ಬೀದರ್ ಜಿಲ್ಲೆಯಲ್ಲಿಂದು 9 ಮಂದಿಗೆ ಸೋಂಕು ದೃಢ: 42 ಜನ ಬಿಡುಗಡೆ
Team Udayavani, Jun 9, 2020, 7:10 PM IST
ಬೀದರ್: ಗಡಿ ನಾಡು ಬೀದರನಲ್ಲಿ ಮಹಾರಾಷ್ಟ್ರ ಕಂಟಕ ಮುಂದುವರೆದಿದ್ದು, ಮಂಗಳವಾರ ಜಿಲ್ಲೆಯಲ್ಲಿ ಮತ್ತೆ ಒಂಬತ್ತು ಹೊಸ ಕೋವಿಡ್-19 ಪ್ರಕರಣಗಳು ವರದಿಯಾಗಿವೆ. ಈ ಮೂಲಕ ಜಿಲ್ಲೆಯಲಿ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಈಗ 279ಕ್ಕೆ ಏರಿಕೆಯಾಗಿದೆ. ಇನ್ನೊಂದೆಡೆ 42 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿರುವುದು ಆಶಾದಾಯಕ ಎನಿಸಿದೆ.
ಸೋಮವಾರವಷ್ಟೇ ಜಿಲ್ಲೆಯಲ್ಲಿ ಕೋವಿಡ್ ಆರ್ಭಟಿಸಿ 48 ಜನರಲ್ಲಿ ಪಾಸಿಟಿವ್ ಪತ್ತೆಯಾಗಿದ್ದವು. ಈಗ ಮತ್ತೆ ಮರು ದಿನವೇ 9 ಕೇಸ್ಗಳು ಕಾಣಿಸಿಕೊಂಡಿವೆ. ಇವರಲ್ಲಿ ಆರು ಮಂದಿ ಮಹಿಳೆಯರು, ಮೂವರು ಪುರುಷರಾಗಿದ್ದಾರೆ. ಸೋಂಕಿತರೆಲ್ಲರಿಗೂ ಮಹಾರಾಷ್ಟ್ರ ಸಂಪರ್ಕ ಇದೆ ಅಲ್ಲದೇ ಎಲ್ಲರೂ ಗ್ರಾಮೀಣ ಭಾಗದ ವಲಸೆ ಕಾರ್ಮಿಕರೇ ಆಗಿರುವುದು ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ.
ಮಂಗಳವಾರ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಪಾಸಿಟಿವ್ಗಳು ಪತ್ತೆಯಾಗಿವೆ. ಬಸವಕಲ್ಯಾಣ ತಾಲೂಕಿನ ಜಾಫರವಾಡಿ, ಗಂಗಾರಾಮ್ ತಾಂಡಾ, ಚಿಕ್ಕನಗಾಂವ್ ತಾಂಡಾ ಮತ್ತು ಧಾಮುನಗರ ತಾಂಡಾದಲ್ಲಿ ತಲಾ ಒಂದು ಕೇಸ್ ಸೇರಿ ಒಟ್ಟು ನಾಲ್ಕು ಪ್ರಕರಣಗಳು, ಔರಾದ ಪಟ್ಟಣದ ಒಂದು, ತಾಲೂಕಿನ ಎಕಂಬಾ ಗ್ರಾಮದಲ್ಲಿ ಎರಡು ಕೇಸ್ ಸೇರಿ ಒಟ್ಟು ಮೂರು, ಭಾಲ್ಕಿ ತಾಲೂಕಿನ ಭಾಟಸಾಂಗವಿ ಹಾಗೂ ಹುಮನಾಬಾದ ತಾಲೂಕಿ ಹಿಪ್ಪರಗಾ ಗ್ರಾಮದಲ್ಲಿ ತಲಾ ಒಂದು ಕೇಸ್ಗಳು ಪತ್ತೆಯಾಗಿವೆ.
ಜಿಲ್ಲೆಯಲ್ಲಿ ಈವರೆಗೆ 297 ಪ್ರಕರಣಗಳು ವರದಿಯಾದಂತೆ ಆಗಿದ್ದು, 132 ಜನ ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ. ಇನ್ನೂ 141 ಪ್ರಕರಣಗಳು ಸಕ್ರೀಯವಾಗಿವೆ ಎಂದು ಆರೋಗ್ಯ ಇಲಾಖೆಯ ಹೇಲ್ತ್ ಬುಲೇಟಿನ್ ದೃಡಪಡಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
MUST WATCH
ಹೊಸ ಸೇರ್ಪಡೆ
Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು
Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ
Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ
Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು
Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ