9 ವಾರಗಳ ಬಳಿಕ ಅಮ್ಮನ ಮಡಿಲು ಸೇರಿದ ಮಕ್ಕಳು; ವೈರಲ್‌ ಆದ ತಾಯಿ ಮಕ್ಕಳ ವಾತ್ಸಲ್ಯದ ವೀಡಿಯೋ


Team Udayavani, Jun 10, 2020, 1:40 PM IST

9 ವಾರಗಳ ಬಳಿಕ ಅಮ್ಮನ ಮಡಿಲು ಸೇರಿದ ಮಕ್ಕಳು; ವೈರಲ್‌ ಆದ ತಾಯಿ ಮಕ್ಕಳ ವಾತ್ಸಲ್ಯದ ವೀಡಿಯೋ

ಸಾಂದರ್ಭಿಕ ಚಿತ್ರ

ಮಣಿಪಾಲ: ಕೋವಿಡ್‌-19 ಅಟ್ಟಹಾಸ ಮೆರೆಯುತ್ತಿರುವ ಈ ಸಂದರ್ಭದಲ್ಲಿ ಅತಿ ಹೆಚ್ಚು ಸಮಸ್ಯೆ ಎದುರಿಸುತ್ತಿರುವವರೆಂದರೆ ಕೋವಿಡ್ ವಾರಿಯರ್ಸ್‌. ಸೋಂಕಿತರ ಚಿಕಿತ್ಸೆಗಾಗಿ ತಮ್ಮ ಜೀವವನ್ನೇ ಪಣಕ್ಕಿಟ್ಟು ಸೇವೆ ಸಲ್ಲಿಸುತ್ತಿರುವ ಇವರು ರಜೆಗಳನ್ನು ರದ್ದು ಮಾಡಿ ನಿರಂತರ ಸೇವೆ ನೀಡುತ್ತಿದ್ದಾರೆ. ಇತ್ತ ಮನೆಗೂ ಬಾರದೆ, ಕುಟುಂಬ ಸದಸ್ಯರಿಂದಲೂ ದೂರವಿದ್ದು, ಆಸ್ಪತ್ರೆಯಲ್ಲೇ ಉಳಿದು ನಿಸ್ವಾರ್ಥ ಸೇವೆ ಸಲ್ಲಿಸುತ್ತಿದ್ದಾರೆ. ಹೀಗಿರುವಾಗ ಲಂಡನ್‌ನ ನರ್ಸ್‌ ಒಬ್ಬರು ತನ್ನ ಮಕ್ಕಳನ್ನು ಎರಡು ತಿಂಗಳ ಬಳಿಕ ಭೇಟಿಯಾಗುತ್ತಿರುವ ವೀಡಿಯೋ ಒಂದು ಭಾರೀ ವೈರಲ್‌ ಆಗಿದ್ದು, ಹಲವಾರು ದಿನಗಳ ಬಳಿಕ ಅಮ್ಮನನ್ನು ಕಂಡು ಈ ಮಕ್ಕಳು ಸಂತಸದಿಂದ ಕುಣಿದಿದ್ದಾರೆ.

ರಾಕ್ಸ್ ಚ್ಯಾಪ್‌ಮನ್‌ ಎಂಬವರು ಈ ವಿಡಿಯೋವನ್ನು ಟ್ವಿಟರ್‌ನಲ್ಲಿ ಶೇರ್‌ಮಾಡಿಕೊಂಡಿದ್ದಾರೆ. ಈ ಘಟನೆ ಕುರಿತು ವಿವರಣೆ ನೀಡಿರುವ ರಾಕ್ಸ್ “ಈಕೆ ಶಾರ್ಲೆಟ್‌, ಕೋವಿಡ್ ಅಟ್ಟಹಾಸದ ಸಂದರ್ಭದಲ್ಲಿ ಜನರ ಪ್ರಾಣ ಕಾಪಾಡುವ ಕಾರ್ಯದಲ್ಲಿ ತೊಡಗಿದ್ದರು. ಆ ಸಲುವಾಗಿಯೇ ತಮ್ಮ ಮಕ್ಕಳಿಂದ ಒಂಬತ್ತು ವಾರದಿಂದ ದೂರ ಉಳಿಯುವ ಪರಿಸ್ಥಿತಿ ಎದುರಾಗಿತ್ತು. ಈ ಹಿನ್ನೆಲೆಯಲ್ಲಿಯೇ ಶಾರ್ಲೆಟ್‌ ತನ್ನ 9 ವರ್ಷದ ಬೆಲಾ ಹಾಗೂ 7ವರ್ಷದ ಹ್ಯಾಟಿ ಎಂಬಿಬ್ಬರು ಮಕ್ಕಳನ್ನು ಆಕೆಯ ತಂಗಿಯ ಮನೆಯಲ್ಲಿ ಉಳಿಸಿಕೊಂಡಿದ್ದಳು. ಸುಮಾರು 9 ವಾರಗಳ ಕಾಲ ಈ ಮಕ್ಕಳು ತಾಯಿಯ ಮುಖವನ್ನೇ ನೋಡಿರಲಿಲ್ಲ’ ಎಂದು ಹೇಳಿದ್ದಾರೆ.

ಮಕ್ಕಳು ಕೂಡ ತಾಯಿಯನ್ನು ನೋಡಲು ತುಂಬಾ ಬಯಸುತ್ತಿದ್ದರು. ಮಕ್ಕಳ ಪ್ರಾರ್ಥನೆ ದೇವರಿಗೆ ತಲುಪಿತೋ ಎಂಬಂತೆ ಕೋವಿಡ್‌-19 ಸೋಂಕಿತರ ಶುಶ್ರೂಷೆಯಲ್ಲಿ ಸತತ 9 ವಾರಗಳಿಂದ ದುಡಿಯುತ್ತಿದ್ದ ಶಾರ್ಲೆಟ್‌ ಈಗ ಮನೆಗೆ ಹಿಂದಿರುಗಿದ್ದಾರೆ. ಮಕ್ಕಳಿಗೆ ಸರ್‌ಪ್ರೈಸ್‌ ನೀಡಬೇಕು ಎಂಬ ಉದ್ದೇಶದಿಂದ ಯಾವುದೇ ಪೂರ್ವ ಮಾಹಿತಿ ನೀಡದೇ ಮನೆಗೆ ಭೇಟಿ ನೀಡಿದ್ದಾಳೆ. ಮಕ್ಕಳು ತಮ್ಮ ಪಾಡಿಗೆ ಕುಳಿತು ಮಾತನಾಡುತ್ತಿದ್ದಾಗ, ಹಿಂಬದಿಯಿಂದ ಸದ್ದು ಮಾಡದೇ ಬಂದು ಮಕ್ಕಳ ತಲೆ ನೇವರಿಸುವ ದೃಶ್ಯ ವೀಡಿಯೋದಲ್ಲಿ ಸೆರೆಯಾಗಿದೆ.

ಇನ್ನು ತಮ್ಮ ಪಾಡಿಗೆ ಟಿವಿ ನೋಡುತ್ತಾ ಕಾಲ ಕಳೆಯುತ್ತಿದ್ದ ಮಕ್ಕಳಿಗೆ, “ಏನು ನೋಡುತ್ತಿದ್ದೀರಾ’ ಎಂಬ ಧ್ವನಿ ಹಿಂಬದಿಯಿಂದ ಕೇಳಿತು. ತಿರುಗಿ ನೋಡಿದಾಗ ಆಶ್ಚರ್ಯ ಕಾದಿತ್ತು. ಅಲ್ಲಿ ಅವರ ತಾಯಿ ನಿಂತಿದ್ದರು. ಎರಡು ತಿಂಗಳ ಬಳಿಕ ತಾಯಿಯನ್ನು ನೋಡಿದ ಅವರು ಖುಷಿಯಿಂದ ಕುಣಿದಾಡಿದ್ದಾರೆ. ಸಂತೋಷದಲ್ಲಿ ಅಮ್ಮನನ್ನು ಅಪ್ಪಿಕೊಂಡು ಅಳಲಾರಂಭಿಸಿದ್ದು, ತಾಯಿ ಮಕ್ಕಳ ವಾತ್ಸಲ್ಯದ ಈ ವೀಡಿಯೋ ಸದ್ಯ ಭಾರೀ ವೈರಲ್‌ ಆಗಿದೆ.

ಟಾಪ್ ನ್ಯೂಸ್

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

1—-wqwqeqwewqeq

India-born ಸುನೀತಾ ವಿಲಿಯಮ್ಸ್‌ ಇಂದು 3ನೇ ಬಾರಿ ನಭಕ್ಕೆ!: ಗಣೇಶನ ವಿಗ್ರಹ ಬಾಹ್ಯಾಕಾಶಕ್ಕೆ!

ಪ್ರಜ್ವಲ್‌ ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌

Prajwal Revanna ವೀಡಿಯೋ ಪ್ರಕರಣಕ್ಕೆ ತಿರುವು ಡಿಕೆಶಿ ವಿರುದ್ಧ ಆಡಿಯೋ ಬಾಂಬ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

1

Daily Horoscope: ಶುಭಸೂಚನೆಗಳೊಂದಿಗೆ ದಿನಾರಂಭಗೊಳ್ಳಲಿದೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

Mangaluru Airport; ನಾಲ್ಕು ತಿಂಗಳಲ್ಲಿ 4.45 ಕೋ.ರೂ. ಮೌಲ್ಯದ “ಚಿನ್ನ’ದ ಬೇಟೆ

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

ಇಂದು ವಿಶ್ವ ಅಸ್ತಮಾ ದಿನ; ದೈಹಿಕ- ಮಾನಸಿಕವಾಗಿ ಕುಗ್ಗಿಸುವ “ಅಸ್ತಮಾ’

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

108 ಆ್ಯಂಬುಲೆನ್ಸ್‌ ಸಿಬಂದಿ ಮುಷ್ಕರ: ಇಂದು ನಿರ್ಧಾರ

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Sullia ಮೊಬೈಲ್‌ ರಿಚಾರ್ಜ್‌ಗೆ ಬಂದ ಯುವತಿಯ ಫೋಟೋ ತೆಗೆದ ಆರೋಪ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.