿಯವರು ಸಸಿನೆಟ್ಟು ನೀರುಣಿಸುವ ಮೂಲಕ ವಿಶ್ವ ಪರಿಸರ ದಿನಾಚರಣೆ ಆಚರಿಸಿದರು.

ಇಲ್ಲಿನ ನಗರಾಭಿವೃದ್ಧಿ ಪ್ರಾಧಿಕಾರ, ಅರಣ್ಯ ಇಲಾಖೆ ಮತ್ತು ಅನುದಾನ ರಹಿತ ಖಾಸಗಿ ಶಾಲೆಗಳ ಒಕ್ಕೂಟದ ಸಹಯೋಗದಲ್ಲಿ ನಗರದ ಕನಕದುರ್ಗಮ್ಮ ದೇವಸ್ಥಾನ ಆವರಣದಲ್ಲಿ ಶಾಸಕ ಜಿ. ಸೋಮಶೇಖರರೆಡ್ಡಿಯವರು ಸಸಿನೆಟ್ಟು ನೀರುಣಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, ಬಳ್ಳಾರಿ ನಗರದಲ್ಲಿ ಅತಿಹೆಚ್ಚು ಬಿಸಿಲು ದಾಖಲಾಗುತ್ತದೆ. ಪ್ರತಿಯೊಬ್ಬರೂ ಹೆಚ್ಚಿನ ಪ್ರಮಾಣದಲ್ಲಿ ಗಿಡಮರಗಳನ್ನು ಬೆಳೆಸುವ ಮೂಲಕ ಬಳ್ಳಾರಿಯನ್ನು ಮಲೆನಾಡಿನಂತೆ ಮಾಡುವಲ್ಲಿ ಪ್ರತಿಯೊಬ್ಬರು ಸಹಕರಿಸಬೇಕು ಎಂದು ಅವರು ಕೋರಿದರು.

ವಿಶ್ವ ಪರಿಸರ ದಿನಾಚರಣೆ ನಿಮಿತ್ತ ನಗರದ ವಿವಿಧ ಕಡೆಗಳಲ್ಲಿ ಸಸಿಗಳನ್ನು ನಾಟಿ ಮಾಡಲಾಗುವುದು. ನಗರದಲ್ಲಿ ಈ ಮೊದಲಿಗಿಂತ ರಸ್ತೆ ಬದಿ, ಖಾಲಿ ನಿವೇಶನ, ಉದ್ಯಾನವನಗಳಲ್ಲಿ ಹೆಚ್ಚು ಗಿಡ ಮರಗಳನ್ನು ಬೆಳೆಯಲಾಗಿದೆ. ಆದರೂ, ನಗರದಲ್ಲಿ ಬಿಸಿಲಿನ ತಾಪಮಾನ ಇನ್ನಷ್ಟು ಕಡಿಮೆ ಮಾಡುವ ನಿಟ್ಟಿನಲ್ಲಿ ಇನ್ನು ಹೆಚ್ಚಿನ ಸಸಿಗಳನ್ನು ನೆಟ್ಟು ಅವನ್ನು ಬೆಳೆಸುವ ಜವಾಬ್ದಾರಿ ಪ್ರತಿಯೊಬ್ಬ ನಾಗರಿಕರದ್ದಾಗಿದೆ ಎಂದವರು ಸಲಹೆ ನೀಡಿದರು.

ಬುಡಾ ಅಧ್ಯಕ್ಷ ದಮ್ಮೂರು ಶೇಖರ್‌ ಮಾತನಾಡಿದರು. ಈ ಸಂದರ್ಭದಲ್ಲಿ ಪ್ರಾಧಿಕಾರದ ಆಯುಕ್ತ ಈರಪ್ಪ ಬಿರಾದರ, ಸಹಾಯಕ ಕಾರ್ಯಪಾಲಕ ಅಭಿಯಂತರ ಜಿ.ಕೆ. ರವಿಶಂಕರ್‌, ಡಾ| ರಮೇಶ್‌ ಕುಮಾರ್‌, ಜಿಲ್ಲಾ ಅನುದಾನ ರಹಿತ ಶಾಲೆಗಳ ಒಕ್ಕೂಟದ ಅಧ್ಯಕ್ಷ ಎನ್‌.ಮರಿಸ್ವಾಮಿ ರೆಡ್ಡಿ, ಅನುದಾನ ರಹಿತ ಕಾಲೇಜುಗಳ ಒಕ್ಕೂಟದ ಅಧ್ಯಕ್ಷ ಮನ್ನೆ ಶ್ರೀನಿವಾಸಲು, ಕನಕ ದುರ್ಗಮ್ಮ ದೇವಸ್ಥಾನದ ಪ್ರಧಾನ ಧರ್ಮಕರ್ತ ಪೂಜಾರಿ ಗಾದೆಪ್ಪ, ಪಾಲಿಕೆ ಸದಸ್ಯರಾದ ಚಂದ್ರಕಳಾ, ಶ್ರೀನಿವಾಸ್‌ ಮೋತ್ಕರ್‌, ಮಲ್ಲನಗೌಡ, ಬಿಇಒ ಸಿದ್ದಲಿಂಗಸ್ವಾಮಿ, ಅರಣ್ಯಾಧಿಕಾರಿಗಳು ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

7-

Politics: ಡಿಕೆಶಿ ಹೆಸರು ಹೇಳದಿದ್ದರೆ ಕೆಲವರಿಗೆ ನಿದ್ದೆ ಬರಲ್ಲ : ರಾಮಲಿಂಗಾರೆಡ್ಡಿ

1

ದೆಹಲಿಯ 50 ಕ್ಕೂ ಹೆಚ್ಚಿನ ಶಾಲೆಗಳಿಗೆ ಬಾಂಬ್‌ ಬೆದರಿಕೆ ಇ-ಮೇಲ್:‌ ಪೋಷಕರಿಗೆ ಆತಂಕ

6-kushtagi

Kushtagi: ಕಾರ್ಮಿಕ ದಿನಾಚರಣೆ ದಿನದಂದೇ ಪುರಸಭೆ ಪೌರ ಕಾರ್ಮಿಕ ಕಾಣೆ

5-belagavi

Belagavi: ಗಡಿ ಹೋರಾಟದಲ್ಲಿ‌ ಯಶಸ್ವಿಯಾಗಲು ಒಂದಾಗಿ: ಮನೋಜ್‌ ಜರಾಂಗೆ ಪಾಟೀಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.