ಕಕ ಸಂಘದ ಕಚೇರಿ ಉದ್ಘಾಟನೆ

ಹೆಸರಿನ ಜತೆಗೆ ಜನರ ಕಲ್ಯಾಣ 3 ಸಾವಿರ ಸಂಪರ್ಕ ಕೇಂದ್ರದ ಮೂಲಕ ಅಭಿವೃದ್ಧಿಗೆ ನಾಂದಿ

Team Udayavani, Jun 10, 2020, 10:48 AM IST

10-June-02

ಸಮಾರಂಭದ ಸಾನ್ನಿಧ್ಯ ವಹಿಸಿದ್ದ ವಿಜಯಪುರ ಜ್ಞಾನ ಯೋಗಾಶ್ರಮದ ಪೂಜ್ಯ ಸಿದ್ಧೇಶ್ವರ ಸ್ವಾಮೀಜಿ ಆಶೀರ್ವಚನ ನೀಡಿದರು

ಕಲಬುರಗಿ: ಹೈದ್ರಾಬಾದ ಕರ್ನಾಟಕವನ್ನು ಕಲ್ಯಾಣ ಕರ್ನಾಟಕವೆಂದು ಮರುನಾಮಕರಣ ಮಾಡಲಾಗಿದ್ದು, ಜನರ ಕಲ್ಯಾಣಕ್ಕಾಗಿ ಹಲವಾರು ಕೆಲಸಗಳು ನಡೆಯಲಿವೆ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ತಿಳಿಸಿದರು.

ನಗರದ ಐವಾನ್‌-ಎ-ಶಾಹಿ ರಸ್ತೆಯ ಲೋಕೋಪಯೋಗಿ ಇಲಾಖೆ ಕಟ್ಟಡದಲ್ಲಿ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕೃತಿಕ ಸಂಘದ ನೂತನ ಕಚೇರಿಯನ್ನು ಮಂಗಳವಾರ ಬೆಂಗಳೂರಿನಿಂದಲೇ ಆನ್‌ಲೈನ್‌ ಮೂಲಕ ಸಸಿಗೆ ನೀರೆರೆದು ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ನಿಜ ಅರ್ಥದಲ್ಲಿ ಕಲ್ಯಾಣ ಕರ್ನಾಟಕವನ್ನು ಸಾಕಾರಗೊಳಿಸಲು ಆಯವ್ಯಯದಲ್ಲಿ 500 ಕೋಟಿ ರೂ. ಗಳನ್ನು ಈ ಸಂಘಕ್ಕೆ ಮೀಸಲಿಡಲಾಗಿದೆ. ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದ ಮೇಲೆ ಮಾಜಿ ಸಂಸದ ಬಸವರಾಜ ಪಾಟೀಲ ಸೇಡಂ ನೇತೃತ್ವದಲ್ಲಿ 15 ಜನರ ಆಡಳಿತ ಮಂಡಳಿಯು ಪ್ರದೇಶದ ಆರು ಜಿಲ್ಲೆಗಳ ಸರ್ವಾಂಗೀಣ ಅಭಿವೃದ್ಧಿಗೆ ಸಂಘ ಶ್ರಮಿಸಲಿದೆ. ಒಟ್ಟಾರೆ ಜನರ ಕಲ್ಯಾಣಕ್ಕಾಗಿ ಸಂಘ ಕಾರ್ಯನಿರ್ವಹಿಸಲಿದೆ ಎಂದರು.

ಕೃಷಿ, ಶಿಕ್ಷಣ, ಸಾಹಿತ್ಯ, ಸ್ವಯಂ ಉದ್ಯೋಗ, ಆರೋಗ್ಯ, ಯುವಜನ ಮತ್ತು ಮಹಿಳಾ ಸಬಲೀಕರಣ, ಗ್ರಾಮ ಸಬಲೀಕರಣ ಹೀಗೆ ವಿವಿಧ ಕ್ಷೇತ್ರದಲ್ಲಿ ಪ್ರಗತಿಗೆ ಸಂಘವು ನಿರಂತರವಾಗಿ ಕಾರ್ಯನಿರ್ವಹಿಸಲಿದೆ. 3000 ಸಂಪರ್ಕ ಕೇಂದ್ರಗಳ ಮೂಲಕ ಆರೋಗ್ಯ, ವಿಚಾರ ಸಂಕಿರಣ, ಅರಿವು, ಸ್ವಯಂ ಉದ್ಯೋಗ ಕಲ್ಪಿಸುವ ಮೂಲಕ ಜನರ ಜೀವನ ಶೈಲಿಯಲ್ಲಿ ಅಮೂಲಗಾಗ್ರ ಬದಲಾವಣೆಗೆ ಸಂಘವು ನಾಂದಿ ಹಾಡಲಿದೆ ಎಂದು ಹೇಳಿದರು.

ಇತ್ತ ಕಲಬುರಗಿಯಿಂದ ಕಲ್ಯಾಣ ಕರ್ನಾಟಕ ಮಾನವ ಸಂಪನ್ಮೂಲ, ಕೃಷಿ ಮತ್ತು ಸಾಂಸ್ಕೃತಿಕ ಸಂಘದ ಅಧ್ಯಕ್ಷ ಬಸವರಾಜ ಪಾಟೀಲ ಸೇಡಂ ಮಾತನಾಡಿ, ಮುಖ್ಯಮಂತ್ರಿಗಳ ಆಶಯದಂತೆ ಮುಂದಿನ ಮೂರು ವರ್ಷಗಳಲ್ಲಿ ಸಂಘವು ಈ ಪ್ರದೇಶದಲ್ಲಿ ಮಾನವನ ಸಂಪೂರ್ಣ ವಿಕಸನಕ್ಕೆ ಅನೇಕ ಕಾರ್ಯಕ್ರಮ ಹಮ್ಮಿಕೊಂಡು ಪ್ರಶಂಸಾರ್ಹ ರೀತಿಯಲ್ಲಿ ಕೆಲಸ ಮಾಡಲಿದೆ. ಸಹಕಾರ ಕಾಯ್ದೆಯಡಿ ರಚನೆಯಾಗಿರುವ ಮಂಡಳಿಗೆ ಸರ್ಕಾರವು 500 ಕೋಟಿ ರೂ. ಅನುದಾನ ಮೀಸಲಿಟ್ಟಿದ್ದು, ಕೆಕೆಆರ್‌ ಡಿಬಿ ಮಂಡಳಿಗೆ ನೀಡುವ ಅನುದಾನದಲ್ಲಿ ಇದು ಸೇರಿಲ್ಲ ಎಂದು ಸ್ಪಷ್ಪಪಡಿಸಿದರು.

ಬಸವಕಲ್ಯಾಣವನ್ನು ಪ್ರವಾಸಿ ತಾಣವನ್ನಾಗಿ ಅಭಿವೃದ್ಧಿಪಡಿಸಬೇಕು ಎಂಬುದು ಮುಖ್ಯಮಂತ್ರಿಗಳ ಆಶಯವಾಗಿದ್ದು, ಈ ನಿಟ್ಟಿನಲ್ಲಿಯೂ ಸಂಘ ಹೆಜ್ಜೆ ಇಡಲಿದೆ. ಬಸವಕಲ್ಯಾಣದಲ್ಲಿ 500 ಕೋಟಿ ರೂ. ವೆಚ್ಚದಲ್ಲಿ ಭವ್ಯ ಅನುಭವ ಮಂಟಪ ನಿರ್ಮಾಣ ಕಾರ್ಯ ಸಂಘದ ಮುಂದಿರುವ ಪ್ರಮುಖ ಕಾರ್ಯಕ್ರಮವಾಗಿದೆ. ಸಂಘ-ಸಂಸ್ಥೆಗಳು ಸೇರಿದಂತೆ ಜನಸಾಮಾನ್ಯರ ಸಹಕಾರ ಪಡೆದು ಈ ಪ್ರದೇಶದ ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದರು.

ಕಾರ್ಯಕ್ರಮದ ಸಾನ್ನಿಧ್ಯ ವಹಿಸಿದ್ದ ವಿಜಯಪುರ ಜ್ಞಾನ ಯೋಗಾಶ್ರಮದ ಪೂಜ್ಯ ಸಿದ್ಧೇಶ್ವರ ಸ್ವಾಮೀಜಿ ಮಾತನಾಡಿ, ಬಸವರಾಜ ಪಾಟೀಲ ಸೇಡಂ ನೇತೃತ್ವದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶದ ಸರ್ವಾಂಗೀಣ ಅಭಿವೃದ್ಧಿಗೆ ಸಂಘವು ಕಾರ್ಯನಿರ್ವಹಿಸಲಿದೆ. ಇದು ಬಸವಣ್ಣನ ಭೂಮಿ, ಕೊಡುವುದುಂಟು ಕೇಳುವುದಲ್ಲ. ಇದರ ಮೂಲಾರ್ಥದಲ್ಲಿ ಸಂಘವು ಕಾರ್ಯನಿರ್ವಹಿಸಬೇಕಿದೆ. ಈ ಪ್ರದೇಶದಲ್ಲಿ ಬಡವ ಮತ್ತು ಕೊರತೆ ಎನ್ನುವ ಶಬ್ದ ಉದ್ಭವಿಸದಂತೆ ಸಂಘವು ಕಾರ್ಯನಿರ್ವಹಿಸಬೇಕಿದೆ. ಹೃದಯ ವೈಶಾಲ್ಯತೆ, ತಲೆಯಲ್ಲಿ ಶ್ರೀಮಂತಿಕೆ ಹಾಗೂ ಕೈನಲ್ಲಿ ಸದಾ ಕೆಲಸಗಳಿದ್ದಲ್ಲಿ ಅಸಾಧ್ಯವಾದುದನ್ನು ಸಾಧಿಸಬಹುದು ಎಂದು ಹಿತವಚನ ನುಡಿದರು. ಬಸವಣ್ಣ ಸೇರಿದಂತೆ ಇನ್ನುಳಿದ ಶರಣರು ನಡೆದಾಡಿದ ಈ ನಾಡಲ್ಲಿ ಬೇರೆ ಪ್ರದೇಶದ ಜನರು ವಾಸ ಮಾಡಲು ಹಾತೊರೆಯಬೇಕು. ಈ ನಿಟ್ಟಿನಲ್ಲಿ ಇಲ್ಲಿ ಸುಂದರ ಮತ್ತು ಸಂಪದ್ಭರಿತ ನಾಡನ್ನು ನಿರ್ಮಿಸಬೇಕಿದೆ ಎಂದು ಆಶೀರ್ವಚನ ನೀಡಿದರು.

ಸಂಸದ ಡಾ| ಉಮೇಶ ಜಾಧವ, ಶಾಸಕ ರಾಜಕುಮಾರ ಪಾಟೀಲ ತೇಲ್ಕೂರ, ಸೇಡಂನ ಶ್ರೀ ಸದಾಶಿವ ಸ್ವಾಮೀಜಿ, ಜಿಲ್ಲಾಧಿಕಾರಿ ಶರತ್‌ ಬಿ., ಜಿ.ಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ|ಪಿ. ರಾಜಾ, ಸಂಘದ ಅಡಳಿತ ಮಂಡಳಿ ಸದಸ್ಯರಾದ ಈರೇಶ ಇಲ್ಲೂರ್‌, ಶ್ರೀನಿವಾಸ ನಂದಾಪುರ, ವಿ.ಎಂ. ಭೂಸನೂರಮಠ, ಲೀಲಾ ಕಾರಟಗಿ, ಪ್ರಭುರಾಜ ಸಿದ್ದರಾಮಪ್ಪ, ಶಿವರಾಮೇಗೌಡ, ಬಾಬುಲಾಲ್‌ ಜೈನ್‌, ಪ್ರಭುದೇವ ಕಪ್ಗಲ್‌, ರೇವಣಸಿದ್ಧಪ್ಪ ಜಾಲಾದಿ, ವಿ.ಶಾಂತರೆಡ್ಡಿ, ತಿಪ್ಪಣ್ಣರೆಡ್ಡಿ ಕೋಲಿ, ಮಂಜುಳಾ ಡೊಳ್ಳೆ, ದುರ್ದನಾ ಬೇಗಂ, ಹಣಮಂತ ರಾಣಪ್ಪ ತೆಗನೂರ, ನೀಲಕಂಠರಾಯ ಎಲ್ಹೇರಿ ಇದ್ದರು. ಸಂಘದ ಕಾರ್ಯದರ್ಶಿ ಭೀಮಾಶಂಕರ ತೆಗ್ಗೆಳ್ಳಿ ಸ್ವಾಗತಿಸಿದರು, ಅ ಧೀನ ಕಾರ್ಯದರ್ಶಿ ಮಲ್ಲಿಕಾರ್ಜುನ ರೆಡ್ಡಿ ಪಾಟೀಲ ನಿರೂಪಿಸಿದರು, ಭಾರತಿ ವಂದಿಸಿದರು.

ಟಾಪ್ ನ್ಯೂಸ್

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.