ಆಸ್ತಿಕರ ಹೆಚ್ಚಳ ವಿರುದ್ಧ ಆಪ್‌ ಜನಾಂದೋಲನ


Team Udayavani, Jun 9, 2020, 6:16 AM IST

ಆಸ್ತಿಕರ ಹೆಚ್ಚಳ ವಿರುದ್ಧ  ಆಪ್‌ ಜನಾಂದೋಲನ

ಹುಬ್ಬಳ್ಳಿ: ಲಾಕ್‌ಡೌನ್‌ ಪರಿಣಾಮ ಜನರು ಸಾಕಷ್ಟು ತೊಂದರೆಗೊಳಗಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಸರಕಾರ ಆಸ್ತಿ ಕರ ಹೆಚ್ಚಿಸುವ ಮೂಲಕ ಜನರನ್ನು ಮತ್ತಷ್ಟು ಸಂಕಷ್ಟಕ್ಕೀಡು ಮಾಡಿದ್ದು, ಆಸ್ತಿ ಕರ ಹೆಚ್ಚಳ ವಿರುದ್ಧ ಜನಾಂದೋಲನ ರೂಪಿಸುವುದಾಗಿ ಆಪ್‌ ಪಕ್ಷದ ಜಿಲ್ಲಾಧ್ಯಕ್ಷ ಸಂತೋಷ ನರಗುಂದ ತಿಳಿಸಿದರು.

ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕ ಮಹಾನಗರ ಪಾಲಿಕೆ ಕಾಯ್ದೆ ಪ್ರಕಾರ ಪ್ರಸ್ತುತ ತೆರಿಗೆ ಮೊತ್ತದಲ್ಲಿ ಕಡಿತ ಅಥವಾ ಖೋತಾ ಮಾಡುವ ಅಧಿಕಾರ ಇದೆ. ಆದರೆ ರಾಜ್ಯ ಸರಕಾರ ಕೋವಿಡ್ ಬಿಕ್ಕಟ್ಟಿನ ನಡುವೆ ತೆರಿಗೆ ಹೆಚ್ಚಳ ಮಾಡಿರುವುದು ಅವೈಜ್ಞಾನಿಕ ಕ್ರಮವಾಗಿದೆ. ಈ ಕುರಿತು ಆಮ್‌ ಆದ್ಮಿ ಪಕ್ಷ ಪಾಲಿಕೆ ಹಾಗೂ ಸ್ಥಳೀಯ ಜನಪ್ರತಿನಿಧಿಗಳನ್ನು ಭೇಟಿ ಮಾಡಿ ತೆರಿಗೆ ಹೆಚ್ಚಿಸಿರುವುದನ್ನು ಹಿಂಪಡೆಯುವಂತೆ ಒತ್ತಾಯಿಸಲಾಗಿತ್ತು. ಆದರೂ ಈ ಬಗ್ಗೆ ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಹೀಗಾಗಿ ಜನಾಂದೋಲನ ರೂಪಿಸುವುದು ಅನಿವಾರ್ಯ ಎಂದರು.

ಲಾಕ್‌ಡೌನ್‌ ಸಂದರ್ಭದಲ್ಲಿ ಅನುಭವಿಸಿದ ಸಂಕಷ್ಟ ಕುರಿತು ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಅವರೊಂದಿಗೆ ಚರ್ಚಿಸಿ ತೆರಿಗೆ ಹೆಚ್ಚಳ ಹಿಂಪಡೆಯುವಂತೆ ಮನವಿ ಮಾಡಿದ್ದೆವು. ಈ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ತೆರಿಗೆ ಹೆಚ್ಚಳದ ನಿರ್ಧಾರ ಹಿಂಪಡೆಯವ ಕುರಿತು ಸಚಿವ ಸಂಪುಟದಲ್ಲಿ ನಿರ್ಧಾರ ಕೈಗೊಳ್ಳುವ ಆಶ್ವಾಸನೆ ನೀಡಿದ್ದರು. ಹೆಚ್ಚಳದ ಕುರಿತು ಸಾರ್ವಜನಿಕರ ಆಕ್ರೋಶಕ್ಕೆ ಬಾಗಿ ಕೇವಲ ಶೇ.5 ಕಡಿಮೆ ಮಾಡಿರುವುದು ಅಪಹಾಸ್ಯವಾಗಿದೆ. ಸಂಕಷ್ಟದ ಸಂದರ್ಭದಲ್ಲೂ ರಾಜ್ಯ ಸರಕಾರ ತೆರಿಗೆ ಹೆಚ್ಚಿಸುವ ನಿರ್ಧಾರ ಕೈಗೊಂಡಿರುವುದು ಜನ ಸಾಮಾನ್ಯರ ಕಾಳಜಿಯಿಲ್ಲ ಎಂಬುದು ಸ್ಪಷ್ಟವಾಗಿದೆ ಎಂದು ದೂರಿದರು.

ಮುಖಂಡ ವಿಕಾಸ ಸೊಪ್ಪಿನ ಮಾತನಾಡಿ, ಆರ್ಥಿಕ ಕುಸಿತದ ಸಂದರ್ಭದಲ್ಲಿ ರಾಜ್ಯ ಸರಕಾರ ಮಾಡಿದ ಅವೈಜ್ಞಾನಿಕ ಕಾರ್ಯವನ್ನು ಸ್ಥಳೀಯ ಶಾಸಕ ಅರವಿಂದ ಬೆಲ್ಲದ ಅವರು ಸಮರ್ಥಿಸಿರುವುದು ದುರದುಷ್ಟಕರ ಸಂಗತಿಯಾಗಿದೆ. ಜನಸಾಮಾನ್ಯರ ಸಂಕಷ್ಟಕ್ಕೆ ಆಮ್‌ಆದ್ಮಿ ಪಕ್ಷ ಸ್ಪಂದಿಸಿ ಧ್ವನಿ ಎತ್ತಿದ ನಂತರ ಮಾಜಿ ಮೇಯರ್‌, ಸದಸ್ಯರು ಜನಪರ ನಿಂತಿರುವುದು ಸಂತಸದ ವಿಚಾರ. ಈ ಕುರಿತು ಜಿಲ್ಲಾ ಉಸ್ತುವಾರಿ ಸಚಿವರು ಕೂಡಲೇ ತೆರಿಗೆ ಹೆಚ್ಚಳ ನಿರ್ಧಾರ ರದ್ದುಗೊಳಿಸದಿದ್ದರೆ ಹೋರಾಟ ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Lok Sabha Elections: ರಾಜ್ಯಕ್ಕೆ ಮೋದಿ ಆಗಮನ: ಇಂದು ನಾಲ್ಕು ಕಡೆ ಪ್ರಚಾರ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.