2028ರ ಒಲಿಂಪಿಕ್ಸ್‌ನಲ್ಲಿ ಭಾರತ ಟಾಪ್‌-10: ಸಚಿವ ರಿಜಿಜು


Team Udayavani, Jun 8, 2020, 8:35 PM IST

2028ರ ಒಲಿಂಪಿಕ್ಸ್‌ನಲ್ಲಿ ಭಾರತ ಟಾಪ್‌-10: ಸಚಿವ ರಿಜಿಜು

ಹೊಸದಿಲ್ಲಿ: ಎಂಟು ವರ್ಷಗಳ ಬಳಿಕ, ಅಂದರೆ 2028ರ ಒಲಿಂಪಿಕ್ಸ್‌ ಪದಕ ಪಟ್ಟಿಯಲ್ಲಿ ಟಾಪ್‌-10 ಸ್ಥಾನ ಅಲಂಕರಿಸುವುದು ಭಾರತದ ಯೋಜನೆಯಾಗಿದ್ದು, ಇದಕ್ಕೆ ಈಗಿನಿಂದಲೇ ಸಿದ್ಧತೆ ಆರಂಭಗೊಳ್ಳಬೇಕಿದೆ ಎಂದು ಕೇಂದ್ರ ಕ್ರೀಡಾ ಸಚಿವ ಕಿರಣ್‌ ರಿಜಿಜು  ಹೇಳಿದ್ದಾರೆ.

ಟಿಟಿ ಆಟಗಾರ್ತಿ ಮಣಿಕಾ ಬಾತ್ರಾ ಜತೆಗಿನ ಇನ್‌ಸ್ಟಾಗ್ರಾಮ್‌ ಲೈವ್‌ ಕಾರ್ಯಕ್ರಮದಲ್ಲಿ ಅವರು ಮಾತಾಡುತ್ತಿದ್ದರು.”2024ರ ಒಲಿಂಪಿಕ್ಸ್‌ ಎನ್ನುವುದು ಭಾರತದ ಪಾಲಿಗೆ ಕೇವಲ ಮಧ್ಯಂತರ ಅವಧಿಯ ಗುರಿ. ಈ ಪ್ಯಾರಿಸ್‌ ಕೂಟದಲ್ಲಿ ಭಾರತ ಗರಿಷ್ಠ ಪದಕಗಳನ್ನು ಗೆಲ್ಲುವ ಯೋಜನೆ ಹೊಂದಿರುತ್ತದೆ. ಆದರೆ 2028ರಲ್ಲಿ ಇದು ದೀರ್ಘ‌ ಕಾಲದ ಗುರಿ ಆಗಿರುತ್ತದೆ. ಇದಕ್ಕೆ ಈಗಿನಿಂದಲೇ ಸಿದ್ಧತೆ ಆರಂಭಗೊಳ್ಳಬೇಕಿದೆ’ ಎಂದು ಸಚಿವರು ಹೇಳಿದರು.

“ಇಂದಿನ ಕಿರಿಯ ಕ್ರೀಡಾಪಟುಗಳೇ ನಮ್ಮ ಮುಂದಿನ ಚಾಂಪಿಯನ್ಸ್‌. ಇದಕ್ಕೆ ದೊಡ್ಡ ಮಟ್ಟದಲ್ಲೇ ತಯಾರಿ ನಡೆಯಬೇಕಿದೆ. 2024ರ ಒಲಿಂಪಿಕ್ಸ್‌ ಫ‌ಲಿತಾಂಶ ಇದಕ್ಕೊಂದು ದಿಕ್ಸೂಚಿ ಆಗಲಿದೆ. ನನ್ನ ಮಾತನ್ನು ಬರೆದಿಡಿ, 2028ರ ಲಾಸ್‌ ಏಂಜಲೀಸ್‌ ಒಲಿಂಪಿಕ್ಸ್‌ನಲ್ಲಿ ಭಾರತ ಖಂಡಿತ ಅಗ್ರ 10 ಸ್ಥಾನಿಯಾಗಿ ಮೂಡಿಬರಲಿದೆ’ ಎಂದು ರಿಜಿಜು ಭರವಸೆಯಿಂದ ನುಡಿದರು.

“ವಿಶ್ವ ಚಾಂಪಿಯನ್‌ ಒಬ್ಬರನ್ನು ರೂಪಿಸಲು ನಾಲ್ಕರಿಂದ ಎಂಟು ವರ್ಷ ತಗಲುತ್ತದೆ. ಇದಕ್ಕೆ ಈಗಿನಿಂದಲೇ ಬುನಾದಿ ಹಾಕಬೇಕಿದೆ. ವೃತ್ತಿಪರ ಮಟ್ಟದಲ್ಲಿ ಜೂನಿಯರ್‌ ಕೋಚಿಂಗ್‌ ಆರಂಭಿಸಿದರೆ ಧನಾತ್ಮಕ ಪರಿಣಾಮವನ್ನು ಕಾಣಲು ಖಂಡಿತ ಸಾಧ್ಯವಿದೆ’ ಎಂದು ಕಿರಣ್‌ ರಿಜಿಜು ಹೇಳಿದರು.

 

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

1-qeweqweqwe

IPL; ಹೈದರಾಬಾದ್ ಎದುರು ಚೆನ್ನೈ ಗೆ 78 ರನ್‌ಗಳ ಅಮೋಘ ಜಯ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.