ದೇಗುಲ ಆರಂಭಕ್ಕೆ ಬಾರದ ಮಾರ್ಗಸೂಚಿ
Team Udayavani, Jun 8, 2020, 7:16 AM IST
ಬೀದರ: ಲಾಕ್ಡೌನ್ನಿಂದ ಕಳೆದ ಮೂರು ತಿಂಗಳಿಂದ ಬಾಗಿಲು ಮುಚ್ಚಿದ್ದ ಧಾರ್ಮಿಕ ಕೇಂದ್ರಗಳು ಸೋಮವಾರದಿಂದ ತೆರೆಯಲಿದ್ದು, ಭಕ್ತಾದಿಗಳಿಗೆ ದೇವರ ದರ್ಶನ ಲಭ್ಯವಾಗಲಿದೆ.
ಆದರೆ, ಗಡಿ ಜಿಲ್ಲೆ ಬೀದರನಲ್ಲಿ ದತ್ತಿ ಇಲಾಖೆ ವ್ಯಾಪ್ತಿಯ ದೇಗುಲಗಳಲ್ಲಿ ಮಾತ್ರ ಭಕ್ತರ ದರ್ಶನಕ್ಕೆ ಸಿದ್ಧತೆ ಮಾಡಿಕೊಂಡಿರುವುದು ಕಂಡು ಬಂದಿಲ್ಲ. ಕೋವಿಡ್ ಸೋಂಕು ತಡೆಗೆ ಸರ್ಕಾರ ಲಾಕ್ ಡೌನ್ ಘೋಷಿಸಿದ್ದರಿಂದ ಕಳೆದ ಮೂರು ತಿಂಗಳಿಂದ ಮಠ, ಮಂದಿರ, ಚರ್ಚ್, ದರ್ಗಾ ಸೇರಿದಂತೆ ಪ್ರಾರ್ಥನಾ ಮಂದಿರಗಳಲ್ಲಿ ಭಕ್ತರಿಗೆ ಪ್ರವೇಶ ನಿಷೇಧಿಸಲಾಗಿತ್ತು. ಇದೀಗ ಲಾಕ್ ಡೌನ್ ತೆರವುಗೊಳಿಸಿದ ಹಿನ್ನಲೆಯಲ್ಲಿ ಜೂ. 8ರಿಂದ ದರ್ಶನಕ್ಕೆ ಅವಕಾಶ ಕಲ್ಪಿಸಿರುವ ಸರ್ಕಾರ, ದರ್ಶನ ವೇಳೆ ಕೊರೊನಾ ನಿಯಂತ್ರಣಕ್ಕಾಗಿ ದತ್ತಿ ಇಲಾಖೆಯ ಮಾರ್ಗಸೂಚಿಗಳನ್ನು ಅನುಸರಿಸಬೇಕೆಂದು ಕಟ್ಟುನಿಟ್ಟಿನ ಸೂಚನೆ ನೀಡಿದೆ. ಜಾತ್ರೆ, ವಿಶೇಷ ಪೂಜೆ ಮತ್ತು ಇತರ ಸೇವೆಗಳನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ.
ಆದರೆ, ನಗರದ ನರಸಿಂಹ ಝರಣಾ, ಪಾಪನಾಶಿನಿ ಸೇರಿದಂತೆ ಜಿಲ್ಲೆಯ ವಿವಿಧ ಧಾರ್ಮಿಕ ಸ್ಥಳಗಳಲ್ಲಿ ಈವರೆಗೆ ಮಾರ್ಗಸೂಚಿಗಳಂತೆ ಯಾವುದೇ ವ್ಯವಸ್ಥೆ ಮಾಡಿಕೊಂಡಿಲ್ಲ. ಅಧಿಕಾರಿಗಳ ಮಾಹಿತಿ ಪ್ರಕಾರ ಈವರೆಗೆ ದತ್ತಿ ಇಲಾಖೆಯಿಂದ ಯಾವುದೇ ಮಾರ್ಗಸೂಚಿಯೇ ಕೈ ಸೇರಿಲ್ಲ. ಮೇಲಾಧಿಕಾರಿಗಳ ಆದೇಶ, ಮಾಹಿತಿಗಾಗಿ ಧಾರ್ಮಿಕ ಕೇಂದ್ರಗಳಲ್ಲಿ ಭಕ್ತರು ಸಾಮಾಜಿಕ ಅಂತರದಲ್ಲಿ ಪ್ರವೇಶಿಸಲು ಅನುಕೂಲವಾಗುವಂತೆ ವ್ಯವಸ್ಥೆ, ಥರ್ಮಲ್ ಸ್ಕ್ರೀನಿಂಗ್ ಸೇರಿದಂತೆ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು. ಆದರೆ, ಸದ್ಯ ಅಂಥ ಯಾವುದೇ ವ್ಯವಸ್ಥೆಗಳೇ ಇಲ್ಲ. ಬೀದರ ಗಡಿ ಜಿಲ್ಲೆ ಆಗಿರುವುದರಿಂದ ಮಹಾರಾಷ್ಟ್ರ ಮತ್ತು ತೆಲಂಗಾಣದ ಭಕ್ತರು ಆಗಮಿಸುವ ಹಿನ್ನಲೆಯಲ್ಲಿ ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
MUST WATCH
ಹೊಸ ಸೇರ್ಪಡೆ
Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ
ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್
Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ