ಆನ್‌ಲೈನ್‌ ತರಗತಿಯ ಅನಾಹುತ


Team Udayavani, Jun 9, 2020, 1:06 AM IST

ಆನ್‌ಲೈನ್‌ ತರಗತಿಯ ಅನಾಹುತ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಲಾಕ್‌ಡೌನ್‌ ನಂತರದಿಂದ ದೇಶಾದ್ಯಂತ ಶಾಲೆ ಕಾಲೇಜುಗಳು ಮುಚ್ಚಿರುವುದರಿಂದ, ವಿದ್ಯಾರ್ಥಿಗಳ ಕಥೆಯೇನು ಎನ್ನುವ ಪ್ರಶ್ನೆ ಎದುರಾಗುತ್ತಿದೆ.

ಈ ಪ್ರಶ್ನೆಗೆ ಸದ್ಯಕ್ಕೆ ಹಲವು ಶಾಲೆಗಳು ಹುಡುಕಿಕೊಂಡಿರುವ ಮಾರ್ಗವೆಂದರೆ ಆನ್‌ಲೈನ್‌ ತರಗತಿಗಳು.

ಆದರೆ, ಪೂರ್ವತಯಾರಿಯಿಲ್ಲದೇ, ಮಕ್ಕಳ ಬಳಿ ಅಗತ್ಯ ಸೌಲಭ್ಯಗಳು ಇದೆಯೋ ಇಲ್ಲವೋ ಎನ್ನುವುದನ್ನೂ ಪರಿಗಣಿಸದೇ ಆರಂಭಿಸಿರುವ ಆನ್‌ಲೈನ್‌ ತರಗತಿಗಳು ಅನಾಹುತಗಳಿಗೂ ಕಾರಣವಾಗಬಲ್ಲದು ಎನ್ನುವುದಕ್ಕೆ ಕೇರಳದ ಘಟನೆ ಸಾಕ್ಷಿಯಾಗುತ್ತಿದೆ.

ಇತ್ತೀಚೆಗಷ್ಟೇ ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿನ 14 ವರ್ಷದ ವಿದ್ಯಾರ್ಥಿನಿಯೊಬ್ಬಳು ಶಾಲೆಯ ಆನ್‌ಲೈನ್‌ ತರಗತಿಯನ್ನು ತಪ್ಪಿಸಿಕೊಂಡದ್ದಕ್ಕಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.

ಕೇರಳದಲ್ಲಿ ಟಿವಿ ಹಾಗೂ ಫೋನ್‌ಗಳ ಮೂಲಕ ಆನ್‌ಲೈನ್‌ ಕ್ಲಾಸುಗಳು ನಡೆಯುತ್ತಿವೆ. ಆದರೆ ಆ ಬಾಲಕಿಯ ಮನೆಯಲ್ಲಿ ಟಿ.ವಿ. ಕೆಟ್ಟು ಹೋಗಿತ್ತಂತೆ, ಸ್ಮಾರ್ಟ್‌ಫೋನ್‌ ಕೂಡ ಇರಲಿಲ್ಲವಂತೆ. ಟಿ.ವಿ ರಿಪೇರಿ ಮಾಡಿಸಲು ಹಣವೂ ಇರಲಿಲ್ಲ ಎಂದು ಆಕೆಯ ತಂದೆ ಅಸಹಾಯಕರಾಗಿ ಹೇಳುತ್ತಾರೆ.

ನಮ್ಮಲ್ಲೂ ಈಗಾಗಲೇ ಅನೇಕ ಖಾಸಗಿ ಶಾಲೆಗಳು ಆನ್‌ಲೈನ್‌ ತರಗತಿಗಳನ್ನು ಆರಂಭಿಸಿವೆ ಮತ್ತು ಆರಂಭಿಸುವುದಕ್ಕೆ ಸಜ್ಜಾಗುತ್ತಿವೆ. ಇಂಥ ಹೊತ್ತಲ್ಲಿ ಕೇರಳ ಘಟನೆ ನಮಗೆ ನಿಸ್ಸಂಶಯವಾಗಿಯೂ ಎಚ್ಚರಿಕೆಯ ಗಂಟೆಯಾಗಲೇಬೇಕಿದೆ. ಖಾಸಗಿ ಶಾಲೆಗಳಲ್ಲಿ ಮಕ್ಕಳನ್ನು ಓದಿಸುತ್ತಿರುವವರೆಲ್ಲ ಸ್ಥಿತಿವಂತರಾಗಿರುತ್ತಾರೆ ಎಂದೇನೂ ಅಲ್ಲ.

ಅನೇಕರು ಕಷ್ಟಪಟ್ಟು ದಿನರಾತ್ರಿ ದುಡಿದು ಮಕ್ಕಳನ್ನು ಶಾಲೆಗೆ ಕಳುಹಿಸುತ್ತಿರುತ್ತಾರೆ. ಈಗ ಲಾಕ್‌ಡೌನ್‌ ಸಮಯದಲ್ಲಿ ಅನೇಕ ಕುಟುಂಬಗಳು ಆರ್ಥಿಕವಾಗಿಯೂ ಪರಿತಪಿಸುತ್ತಿವೆ. ಇಂಥ ಸಂದಿಗ್ಧ ಸ್ಥಿತಿಯಲ್ಲಿ ಮಕ್ಕಳಿಗೆ ಆನ್‌ಲೈನ್‌ ತರಗತಿ ಕೊಡಿಸುವುದು ಎಲ್ಲರಿಗೂ ಸಾಧ್ಯವಿಲ್ಲ. ಎಲ್ಲರ ಮನೆಯಲ್ಲೂ ಲ್ಯಾಪ್‌ಟಾಪ್‌, ವೇಗದ 4ಜಿ ಅಂತರ್ಜಾಲ ಸಂಪರ್ಕವಿರುವ ಸ್ಮಾರ್ಟ್‌ಫೋನ್‌ಗಳು ಇರುತ್ತವೆಯೇ?

ಒಂದು ಸ್ಮಾರ್ಟ್‌ಫೋನ್‌ಗೆ ಏನಿಲ್ಲವೆಂದರೂ 5 ಸಾವಿರಕ್ಕೂ ಅಧಿಕ ಬೆಲೆಯಿರುತ್ತದೆ. ಎರಡು-ಮೂರು ಮಕ್ಕಳಿರುವ ಕುಟುಂಬಗಳು ಏನು ಮಾಡಬೇಕು? ಎಲ್ಲಾ ಮಕ್ಕಳಿಗೂ ಆನ್‌ಲೈನ್‌ ತರಗತಿಗಳು ಆರಂಭವಾದರೆ ಎಲ್ಲರಿಗೂ ಪ್ರತ್ಯೇಕವಾಗಿ ಸ್ಮಾರ್ಟ್‌ಫೋನ್‌ ತಂದುಕೊಡಲು, ಅದಕ್ಕೆ ಡೇಟಾ ಪ್ಯಾಕ್‌ ಹಾಕಿಸಲು ಸಾಧ್ಯವೇನು?

ಇಷ್ಟು ಸಾಲದೆಂಬಂತೆ, ಕೆಲವು ಶಾಲೆಗಳಂತೂ ಎಲ್‌ಕೆಜಿ, ಯುಕೆಜಿಗೆ ಆನ್‌ಲೈನ್‌ ತರಗತಿ ಆರಂಭಿಸಿ ಪೋಷಕರಿಂದ ಹೆಚ್ಚಿನ ಶುಲ್ಕ ವಸೂಲಿ ಮಾಡುತ್ತಿರುವ ಸುದ್ದಿಗಳೂ ಬರುತ್ತಿವೆ. ಈ ಬಗ್ಗೆ ಶಿಕ್ಷಣ ಸಚಿವರೂ ಶಾಲೆಗಳಿಗೆ ಎಚ್ಚರಿಕೆ ನೀಡಿದ್ದಾರಾದರೂ, ಪರಿಸ್ಥಿತಿ ಸುಧಾರಿಸುವ ಲಕ್ಷಣ ಗೋಚರಿಸುತ್ತಿಲ್ಲ.

ಕೆಲವು ಶಾಲೆಗಳಂತೂ ಅವೈಜ್ಞಾನಿಕವಾಗಿ ದಿನವಿಡೀ ತರಗತಿ ನಡೆಸಿ ಮಕ್ಕಳಲ್ಲಿ ಮಾನಸಿಕ ಒತ್ತಡ ಹೆಚ್ಚಾಗುವಂತೆ ಮಾಡುತ್ತಿವೆ. ಈ ಎಲ್ಲಾ ಸಂಗತಿಗಳನ್ನು ಪರಿಗಣಿಸಿದಾಗ, ಸದ್ಯಕ್ಕೆ ಆನ್‌ಲೈನ್‌ ತರಗತಿಗಳಿಂದ ಲಾಭಕ್ಕಿಂತ ನಷ್ಟವೇ ಅಧಿಕವಿರುವುದು ಅರ್ಥವಾಗುತ್ತದೆ. ಹೀಗಾಗಿ, ಶಿಕ್ಷಣ ಸಚಿವರು ಯಾವುದೇ ಕಾರಣಕ್ಕೂ ಖಾಸಗಿ ಶಿಕ್ಷಣ ಸಂಸ್ಥೆಗಳ ಒತ್ತಡಕ್ಕೆ ಒಳಗಾಗದೇ, ಮಕ್ಕಳ ಹಿತಚಿಂತನೆಯನ್ನು ಗಮನದಲ್ಲಿಟ್ಟುಕೊಂಡು ನೀತಿಗಳನ್ನು ರೂಪಿಸಲಿ.

ಒಂದು ವೇಳೆ ಯಾವುದಾದರೂ ಶಾಲೆ ವಿದ್ಯಾ ರ್ಥಿಗಳು ಹಾಗೂ ಪೋಷಕರ ಮೇಲೆ ಒತ್ತಡ ಹೇರುತ್ತಿರುವುದು ಪತ್ತೆಯಾದರೆ, ತ್ವರಿತವಾಗಿ ಆ ಶಾಲೆಗಳ ವಿರುದ್ಧ ಕ್ರಮಕೈಗೊಳ್ಳಲಿ. ಗೋವಿಂದೇಗೌಡರಂಥ ದೂರದೃಷ್ಟಿಯುಳ್ಳ ಶಿಕ್ಷಣ ಸಚಿವರು ಕುಳಿತ ಜಾಗದಲ್ಲಿ ತಾವು ಕುಳಿತಿದ್ದೇವೆ ಎನ್ನುವುದನ್ನು ಅವರು ಮರೆಯದಿರಲಿ. ಶಿಕ್ಷಣ ಸಂಸ್ಥೆಗಳೂ ಸಹ ತರಾತುರಿಯಲ್ಲಿ ನಿರ್ಧಾರಕ್ಕೆ ಬರಬಾರದು. ವಿದ್ಯಾರ್ಥಿ ಕುಟುಂಬಗಳ ಜತೆ ಮಾತುಕತೆ ನಡೆಸಿ, ಅವರ ಸ್ಥಿತಿಗತಿಯನ್ನು ಪರಿಗಣಿಸಿ ಮುಂದಿನ ನಡೆಯನ್ನು ಇಡುವುದೂ ಅತ್ಯಗತ್ಯ.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-eweweqwe

Voting:ಹಿರಿಯ ನಾಗರಿಕರೇ ಮಾದರಿ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಹಿರಿಯ ನಾಗರಿಕರಿಗೂ ಆರೋಗ್ಯ ವಿಮೆ: ದಿಟ್ಟ ನಿರ್ಧಾರ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

Editorial: ಸುದೀರ್ಘ‌ ಕಾಲ ನೀತಿಸಂಹಿತೆ: ಸೂಕ್ತ ಪರಾಮರ್ಶೆ ಅಗತ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.