ಸಂಗಾಪೂರ ಕೆರೆ ದುರಸ್ತಿಗೆ ಮುಂದಾದ ರೈತರು
Team Udayavani, Jun 8, 2020, 2:25 PM IST
ಗಂಗಾವತಿ: ವಿಜಯನಗರ ಅರಸರ ಕಾಲದಲ್ಲಿ ನಿರ್ಮಿಸಿದ ತಾಲೂಕಿನ ಸಂಗಾಪೂರ ಲಕ್ಷ್ಮೀ ನಾರಾಯಣ ಕೆರೆ ಅಭಿವೃದ್ಧಿಗೆ ಅಚ್ಚುಕಟ್ಟು ಪ್ರದೇಶದ ರೈತರು ಮುಂದಾಗಿದ್ದಾರೆ.
ಸಂಗಾಪೂರ, ಹಿರೇಜಂತಗಲ್ ಮತ್ತು ಗಂಗಾವತಿ ಭಾಗದ ಸುಮಾರು 500 ಎಕರೆ ಪ್ರದೇಶದ ಭೂಮಿಗೆ ನೀರುಣಿಸುವ 45 ಎಕರೆ ಪ್ರದೇಶದ ಕೆರೆ ಅಭಿವೃದ್ಧಿಗೆ ಪ್ರತಿ ರೈತನ ಹತ್ತಿರ ಶಕ್ತ್ಯಾನುಸಾರ ಹಣ ಸಂಗ್ರಹ ಮಾಡಲಾಗುತ್ತಿದೆ. ವಿಜಯನಗರ ಕಾಲುವೆ ನೀರು ಕೊನೆ ಭಾಗದ ರೈತರಿಗೆ ತಲುಪಬೇಕು ಎಂಬ ಉದ್ದೇಶದಿಂದ ವಿಜಯನಗರದ ಅರಸರು ಸಂಗಾಪೂರದಲ್ಲಿ ಕೆರೆ ನಿರ್ಮಿಸಿದ್ದಾರೆ. ಹಲವು ವರ್ಷಗಳಿಂದ ಈ ಕೆರೆಯನ್ನು ಕೆಲವರು ಒತ್ತುವರಿ ಮಾಡಿದ್ದರು. ಇದನ್ನು ವಿರೋಧಿಸಿ ಸ್ಥಳೀಯರು ಹೋರಾಟ ಮಾಡಿ ಒತ್ತುವರಿ ತೆರೆವುಗೊಳಿಸಿದ್ದರು. ಹಲವು ವರ್ಷಗಳಿಂದ ಕೆರೆಯಲ್ಲಿ ಹೂಳು ಶೇಖರಣೆಯಾಗಿದ್ದು ಗಿಡಗಂಟೆಗಳು ಬೆಳೆದಿರುವುದರಿಂದ ನೀರು ಸಂಗ್ರಹ ಕಡಿಮೆಯಾಗುತ್ತಿದೆ. ಕೆರೆಯಲ್ಲಿದ್ದ ಮಣ್ಣನ್ನು ಕೆಲವರು ಅಕ್ರಮವಾಗಿ ತೆಗೆದುಕೊಂಡು ಹೋಗುವ ಮೂಲಕ ಕೆರೆಯ ಅಸ್ತಿತ್ವಕ್ಕೆ ಧಕ್ಕೆಯುಂಟು ಮಾಡುತ್ತಿದ್ದಾರೆ. ಕೆರೆಯ ಒಡ್ಡಿನ ಹತ್ತಿರ ಮಣ್ಣಿನ ಗಣಿಗಾರಿಕೆ ಮಾಡುವ ಮೂಲಕ ಸ್ವಾರ್ಥಕ್ಕಾಗಿ ಮಣ್ಣು ಮಾರಾಟ ಮಾಡುವವರ ವಿರುದ್ಧ ಸ್ಥಳೀಯರು ಗಣಿ ಭೂವಿಜ್ಞಾನ ಇಲಾಖೆ ಪೊಲೀಸರು ಮತ್ತು ಕಂದಾಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ.
ಸಂಗಾಪೂರ ಲಕ್ಷ್ಮೀ ನಾರಾಯಣ ಕೆರೆ ಪುರಾತನ ಕೆರೆಯಾಗಿದೆ. ವಿಜಯನಗರ ಕಾಲುವೆ ನೀರು ಇಲ್ಲಿ ಸಂಗ್ರಹವಾಗಿ ಅಚ್ಚುಕಟ್ಟು ಪ್ರದೇಶದ ಸುಮಾರು 500 ಎಕರೆ ಭೂಮಿಗೆ ನೀರುಣಿಸಲಾಗುತ್ತಿದೆ. ಈ ಹಿಂದೆ ಕೆರೆ ಒತ್ತುವರಿ ತೆರವುಗೊಳಿಸಲಾಗಿದೆ. ಕೆಲವರು ಕೆರೆಯ ಮಣ್ಣನ್ನು ಅಕ್ರಮವಾಗಿ ಸಾಗಿಸುತ್ತಿದ್ದು, ಇಲಾಖೆಯವರಿಗೆ ತಿಳಿಸಿದರೂ ಪ್ರಯೋಜನವಾಗಿಲ್ಲ. ಈ ಕೆರೆಯ ಹೆಸರಿನಲ್ಲಿ ಬಿಲ್ ಎತ್ತುವಳಿ ಮಾಡಿರುವ ಕುರಿತು ದೂರುಗಳಿದ್ದು, ತನಿಖೆ ನಡೆಸಬೇಕಿದೆ. ವಿಜಯನಗರ ಕಾಲುವೆಗಳ ಶಾಶ್ವತ ದುರಸ್ತಿ ಕಾರ್ಯ ನಡೆಯುತ್ತಿದ್ದು, ಸಂಗಾಪೂರ ಕೆರೆಯನ್ನು ಇದರಲ್ಲಿ ಸೇರ್ಪಡೆ ಮಾಡಬೇಕು. ಸದ್ಯ ರೈತರೇ ಸ್ವಚ್ಛತಾ ಕಾರ್ಯ ಮಾಡಲು ನಿರ್ಧರಿಸಿದ್ದಾರೆ.-ಸುಂದರರಾಜ್, ಅಧ್ಯಕ್ಷರು ಶ್ರೀಲಕ್ಷ್ಮೀ ನಾರಾಯಣ ಕೆರೆ ಅಭಿವೃದ್ಧಿ ಕಮಿಟಿ
-ಕೆ. ನಿಂಗಜ್ಜ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi: ಮಳೆಗಾಗಿ ಪ್ರಾರ್ಥಿಸಿ ಕಪ್ಪೆಗಳಿಗೆ ಮದುವೆ ಮಾಡಿದ ಗ್ರಾಮಸ್ಥರು…
Congress ಸರಕಾರದಿಂದ ದಲಿತರ ಮತ ಮತ್ತು ಯೋಜನೆ ದುರುಪಯೋಗ: ನಾರಾಯಣಸ್ವಾಮಿ
Koppal Lok Sabha Constituency: ಹಿಟ್ನಾಳ್ಗೆ ಹೊಸ ಮುಖ ಡಾ| ಕ್ಯಾವಟರ್ ಸವಾಲು
Koppala; ವಿದೇಶಿ ನಾಯಕರು ಮೋದಿ ಬೇಕೆಂದು ಸ್ವಾಗತ ಮಾಡಿದ್ದಾರೆ: ಎ ನಾರಾಯಣಸ್ವಾಮಿ
ಜನ ಮೋದಿ ಮೋದಿ ಎಂದರೆ ಕಾಂಗ್ರೆಸ್ ಗೆ ಭೇದಿ ಜಾಸ್ತಿಯಾಗುತ್ತೆ ಅದಕ್ಕೆ ಚೆಂಬು ಬಿಡುತ್ತಿಲ್ಲ
MUST WATCH
ಹೊಸ ಸೇರ್ಪಡೆ
Panaji: ದಾರಿ ಮಧ್ಯೆ ಹೊತ್ತಿ ಉರಿದ ಟ್ರಕ್… 32 ಲಕ್ಷ ಮೌಲ್ಯದ ಸೊತ್ತು ನಷ್ಟ
Belagavi; ಭಿಕ್ಷೆ ರೀತಿಯಲ್ಲಿ ಸಿಎಂ ಬರ ಪರಿಹಾರ ನೀಡಿದ್ದಾರೆ: ವಿಜಯೇಂದ್ರ ಆಕ್ರೋಶ
Tollywood: ʼಫ್ಯಾಮಿಲಿ ಸ್ಟಾರ್ʼ ಸೋಲಿನ ಬಳಿಕ ಹೊಸ ಸಿನಿಮಾ ಅನೌನ್ಸ್ ಮಾಡಿದ ದೇವರಕೊಂಡ
ಹುನಗುಂದ: ಸಾಮೂಹಿಕ ವಿವಾಹದಿಂದ ದುಂದುವೆಚ್ಚಕ್ಕೆ ಕಡಿವಾಣ
Love and Care: ಪ್ರೀತಿ ಹಿಂದಿರುಗಿಸಲು ಅಂಜಿಕೆಯೇಕೆ…