ಕೊಳೆತ ಸ್ಥಿತಿಯಲ್ಲಿ ಮಾಜಿ ರಣಜಿ ಕ್ರಿಕೆಟಿಗನ ಶವ ಪತ್ತೆ: ಕೊಲೆ ಆರೋಪದಲ್ಲಿ ಮಗನ ಬಂಧನ
Team Udayavani, Jun 10, 2020, 11:40 AM IST
ತಿರುವನಂತಪುರ: ಕೇರಳದ ಮಾಜಿ ಕ್ರಿಕೆಟಿಗ ಜಯಮೋಹನ್ ಥಾಂಪಿ ಮೃತದೇಹ ಕೊಳೆತ ಸ್ಥಿತಿಯಲ್ಲಿ ಅವರದ್ದೇ ಮನೆಯಲ್ಲಿ ಸೋಮವಾರ ಪತ್ತೆಯಾಗಿದೆ. ಸದ್ಯ ಕೊಲೆ ಆರೋಪದಲ್ಲಿ ಮಗನನ್ನು ಪೊಲೀಸರು ಬಂಧಿಸಿದ್ದಾರೆ.
ಥಾಂಪಿ ಕೇರಳದ ಮನಕಾಡ್ನವರು. ಅವರ ಮಗ ಕೂಡ ಅದೇ ಮನೆಯಲ್ಲಿ ವಾಸಿಸುತ್ತಿದ್ದಾರೆ. ಎರಡು ದಿನಗಳ ಹಿಂದೆ ಜಯಮೋಹನ್ ಥಾಂಪಿ
ಸಾವಿಗೀಡಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಶವ ಕೊಳೆತು ವಾಸನೆ ಬರುತ್ತಿದ್ದರೂ ಮಗ ಸುಮ್ಮನೆ ಇದ್ದುದರಿಂದ ಅನುಮಾನಗೊಂಡ ಪೊಲೀಸರು ಮಗನನ್ನು ವಿಚಾರಿಸಿದಾಗ ಸತ್ಯ ಬಾಯ್ಬಿಟ್ಟಿದ್ದಾನೆ ಎನ್ನಲಾಗಿದೆ.
ಜಯಮೋಹನ್ ಥಂಪಿ ಮಗ ಅಶ್ವಿನ್ ಅವರನ್ನು ಪೊಲೀಸರು ಬಂಧಿಸಿದ್ದು, ಸಹಾಯ ಮಾಡಿದ ಕಾರಣಕ್ಕೆ ನೆರೆಮನೆಯ ಯುವಕನನ್ನೂ ವಶಕ್ಕೆ ಪಡೆಯಲಾಗಿದೆ.
64 ವರ್ಷದ ಜಯಮೋಹನ್ ಅವರನ್ನು ಮಗ ಬಲವಾಗಿ ದೂಡಿದ ಕಾರಣ ಹಣೆಗೆ ಪೆಟ್ಟಾಗಿ ರಕ್ತಸ್ರಾವವಾಗಿ ಅವರು ಕೊನೆಯುಸಿರೆಳಿದಿದ್ದಾರೆ ಎನ್ನಲಾಗಿದೆ.
6 ಪ್ರಥಮ ದರ್ಜೆ ಕ್ರಿಕೆಟಿನಲ್ಲಿ ಕೇರಳ ತಂಡವನ್ನು ಜಯಮೋಹನ್ ಥಾಂಪಿ ಪ್ರತಿನಿಧಿಸಿದ್ದಾರೆ. ವಿಕೆಟ್ ಕೀಪರ್ -ಬ್ಯಾಟ್ಸ್ಮನ್ ಆಗಿ ಗುರುತಿಸಿಕೊಂಡಿದ್ದರು ಎಂದು ಕೇರಳ ಕ್ರಿಕೆಟ್ ಸಂಸ್ಥೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sandalwood: ಈತ ಊರ ಬೆಳೆಸೋ ಜಂಟಲ್ಮ್ಯಾನ್; ರಾಮನ ಅವತಾರ ಬಗ್ಗೆ ರಿಷಿ
Theft Case: ಅಕ್ಕನ ಮನೆಯಲ್ಲಿ 52 ಲಕ್ಷ, ಚಿನ್ನ ಕದ್ದ ತಂಗಿ
Muslim ಆ್ಯನಿಮೇಟೆಡ್ ವೀಡಿಯೋ ತೆಗದುಹಾಕಲು ಎಕ್ಸ್ಗೆ ಆಯೋಗ ಸೂಚನೆ
Bengaluru: ಚಿನ್ನಾಭರಣ ಇರಿಸಿದ್ದ ಯುವಕನ ಬ್ಯಾಗ್ ಕದ್ದ ಆಟೋ ಡ್ರೈವರ್ ಬಂಧನ
Crime: ರಸ್ತೆಯಲ್ಲಿ ಅಟ್ಟಾಡಿಸಿ ರಿಯಲ್ ಎಸ್ಟೇಟ್ ಉದ್ಯಮಿ ಹತ್ಯೆಗೈದ ದುಷ್ಕರ್ಮಿಗಳು ಪರಾರಿ