ಬೀದರ್ನಲ್ಲಿ ಒಂದು ಕೋವಿಡ್ ಸೋಂಕು ದೃಢ
33 ಜನ ಸೋಂಕಿನಿಂದ ಗುಣಮುಖ, ಆಸ್ಪತ್ರೆಯಿಂದ ಡಿಸ್ಚಾರ್ಜ್
Team Udayavani, Jun 6, 2020, 7:00 PM IST
ಬೀದರ್: ಮಹಾರಾಷ್ಟ್ರದ ಕಂಟಕದಿಂದಾಗಿ ನಲುಗಿ ಹೋಗಿರುವ ಬೀದರ್ ಜಿಲ್ಲೆಯಲ್ಲಿ ಕೋವಿಡ್-19 ಆರ್ಭಟ ಕೊಂಚ ತಗ್ಗಿದ್ದು, ಶನಿವಾರ ಒಂದು ಪಾಸಿಟಿವ್ ಪ್ರಕರಣ ವರದಿಯಾಗಿದೆ. ಒಂದೇ ದಿನ 33 ಜನ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.
ಮಹಾರಾಷ್ಟ್ರದ ಮುಂಬೈ ಮತ್ತು ಪುಣೆ ನಗರಗಳಿಂದ ವಲಸೆ ಕಾರ್ಮಿಕರು ಜಿಲ್ಲೆಗೆ ಆಗಮನದಿಂದ ಸೋಂಕಿತರ ಸಂಖ್ಯೆ ಈಗ ದ್ವಿಶತಕ ಬಾರಿಸಿದೆ. ಹಳ್ಳಿ ಹಳ್ಳಿಗೂ ವ್ಯಾಪಿಸುತ್ತಿರುವ ಕೊರೊನಾ ಶುಕ್ರವಾರದಂದು ಅತಿ ಹೆಚ್ಚು 39 ಜನರಿಗೆ ಒಕ್ಕರಿಸುವ ಮೂಲಕ ಆತಂಕವನ್ನು ಹೆಚ್ಚಿಸಿತ್ತು. ಆದರೆ, ಶನಿವಾರ 28 ವರ್ಷದ ಯುವಕನಲ್ಲಿ (ಪಿ 4864) ವೈರಾಣು ಪತ್ತೆಯಾಗಿದ್ದು, ಈತ ದೆಹಲಿಯಿಂದ ವಾಪಸ್ಸಾಗಿದ್ದ ಎಂದು ಆರೋಗ್ಯ ಇಲಾಖೆ ಹೇಲ್ತ್ ಬುಲೇಟಿನ್ ದೃಢಪಡಿಸಿದೆ.
ಜಿಲ್ಲೆಯಲ್ಲಿ ಶನಿವಾರ 33 ಜನ ಡಿಸ್ಚಾರ್ಜ್ ಆಗಿದ್ದು, ಅದರಲ್ಲಿ ಪಿ 858, ಪಿ 941, ಪಿ 981, ಪಿ 985, ಪಿ 1665, ಪಿ 2059, ಪಿ 2060, ಪಿ 2061, ಪಿ 2062, ಪಿ 2063, ಪಿ 2064, ಪಿ 2209, ಪಿ 2211, ಪಿ 2212, ಪಿ 2213, ಪಿ 2214, ಪಿ 2215, ಪಿ 2217, ಪಿ 2310, ಪಿ 2314, ಪಿ 2315, ಪಿ 2317, ಪಿ 2318, ಪಿ 2320, ಪಿ 2523, ಪಿ 2524, ಪಿ 2525, ಪಿ 2526, ಪಿ 2527, ಪಿ 2530, ಪಿ 2531, ಪಿ 2532 ಮತ್ತು ಪಿ 2533 ರೋಗಿಗಳು ಸೇರಿದ್ದಾರೆ.
ಜಿಲ್ಲೆಯಲ್ಲಿ ಈಗ ಸೋಂಕಿತರ ಸಂಖ್ಯೆ ಈಗ 215 ಆದಂತಾಗಿದೆ. ಒಟ್ಟು 6 ಜನ ಸಾವನ್ನಪ್ಪಿದ್ದರೆ ಒಟ್ಟು 74 ಮಂದಿ ಡಿಸ್ಚಾರ್ಜ್ ಆಗಿದ್ದು, ಇನ್ನೂ 135 ಪ್ರಕರಣಗಳು ಸಕ್ರೀಯವಾಗಿವೆ ಎಂದು ಆರೋಗ್ಯ ಇಲಾಖೆ ದೃಢಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ