ದೋರ್ಮೆಯಲ್ಲಿ ರಕ್ಷಣ ಬೇಲಿ ಇಲ್ಲದೆ ಅಪಘಾತ ಭೀತಿ


Team Udayavani, Jun 9, 2020, 10:29 AM IST

ದೋರ್ಮೆಯಲ್ಲಿ ರಕ್ಷಣ ಬೇಲಿ ಇಲ್ಲದೆ ಅಪಘಾತ ಭೀತಿ

ರಕ್ಷಣಾ ಬೇಲಿ ವಾಹನ ಅಪಘಾತದಿಂದ ಮುರಿದು ಬಿದ್ದಿರುವುದು.

ಉಪ್ಪಿನಂಗಡಿ: ಪರ್ನೆ ಗ್ರಾ.ಪಂ. ವ್ಯಾಪ್ತಿಯ ದೋರ್ಮೆ ಮಸೀದಿ ಬಳಿ ಸೇತುವೆ ಪಾರ್ಶ್ವದ ರಕ್ಷಣಾ ಬೇಲಿ ವಾಹನ ಅಪಘಾತದಿಂದ ಮುರಿದು ಬಿದ್ದಿದ್ದು, ಪರ್ಯಾಯ ವ್ಯವಸ್ಥೆ ಕಲ್ಪಿಸದೆ ಇನ್ನಷ್ಟು ಅಪಘಾತ ಸಂಭವಿಸುವ ಭೀತಿ ಸೃಷ್ಟಿಯಾಗಿದೆ.

ಎರಡು ದಿನಗಳ ಹಿಂದೆ ಘನ ವಾಹನವೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ರಾ.ಹೆ. 75ರಲ್ಲಿನ ದೋರ್ಮೆ ಮಸೀದಿ ಬಳಿಯ ಕಿರು ಸೇತುವೆಗೆ ಢಿಕ್ಕಿ ಹೊಡೆದ ಪರಿಣಾಮ ಸೇತುವೆ ಒಂದು ಪಾರ್ಶ್ವದ ಕಬ್ಬಿಣದ ತಡೆ ಬೇಲಿ ಸಂಪೂರ್ಣ ಮುರಿದು ಕೆಳಕ್ಕೆ ಬಿದ್ದಿತ್ತು. ಇದರಿಂದಾಗಿ ಇಲ್ಲಿ ಅಪಾಯಕಾರಿ ಸ್ಥಿತಿ ನಿರ್ಮಾಣವಾದಂತಾಗಿದೆ. ಮಾತ್ರ ವಲ್ಲದೆ ಈ ಸೇತುವೆಯು ತಿರುವು ರಸ್ತೆಯಲ್ಲಿದ್ದು, ವೇಗವಾಗಿ ಬಂದ ವಾಹನಗಳು ನಿಯಂತ್ರಣಕ್ಕೆ ಬಾರದಿದ್ದರೆ ಬಂಡೆಕಲ್ಲುಗಳಿರುವ ತೋಡಿಗೆ ಬೀಳುವ ಸಾಧ್ಯತೆಯಿದೆ.

ನಿರ್ಲಕ್ಷ್ಯ ನೀತಿ
ಸ್ಥಿತಿಯ ಬಗ್ಗೆ ಸ್ಥಳೀಯರು ಹಲವು ಬಾರಿ ತಿಳಿಸಿದರೂ ಸಂಬಂಧಪಟ್ಟ ಇಲಾಖೆ ಮಾತ್ರ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ನೀತಿ ಅನುಸರಿಸುತ್ತಿದೆ. ಇದು ತಿರುವುನಿಂದ ಕೂಡಿರುವ ರಸ್ತೆಯಾಗಿರುವುದರಿಂದ ಇಲ್ಲಿ ಅಪಾಯದ ಸಾಧ್ಯತೆ ಮತ್ತಷ್ಟು ಹೆಚ್ಚಿದೆ. ಈ ಹಿನ್ನೆಲೆ ಯಲ್ಲಿ ತುರ್ತಾಗಿ ಇಲ್ಲಿ ರಕ್ಷಣಾ ತಡೆ ಬೇಲಿ ಅಳವಡಿಸುವ ಬಗ್ಗೆ ಇಲಾಖೆ ಗಮನ ಹರಿಸಬೇಕಾಗಿದೆ.

ಭೀತಿಯಲ್ಲೇ ದಿನ ಕಳೆಯುವಂತಾಗಿದೆ
ವೇಗವಾಗಿ ಬಂದ ವಾಹನ ಇಲ್ಲಿನ ತಿರುವನ್ನು ಅಂದಾಜಿಸಲು ವಿಫ‌ಲವಾದರೆ ತೋಡಿಗೆ ಬೀಳುವುದರಲ್ಲಿ ಯಾವುದೇ ಸಂದೇಹವಿಲ್ಲ. ಇದು ಜೀವ ಹಾನಿಗೆ ಕಾರಣವಾಗಬಹುದಾದ್ದರಿಂದ ನಾವೆಲ್ಲ ಭೀತಿಯಲ್ಲೇ ದಿನ ಕಳೆಯುವಂತಾಗಿದೆ. ಸಾರ್ವಜನಿಕರ ಜೀವ ರಕ್ಷಣೆಗಾಗಿ ವಿಳಂಬಿಸದೆ ಇಲ್ಲಿ ತಡೆ ಬೇಲಿ ನಿರ್ಮಿಸಬೇಕೆಂದು ಸ್ಥಳೀಯ ಪಂಚಾಯತ್‌ ಸದಸ್ಯ ಅಬ್ದುಲ್ಲಾ ಆಗ್ರಹಿಸಿದ್ದಾರೆ.

ಬ್ಯಾರಿಕೇಡ್‌ ಇರಿಸಿ ತಾತ್ಕಾಲಿಕ ವ್ಯವಸ್ಥೆ
ದೋರ್ಮೆ ಬಳಿ ಸೇತುವೆಗೆ ಲಾರಿ ಢಿಕ್ಕಿ ಹೊಡೆದು ತಡೆಬೇಲಿಗೆ ಹಾನಿಯಾಗಿರುವುದಕ್ಕೆ ತಾತ್ಕಾಲಿಕವಾಗಿ ಬ್ಯಾರಿಕೇಡ್‌ ಇರಿಸಲಾಗುವುದು. ಶಾಶ್ವತ ವ್ಯವಸ್ಥೆಯನ್ನು ಹೆದ್ದಾರಿ ಇಲಾಖೆ ಕ್ರಮ ಕೈಗೊಳ್ಳಬೇಕಿದೆ.
– ತಿಮ್ಮಪ್ಪ ನಾಯಕ್‌, ವೃತ್ತ ನಿರೀಕ್ಷಕರು, ಪುತ್ತೂರು

ಟಾಪ್ ನ್ಯೂಸ್

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.