ಅಭಿವೃದ್ಧಿ ಕಾಮಗಾರಿ ವೇಗ ಹೆಚ್ಚಳಕ್ಕೆ ಒತ್ತು: ಸಚಿವ ಬೈರತಿ
Team Udayavani, Jun 9, 2020, 9:12 AM IST
ಧಾರವಾಡ: ಕೋವಿಡ್ ಲಾಕ್ಡೌನ್ದಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತಗೊಂಡಿದ್ದು, ಇದೀಗ ರಾಜ್ಯದ 10 ಪಾಲಿಕೆಗಳ ವ್ಯಾಪ್ತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳ ವೇಗ ಹೆಚ್ಚಳಕ್ಕೆ ಒತ್ತು ನೀಡಲಾಗಿದೆ. ಅದಕ್ಕಾಗಿ ಸಿಎಂ ಬಳಿ ಪ್ರತಿ ಪಾಲಿಕೆಗೆ 150 ಕೋಟಿಯಂತೆ ಒಟ್ಟು 1500 ಕೋಟಿ ಬೇಡಿಕೆ ಸಲ್ಲಿಸಿರುವುದಾಗಿ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಹೇಳಿದರು.
ನಗರದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರಾಭಿವೃದ್ಧಿ ಇಲಾಖೆ ಕಾಮಗಾರಿಗಳನ್ನು ಅವಧಿಯೊಳಗೆ ಪೂರ್ಣಗೊಳಿಸುವಂತೆ, ಅಭಿವೃದ್ಧಿ ಕಾಮಗಾರಿಗಳ ವೇಗ ಹೆಚ್ಚಿಸುವಂತೆ ಈಗಾಗಲೇ ಸಭೆ ನಡೆಸಿ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದರು. ಸರ್ಕಾರದಿಂದ ಸ್ಮಾರ್ಟ್ ಸಿಟಿಗೆ 1000 ಕೋಟಿ, ಯುಜಿಡಿಗೆ 300 ಕೋಟಿ ನೀಡಿದ್ದು, ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ನಿರ್ಲಕ್ಷ್ಯ ಮಾಡುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.
ಹು-ಧಾ ಅಭಿವೃದ್ಧಿಗೆ ಒತ್ತು: ಹುಬ್ಬಳ್ಳಿಗೆ 1200 ಕೋಟಿ ವೆಚ್ಚದಲ್ಲಿ 24×7 ಕುಡಿಯುವ ನೀರು ಯೋಜನೆ ಸಿದ್ಧಗೊಂಡಿದ್ದು, ಆಡಳಿತಾತ್ಮಕ ಅನುಮೋದನೆ ನೀಡಿ, ಕಾಮಗಾರಿ ಆರಂಭಕ್ಕೆ ಸೂಚಿಸಲಾಗಿದೆ. ಬೆಂಗಳೂರಿಗೆ ಆದ್ಯತೆ ನೀಡಿದಂತೆ ಹುಬ್ಬಳ್ಳಿ-ಧಾರವಾಡ ಅಭಿವೃದ್ಧಿಗೂ ಹೆಚ್ಚು ಒತ್ತು ಕೊಡಲಾಗಿದೆ ಎಂದು ತಿಳಿಸಿದರು. ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಮಾಡಲ್ಲ. ಆದರೆ, ಅದನ್ನು ಹೇಗೆ ನಿರ್ವಹಣೆ ಮಾಡಬೇಕು ಎಂಬ ಬಗ್ಗೆ ಈಗಾಗಲೇ ಚರ್ಚಿಸಲಾಗಿದೆ ಎಂದ ಸಚಿವರು, ಆಸ್ತಿ ತೆರಿಗೆ ಹೆಚ್ಚಳ ಮಾಡುವುದು ಮೂರು ವರ್ಷಕ್ಕೊಮ್ಮೆ ಕಡ್ಡಾಯ. ಈ ಹಣವನ್ನು ಮೂಲಭೂತ ಸೌಕರ್ಯಗಳಿಗೆ ಬಳಸಲಾಗುವುದು ಎಂದರು.
ಶಾಸಕರಾದ ಅರವಿಂದ ಬೆಲ್ಲದ, ಅಮೃತ ದೇಸಾಯಿ, ಹುಡಾ ಅಧ್ಯಕ್ಷ ನಾಗೇಶ ಕಲಬುರ್ಗಿ ಪತ್ರಿಕಾಗೋಷ್ಠಿಯಲ್ಲಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ
Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ