ಬೀದರ ಜಿಲ್ಲೆಗೆ “ಮಹಾ’ ಗಂಡಾಂತರ


Team Udayavani, Jun 9, 2020, 7:28 AM IST

ಬೀದರ ಜಿಲ್ಲೆಗೆ “ಮಹಾ’ ಗಂಡಾಂತರ

ಬೀದರ: ಮಹಾರಾಷ್ಟ್ರದ ನಂಟಿನಿಂದ ಬೀದರನಲ್ಲಿ ಆರ್ಭಟಿಸುತ್ತಿರುವ ಕೋವಿಡ್ ಸೋಂಕಿನಿಂದಾಗಿ ಮುಂಬರುವ ದಿನಗಳಲ್ಲಿ ಗಂಡಾಂತರ ಎದುರಾಗುವ ಸಾಧ್ಯತೆ ದಟ್ಟವಾಗಿದೆ. ಜಿಲ್ಲೆಯಲ್ಲಿ ಸೋಮವಾರ ಒಂದೇ ದಿನ ಅತಿ ಹೆಚ್ಚು 48 ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ ತ್ರಿಶತಕದತ್ತ ದಾಪುಗಾಲು ಹಾಕುತ್ತಿರುವುದು ಜಿಲ್ಲೆಯ ಜನರಲ್ಲಿ ಆತಂಕ ಹೆಚ್ಚಿಸಿದೆ.

ಸೋಮವಾರ ಪತ್ತೆಯಾಗಿರುವ ಹೊಸ ಪ್ರಕರಣಗಳಲ್ಲಿ ಒಂದು ಕೇಸ್‌ (ಪಿ-2968)ರ ಸಂಪರ್ಕ ಹೊರತುಪಡಿಸಿದರೆ ಉಳಿದ 47 ಸೋಂಕಿತರೆಲ್ಲರೂ ಮಹಾರಾಷ್ಟ್ರದ ಸಂಪರ್ಕವನ್ನೇ ಹೊಂದಿದ್ದಾರೆ. ದಿನ ಕಳೆದಂತೆ “ಮಹಾ’ ನಂಟಿನಿಂದ ಜಿಲ್ಲೆಗೆ ಹಾನಿ ಹೆಚ್ಚಾಗುತ್ತಿದೆ. ಮುಖ್ಯವಾಗಿ ಹಳ್ಳಿ ಹಳ್ಳಿಗಳಿಗೆ ಸೋಂಕು ವ್ಯಾಪಿಸುತ್ತಿರುವುದು ಆತಂಕವನ್ನುಂಟು ಮಾಡಿದೆ. ಮುಂಬಯಿ, ಪುಣೆಯಿಂದ ವಾಪಸ್‌ ಬಂದು ಕ್ವಾರಂಟೈನ್‌ನಲ್ಲಿರುವ ವಲಸೆ ಕಾರ್ಮಿಕರಲ್ಲಿ ಪಾಸಿಟಿವ್‌ ಪತ್ತೆಯಾಗುತ್ತಿವೆ. ಇದಲ್ಲದೇ ಕೆಲವರದ್ದು ಕ್ವಾರಂಟೈನ್‌ ಅವಧಿ ಮುಗಿಸಿ ಮನೆಗೆ ವಾಪಸಾದ ಬಳಿಕ ಟೆಸ್ಟಿಂಗ್‌ ವರದಿ ಬರುತ್ತಿರುವುದು ಸೋಂಕು ವ್ಯಾಪಿಸುವ ಆತಂಕ ಹೆಚ್ಚುತ್ತಿದೆ.

ಜಿಲ್ಲೆಯ ಬಸವಕಲ್ಯಾಣ ತಾಲೂಕಿಗೆ ಹೆಚ್ಚು ಕೋವಿಡ್ ವೈರಾಣು ಬಾಧಿಸಿದ್ದು, ತಾಲೂಕಿನ ದೇವಿ ತಾಂಡಾ ಒಂದರಲ್ಲೇ 17 ಪಾಸಿಟಿವ್‌ ಪತ್ತೆಯಾಗಿರುವುದು ಆ ಪ್ರದೇಶದಲ್ಲಿ ಭೀತಿ ಆವರಿಸುವಂತೆ ಮಾಡಿದೆ. ಬಸವಕಲ್ಯಾಣ ತಾಲೂಕಿನ ದೇವಿ ತಾಂಡಾ 17, ಹಿಪ್ಪಳಗಾಂವ 4, ತಮಗ್ಯಾಳ 2, ಜಾನಾಪುರ, ಹಿರಣಗಾಂವ್‌, ಓತಗಿ, ಲಾಡವಂತಿ, ಶಿರುರಿ ಮತ್ತು ಕೋಹಿನೂರನಲ್ಲಿ ತಲಾ 1 ಕೇಸ್‌ನಂತೆ ಒಟ್ಟು 29 ಪ್ರಕರಣಗಳು ವರದಿಯಾಗಿವೆ. ಹುಮನಾಬಾದ ಪಟ್ಟಣದ ಜನತಾ ನಗರದ 3, ತಾಲೂಕಿನ ಬೆನಚಿಂಚೋಳಿ 2, ಧುಮ್ಮನಸೂರ, ಸಿಂದಬಂದಗಿ, ಜಾಮನಗರದಲ್ಲಿ ತಲಾ 1 ಕೇಸ್‌ ಸೇರಿ 8 ಸೋಂಕಿತರು, ಕಮಲನಗರ ಪಟ್ಟಣದ 2, ತಾಲೂಕಿನ ಕೋಟಗ್ಯಾಳ, ಗಣೇಶಪುರ ಮತ್ತು ಬಸನಾಳ ಗ್ರಾಮದಲ್ಲಿ ತಲಾ 1 ಸೇರಿ ಒಟ್ಟು 5 ಪ್ರಕರಣಗಳು ಪತ್ತೆಯಾಗಿವೆ.

ಭಾಲ್ಕಿ ತಾಲೂಕಿನ ಕೇರೂರ 2, ಮಳಚಾಪುರದಲ್ಲಿ 1 ಸೇರಿ 3 ಕೇಸ್‌ ಹಾಗೂ ಚಿಟಗುಪ್ಪ ಪಟ್ಟಣದಲ್ಲಿ 3 ಪಾಸಿಟಿವ್‌ ಕಂಡು ಬಂದಿವೆ. ಹೊಸದಾಗಿ ಪತ್ತೆಯಾಗಿರುವ ಸೋಂಕಿತರಲ್ಲಿ 9 ಜನ ಮಕ್ಕಳು ಸೇರಿದ್ದಾರೆ. 31 ಜನ ಪುರುಷರಿದ್ದರೆ, 17 ಮಂದಿ ಮಹಿಳೆಯರಿದ್ದಾರೆ. ಜಿಲ್ಲೆಯಲ್ಲಿ ಈವರೆಗೆ 270 ಪ್ರಕರಣಗಳು ವರದಿಯಾದಂತೆ ಆಗಿದ್ದು, 97 ಜನ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಇನ್ನೂ 167 ಪ್ರಕರಣಗಳು ಸಕ್ರೀಯವಾಗಿವೆ ಎಂದು ಆರೋಗ್ಯ ಇಲಾಖೆಯ ಹೆಲ್ತ್‌ ಬುಲೆಟಿನ್‌ ದೃಢಪಡಿಸಿದೆ.

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.