ಮಂಗಳೂರು ನೇತ್ರಾವತಿ ಸೇತುವೆಯಲ್ಲಿ ಬೈಕ್ ನಿಲ್ಲಿಸಿ ಯುವಕ ನಾಪತ್ತೆ: ಆತ್ಮಹತ್ಯೆ ಶಂಕೆ
Team Udayavani, Jun 10, 2020, 9:43 AM IST
ಉಳ್ಳಾಲ: ಇಲ್ಲಿನ ನೇತ್ರಾವತಿ ಸೇತುವೆಯಲ್ಲಿ ಬೈಕ್ ನಿಲ್ಲಿಸಿ ಯುವಕನೋರ್ವ ನಾಪತ್ತೆಯಾಗಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ.
ನಾಪತ್ತೆಯಾಗಿರುವ ಯುವಕ ಕುರ್ನಾಡು ನಿವಾಸಿ ಪ್ರವೀಣ್ ಸಪಲ್ಯ (28) ಎನ್ನಲಾಗಿದೆ. ಈತ ಖಾಸಗಿ ಕಂಪನಿಯೊಂದರಲ್ಲಿ ಸೇಲ್ಸ್ ಮ್ಯಾನ್ ಆಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ನೇತ್ರಾವತಿ ನದಿ ಸೇತುವೆಯಲ್ಲಿ ಈತನ ಬೈಕ್ ಪತ್ತೆಯಾಗಿದೆ. ಮಂಗಳವಾರ ರಾತ್ರಿ ಸುಮಾರು 7 ಗಂಟೆಗೆ ಕೆಲಸ ಮುಗಿಸಿ ಬಂದಿದ್ದ ಎನ್ನಲಾಗಿದೆ. ಪತ್ತೆಗಾಗಿ ಹುಡುಕಾಟ ಕಾರ್ಯಾಚರಣೆ ಆರಂಭವಾಗಿದೆ. ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ನೇತ್ರಾವತಿ ಸೇತುವೆಯಿಂದ ಹಾರಿ ಆತ್ಮಹತ್ಯೆ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿ ನಡೆಯುತ್ತಿದೆ. ಈ ಸೇತುವೆಗೆ ಸಿಸಿ ಕ್ಯಾಮೆರಾ ಅಳವಡಿಬೇಕು, ಸೇತುವೆಗೆ ಎತ್ತರದ ತಡೆಗೋಡೆ ನಿರ್ಮಿಸಬೇಕು ಎಂಬ ಒತ್ತಾಯಗಳು ಕೇಳಿ ಬಂದಿತ್ತು. ಉದ್ಯಮಿ ಸಿದ್ದಾರ್ಥ್ ಹೆಗಡೆ ಆತ್ಮಹತ್ಯೆಯ ನಂತರ ಈ ಒತ್ತಾಯಗಳು ಮತ್ತಷ್ಟು ಮುನ್ನಲೆಗೆ ಬಂದಿದ್ದವು. ಆದರೆ ಇದುವರೆಗೆ ಅಂತುಹುದು ಏನೂ ನಡೆದಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.