ಊರವರಿಂದಲೇ ಕಡಲ್ಕೊರೆತ ತಡೆಗೆ ಪ್ರಯತ್ನ

ಸ್ವಂತ ಶ್ರಮದಡಿ 200 ಮಂದಿಯಿಂದ ತಡೆಗೋಡೆ ನಿರ್ಮಾಣ

Team Udayavani, Jun 8, 2020, 5:30 AM IST

ಊರವರಿಂದಲೇ ಕಡಲ್ಕೊರೆತ ತಡೆಗೆ ಪ್ರಯತ್ನ

ಮಹಾನಗರ: ಪ್ರತಿ ವರ್ಷ ಮಳೆಗಾಲದಲ್ಲಿ ಈ ಊರಿಗೆ ಕಡಲ್ಕೊರೆತದ್ದೇ ಭೀತಿ. ಕಡಲ್ಕೊರೆತ ತಡೆಗೆ ಶಾಶ್ವತ ಪರಿಹಾರ ನೀಡುವಂತೆ ನಿತ್ಯ ಜನಪ್ರತಿನಿಧಿಗಳ, ಅಧಿಕಾರಿಗಳ ಕಚೇರಿಗೆ ಅಲೆದಿದ್ದು ಬಂತೇ ಹೊರತು ಪ್ರಯೋಜನವಾಗಿಲ್ಲ. ಕೊನೆಗೂ ಆಳುವ ವರ್ಗದಿಂದ ಪರಿಹಾರ ಮರೀಚಿಕೆ ಎಂದರಿತ ಈ ಊರವರು ಇದೀಗ ಸ್ವಂತ ಶ್ರಮದಿಂದ ಕಡಲ್ಕೊರೆತ ತಡೆಯುವುದಕ್ಕೆ ಮುಂದಾಗಿದ್ದಾರೆ.

ಮಂಗಳೂರು ಹೊರ ವಲಯದ ಚಿತ್ರಾಪುರ ಗ್ರಾಮದ ಜನ ತೆ ಕಡಲ್ಕೊರೆತದಿಂದಾಗಿ ಜೀವನಾಧಾರವಾಗಿದ್ದ ತೆಂಗಿನ ಮರಗಳು ಸಹಿ ತ ಹಲವು ವಸ್ತು-ಬೆಳೆಗಳನ್ನು ಕಳೆದುಕೊಂಡಿದ್ದಾರೆ. ಕಡಲ್ಕೊರೆತ ತೀವ್ರವಾಗಿ ಎಲ್ಲಿ ಸೂರು ಕಳೆದುಕೊಳ್ಳುವೆವೋ ಎಂಬ ಆತಂಕ ಸ್ಥಳೀಯರದ್ದು. ಪ್ರತಿ ವರ್ಷ ಜನಪ್ರತಿನಿಧಿಗಳು, ಅಧಿಕಾರಿಗಳಿಗೆ ತಮ್ಮ ಸಮಸ್ಯೆಯನ್ನು ಹೇಳಿಕೊಂಡಿದ್ದಾರೆ. ಆದರೆ ಯಾರೂ ಈ ಕಡೆ ಗಮನ ಹರಿಸಿಲ್ಲ. ಇದರಿಂದ ರೋಸಿ ಹೋದ ಊರವರು ಮಕ್ಕಳು, ಮಹಿಳೆಯರನ್ನು ಸೇರಿಸಿಕೊಂಡು ಸ್ವಂತ ಪರಿಶ್ರಮದಿಂದ ತಡೆಗೋಡೆ ನಿರ್ಮಾಣಕ್ಕೆ ಮುಂದಾಗಿದ್ದೇವೆ ಎನ್ನುತ್ತಾರೆ ಸ್ಥಳೀಯ ಮೀನುಗಾರರಾದ ಯೋಗೀಶ್‌ ಕಾಂಚನ್‌ ಬೈಕಂಪಾಡಿ.

ಕಳೆದ ವರ್ಷದ ಮಳೆಗಾಲದಿಂದ ಇಲ್ಲಿ ಕಡಲ್ಕೊರೆತ ಸಮಸ್ಯೆ ಹೆಚ್ಚಾಗುತ್ತಿದೆ. ಕಳೆದ ಮಳೆಗಾಲದಲ್ಲಿ ಮೊಗವೀರ ಸಭಾಕ್ಕೆ ಒಳಪಟ್ಟಿದ್ದ 350 ಅಡಿ ಆವರಣ ಗೋಡೆ, ಜಾಗ, ತೆಂಗಿನ ಮರಗಳು ಮೀನು ಒಣಗಿಸಲು ಬಳಸುವ ಚಾಪೆ ಮೊದ ಲಾದವು ಸಮುದ್ರ ಪಾಲಾಗಿದ್ದವು ಎಂದು ನೆನಪಿಸಿಕೊಳ್ಳುತ್ತಾರೆ ಗ್ರಾಮಸ್ಥರು.

200 ಮಂದಿಯಿಂದ ಶಿಫ್ಟ್‌ನಲ್ಲಿ ಕೆಲಸ
ಗ್ರಾಮದ ಸುಮಾರು 200ಕ್ಕೂ ಹೆಚ್ಚು ಮಂದಿ ಬೆಳಗ್ಗೆ, ಸಂಜೆ ತಲಾ 100 ಮಂದಿ ಯಂತೆ ಎರಡು ಶಿಫ್ಟ್‌ನಲ್ಲಿ ಕೆಲಸ ಮಾಡಿ ತಡೆಗೋಡೆ ನಿರ್ಮಾಣ ಮಾಡುತ್ತಿದ್ದಾರೆ. ಜೆಸಿಬಿ ಸಹಾಯದಿಂದ ಗುಂಡಿ ತೆಗೆದು ಅದರಲ್ಲಿ ಜಂಬೋ ಗೋಣಿಗೆ ಮರಳು ತುಂಬಿಸಿಡುತ್ತಾರೆ. ಅನಂತರ ಅದರ ಮೇಲೆ ಸಾಮಾನ್ಯ ಪ್ಲಾಸ್ಟಿಕ್‌ ಗೋಣಿಯಲ್ಲಿ ಮರಳು ತುಂಬಿ ತಡೆಗೋಡೆ ನಿರ್ಮಾಣ ಮಾಡುತ್ತಿದ್ದಾರೆ. ಈಗಾಗಲೇ ಲಕ್ಷಾಂತರ ರೂ. ಖರ್ಚಾಗಿದೆ ಎನ್ನುವುದು ಊರವರ ಮಾತು.

 ತಾತ್ಕಾ ಲಿಕ ತಡೆಗೋಡೆ ನಿರ್ಮಾಣ
ಕಳೆದ ವರ್ಷದಿಂದ ಕಡಲ್ಕೊರೆತ ಶುರುವಾಗಿದೆ. ಈ ಬಗ್ಗೆ ಜನಪ್ರತಿನಿಧಿಗಳ ಗಮನಕ್ಕೆ ತಂದಿದ್ದೇವೆ. ಮುಂದಿನ ವರ್ಷ ಮಾಡಿಕೊಡುತ್ತೇವೆ ಎಂದಿದ್ದಾರೆ. ಆದರೆ, ಮಳೆ ಶುರುವಾದರೂ ಯಾರೂ ಗಮನ ಹರಿಸಿಲ್ಲ. ಹೀಗಾಗಿ ಊರಿನವರೇ ಸೇರಿಕೊಂಡು ತಾತ್ಕಾಲಿಕ ಪರಿಹಾರ ಕಂಡುಕೊಳ್ಳಲು ತಡೆಗೋಡೆ ನಿರ್ಮಾಣ ಮಾಡಲು ಆರಂಭಿಸಿದ್ದೇವೆ.
 - ಮಾಧವ ಸುವರ್ಣ,
ಅಧ್ಯಕ್ಷರು, ಪಣಂಬೂರು ಮಹಾಸಭೆ

ಟಾಪ್ ನ್ಯೂಸ್

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Vitla ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಇಬ್ಬರಿಗೆ ಗಾಯ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Road Mishap ಬೈಕ್‌ ಅಪಘಾತದ ಗಾಯಾಳು ಸಾವು

Road Mishap ಬೈಕ್‌ ಅಪಘಾತದ ಗಾಯಾಳು ಸಾವು

Road Mishap ಬೈಕ್‌-ಸ್ಕೂಟರ್‌ ಢಿಕ್ಕಿ; ಮೂವರಿಗೆ ಗಾಯ

Road Mishap ಬೈಕ್‌-ಸ್ಕೂಟರ್‌ ಢಿಕ್ಕಿ; ಮೂವರಿಗೆ ಗಾಯ

Mangaluru ಮನೆಯ ಬೀಗ ಮುರಿದು ಚಿನ್ನಾಭರಣ ಕಳವು

Mangaluru ಮನೆಯ ಬೀಗ ಮುರಿದು ಚಿನ್ನಾಭರಣ ಕಳವು

Mangaluru ಸಂಶಯಾಸ್ಪದ ವರ್ತನೆ: ಯುವಕ ಪೊಲೀಸರ ವಶಕ್ಕೆ

Mangaluru ಸಂಶಯಾಸ್ಪದ ವರ್ತನೆ: ಯುವಕ ಪೊಲೀಸರ ವಶಕ್ಕೆ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.