ರಾಜ್ಯದ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಸಹಕಾರ


Team Udayavani, Jun 10, 2020, 5:23 AM IST

dr sidd

ಮಂಡ್ಯ: ಕೋವಿಡ್‌ 19 ಸೃಷ್ಟಿಸಿದ ತುರ್ತು ಪರಿಸ್ಥಿತಿ ವೇಳೆ ರಾಜ್ಯದ ಅಭಿವೃದ್ಧಿಗೆ ಪೂರಕವಾಗುವಂತೆ 27,328 ಕೋಟಿ ರೂ. ಅನು ದಾನ ಬಿಡುಗಡೆ ಮಾಡಿದೆ ಎಂದು ಬಿಜೆಪಿ ರಾಷ್ಟ್ರೀಯ ಪರಿಷತ್‌ ಸದಸ್ಯ ಡಾ.ಸಿದ್ದರಾಮಯ್ಯ ತಿಳಿಸಿದರು. ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪ್ರಧಾನಿ  ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಕೋವಿಡ್‌ 19 ಸಂಕಷ್ಟದಲ್ಲಿ ರಾಜ್ಯಕ್ಕೆ ಉತ್ತಮ ಬೆಂಬಲ ನೀಡಿದೆ. ಕೇಂದ್ರ ಸರ್ಕಾರ ಹಲವುಯೋಜನೆಗಳನ್ನು ಜಾರಿಗೊಳಿಸಿ ರಾಜ್ಯದ  ಅಭಿವೃದ್ಧಿಗೆ ಸಹ ಕಾರ ನೀಡಿದೆ ಎಂದರು.

ಬಡಜನರಿಗೆ ನೆರವು: ಜನಧನ್‌ ಯೋಜನೆ, ಉಜ್ವಲ ಯೋಜನೆ, ಆಯುಷ್ಮಾನ್‌ ಭಾರತ್‌, ಜನರಿಕ್‌ ಔಷಧ, ಹೃದಯ ಚಿಕಿತ್ಸೆಗೆ ಸ್ಟಂಟ್‌ ಅಳವಡಿಕೆ, ಬೇವು ಮಿಶ್ರಿತ ರಸಗೊಬರ ಬಳಕೆ, ಮುದ್ರಾ ಯೋಜನೆ, ಸ್ಟಾರ್ಟ್‌ಅಫ್‌ ಸೇರಿದಂತೆ ಹಲವು ಯೋಜನೆಗಳ ಮೂಲಕ ರಾಜ್ಯದ ಜನತೆಗೆ ನೆರವನ್ನು  ಒದಗಿಸಿದೆ. ಬಲಿಷ್ಠ ಭಾರತ ನಿರ್ಮಾಣಕ್ಕೆ ಈ ಎಲ್ಲ ಯೋಜನೆ ಗಳು ಅಮೂಲ್ಯ ಕೊಡುಗೆಗಳನ್ನು ನೀಡಿದೆ. ಶ್ರೀಮಂತರು ಪಡೆಯುತ್ತಿದ್ದ ಗ್ಯಾಸ್‌ ಸಬ್ಸಿಡಿ ಬಿಡುವಂತೆ ಮಾಡಿರುವುದು ಲಕ್ಷಾಂತರ ಬಡಜನರಿಗೆ ನೆರವಾಗಿದೆ ಎಂದು ಹೇಳಿದರು.

ಪಾರದರ್ಶಕತೆಗೆ ಆದ್ಯತೆ: ಎನ್‌ಡಿಎ ನೇತೃತ್ವದ ಸರ್ಕಾರ ಸಬ್‌ ಕಾ ಸಾತ್‌, ಸಬ್‌ ಕಾ ವಿಕಾಸ್‌, ಸಬ್‌ ಕಾ ವಿಶ್ವಾಸ್‌ ಧ್ಯೇಯ ಮಂತ್ರದೊಂದಿಗೆ ಮೋದಿ ಅವರ 2ನೇ ಸರ್ಕಾರ ಕೇಂದ್ರದಲ್ಲಿ ಸ್ಥಾಪಿತಗೊಂಡಿತು. ವ್ಯವಸ್ಥೆಗಳಿಲ್ಲಿ ಸುಧಾರಣೆ, ತಂತ್ರಜ್ಞಾನ ಅಳವಡಿಕೆ ಮೂಲಕ ಹಾದಿಯ ಹೆಜ್ಜೆ ಇಡುತ್ತಿದೆ. ವ್ಯವಸ್ಥೆಗೆ ಅನುಗುಣವಾಗಿ ಒನ್‌ ನೇಷನ್‌, ಒನ್‌ ಟ್ಯಾಕ್ಸ್‌- ಒನ್‌ ನೇಷನ್‌ ಒನ್‌ ರೇಷನ್‌ ಕಾರ್ಡ್‌ ಜಾರಿಗೆ ತಂದರು. ಇದು ದೇಶದ ಯಾವುದೇ ಪಡಿತರ ಅಂಗಡಿಗಳಲ್ಲಿ ಪಡಿತರ  ತೆಗೆದುಕೊಳ್ಳಬಹುದು. ಒನ್‌ ಕಂಟ್ರಿ ಫಾಸ್ಟೇಜ್‌ ಸರ್ಕಾರದ ಫಲಾನುಭವಿಗಳಿಗೆ ನೇರ ಹಣ ವರ್ಗಾವಣೆ ಸಂದಾಯ ಮಾಡುವ ಯೋಜನೆ ಜಾರಿಗೊಳಿಸಿ ಪಾರದರ್ಶಕತೆ ವ್ಯವಸ್ಥೆಗೆ ಒತ್ತು ನೀಡಲಾಗಿದೆ ಎಂದರು.

ಬೇಡಿಕೆ ಈಡೇರಿಕೆ: ತ್ರಿವಳಿ ತಲಾಖ್‌ ರದ್ದುಗೊಳಿಸುವ ಮೂಲಕ ಕೆಟ್ಟ ಪದ್ಧತಿಯನ್ನು ನಿರ್ಮೂಲನೆಗೊಳಿಸಿ ತಲಾಕ್‌ ಭಯದ ನೆರಳಲ್ಲಿ ಜೀವಿಸುತ್ತಿದ್ದ ಮುಸ್ಲಿಂ ಹೆಣ್ಣು ಮಕ್ಕಳ ಮೇಲೆ ನಡೆಯುತ್ತಿದ್ದ ದೌರ್ಜನ್ಯ ತಪ್ಪಿಸಲಾಗಿದೆ.  ಸಂವಿಧಾನ 2370ನೇ ವಿಧಿ ರದ್ದುಗೊಳಿಸಿ ಜಮ್ಮು-ಕಾಶ್ಮೀರ ರಾಜ್ಯಕ್ಕೆ ಇದ್ದ ವಿಶೇಷಾಧಿಕಾರ ರದ್ದು ಮಾಡಿ ಲಡಾಖ್‌ ಮತ್ತು ಜಮ್ಮು ಕಾಶ್ಮೀರ ಎಂಬ ಎರಡು ಕೇಂದ್ರಾಳಿತ ಪ್ರದೇಶಗಳ ರಚನೆ ಮಾಡಲಾಗಿದೆ.

ಬಹಳಷ್ಟು ಟೀಕೆಗಳು  ಬಂದರೂ ಅದನ್ನು ಸಮರ್ಥ ವಾಗಿ ನಿಭಾಯಿಸಲಾಗಿದೆ ಎಂದು ವಿವರಿಸಿದರು. ಕಾರ್ಪೋ ರೇಟ್‌ ತೆರಿಗೆ ಯಲ್ಲಿ ಭಾರೀ ಕಡಿತ, ರೈತರಿಗೆ ಮೂರು ಕಂತುಗಳಲ್ಲಿ 6 ಸಾವಿರ ಸಹಾಯಧನ ಸೇರಿದಂತೆ ವಿವಿಧ ಯೋಜನೆಗಳ  ನ್ನು  ರೂಪಿಸಲಾಗಿದೆ ಎಂದು ಹೇಳಿದರು. ಬಿಜೆಪಿ ಜಿಲ್ಲಾಧ್ಯಕ್ಷ ಕೆ. ಜೆ. ವಿಜಯಕುಮಾರ್‌, ಪ್ರಧಾನ ಕಾರ್ಯದರ್ಶಿಗಳಾದ ಶಿವಲಿಂಗೇ ಗೌಡ, ಪ.ನಾ. ಸುರೇಶ್‌, ಕೆ. ಕಾಳೇಗೌಡ ಇದ್ದರು.

ಪ್ರಧಾನಿ ಮೋದಿಯವರು ಎಲ್ಲಕ್ಕಿಂತ ಹೆಚ್ಚು ಜನಪ್ರಿಯರಾಗಿರುವುದು ಜನತೆಯ ವಿಶ್ವಾಸ ಗಳಿಸಿರುವುದು ಪಾರದರ್ಶಕತೆ ಮತ್ತು ಭ್ರಷ್ಟಾಚಾರ ಮುಕ್ತ ಆಡಳಿತದ ಕಾರಣದಿಂದ. ಅವರ ಹೊಸ ನೀತಿ ಗಳು ಮತ್ತು ಶುದ್ಧ ಜನಪರ  ನಿರ್ಣಯಗಳು ಅವರ ಬಗೆಗಿನ ವಿಶ್ವಾಸವನ್ನು ಇನ್ನಷ್ಟು ಹೆಚ್ಚು ಮಾಡಿದೆ. 
-ಡಾ.ಸಿದ್ದರಾಮಯ್ಯ, ಬಿಜೆಪಿ ರಾಷ್ಟ್ರೀಯ ಪರಿಷತ್‌ ಸದಸ್ಯ

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.