ಮಕ್ಕಳನ್ನು ಸರಕಾರಿ ಶಾಲೆಗೆ ಕಳುಹಿಸಿ: ಶಾಸಕ ಐಹೊಳೆ
Team Udayavani, Jun 9, 2020, 12:27 PM IST
ರಾಯಬಾಗ: ಸರಕಾರಿ ಶಾಲೆಯಲ್ಲಿ ಅಧ್ಯಯನ ಮಾಡುವ ಮಕ್ಕಳಿಗೆ ಸರಕಾರ ಬೈಸಿಕಲ್, ಮಧ್ಯಾಹ್ನ ಬಿಸಿಯೂಟ, ಹಾಲು, ಬಟ್ಟೆ, ಪುಸ್ತಕ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ನೀಡುತ್ತಿದ್ದು, ಪಾಲಕರು ತಮ್ಮ ಮಕ್ಕಳನ್ನು ಸರಕಾರಿ ಶಾಲೆಗಳಿಗೆ ಕಳುಹಿಸಬೇಕೆಂದು ಶಾಸಕ ಡಿ.ಎಂ. ಐಹೊಳೆ ಹೇಳಿದರು.
ಹುಬ್ಬರವಾಡಿ ಹಾಗೂ ನಂದಿಕುರಳಿ ಗ್ರಾಮಗಳ ಕನ್ನಡ ಹಿರಿಯ ಪ್ರಾಥಮಿಕ ಶಾಲೆಗಳಿಗೆ ಆರ್ಐಡಿಎಫ್ ನಬಾರ್ಡ್ ಯೋಜನೆಯಡಿ ಮಂಜೂರಾದ ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು. ಹುಬ್ಬರವಾಡಿ ಶಾಲೆಗೆ 33 ಲಕ್ಷ ರೂ. ವೆಚ್ಚದಲ್ಲಿ 3 ಕೊಠಡಿ ನಿರ್ಮಾಣ ಮತ್ತು ನಂದಿಕುರಳಿ ಶಾಲೆಗೆ 55 ಲಕ್ಷ ರೂ. ವೆಚ್ಚದಲ್ಲಿ 5 ಕೊಠಡಿ ನಿರ್ಮಾಣಕ್ಕಾಗಿ ಅನುದಾನ ಮಂಜೂರಾಗಿದೆ. ಗುತ್ತಿಗೆದಾರರು ಗುಣಮಟ್ಟದ ಕೊಠಡಿಗಳನ್ನು ನಿರ್ಮಿಸಿಕೊಡಬೇಕೆಂದರು.
ಅಣ್ಣಾಸಾಬ ಖೆಮಲಾಪುರೆ, ಸದಾನಂದ ಹಳಿಂಗಳಿ, ಬಿ.ಎಂ. ಕುಂದರಗಿ, ವಸಂತ ಲಬ್ಬೆ, ಅಪ್ಪಣ್ಣ ಪಾಟೀಲ, ಅಮಿತ ಜಾಧವ, ಬಾಳಪ್ಪ ಮಗದನ್ನವರ, ಆರ್.ಬಿ. ಶಹಾರೆ, ಹಣಮಂತ ಪಾಟೀಲ, ನಿಂಗಪ್ಪ ಪಾಟೀಲ, ಶ್ರವಣ ಕಾಂಬಳೆ, ಪೃಥ್ವಿರಾಜ ಜಾಧವ, ಬಾಬು ವಂಜಿರೆ, ಆರ್.ಕೆ. ನಿಂಗನೂರೆ, ಆರ್.ಬಿ.ಮನವಡ್ಡರ, ಅನ್ವರ ಮಿರ್ದೆ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್ಕಮ್ ಹೊಟೇಲ್ನಲ್ಲಿ ವ್ಯವಸ್ಥೆ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
ಚನ್ನಮ್ಮನ ಕಿತ್ತೂರು: ಮಹಾನ್ ಯೋಗಿಗಳು-ಸೂಫಿ ಸಂತರ ನಾಡಿದು- ಶಿಲೇದಾರ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ