ಕಪ್ಪತ್ತಗುಡ್ಡ ರಕ್ಷಣೆಗೆ ಜನಾಂದೋಲನ
Team Udayavani, Jun 10, 2020, 2:13 PM IST
ಮುಂಡರಗಿ: ಗದಗ, ಕೊಪ್ಪಳ, ಬಳ್ಳಾರಿ, ಹಾವೇರಿ ಜಿಲ್ಲೆಗಳ ಜೀವನಾಡಿ ಕಪ್ಪತ್ತಗುಡ್ಡವನ್ನು ಈ ಹಿಂದೆ ರಾಜ್ಯ ಸರಕಾರ ವನ್ಯಜೀವಿಧಾಮವೆಂದು ಘೋಷಿಸಿದೆ. ಬಂಡವಾಳ ಶಾಹಿಗಳ ಒತ್ತಡಕ್ಕೆ ಮನಿದು ಕಪ್ಪತ್ತಗುಡ್ಡದಲ್ಲಿ ಗಣಿಗಾರಿಕೆ ಮಾಡಲು ರಾಜ್ಯ ಸರಕಾರವು ವನ್ಯಜೀವಿಧಾಮ ಸ್ಥಾನಮಾನ ಹಿಂದಕ್ಕೆ ಪಡೆದರೆ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ತಾಲೂಕು ಅಭಿವೃದ್ಧಿ ಹೋರಾಟ ವೇದಿಕೆ ಅಧ್ಯಕ್ಷ ವೈ.ಎನ್. ಗೌಡರ ಹೇಳಿದರು.
ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಪ್ಪತ್ತಗುಡ್ಡಕ್ಕೆ ನೀಡಿರುವ ವನ್ಯಜೀವಿಧಾಮ ಸ್ಥಾನಮಾನ ಹಿಂಪಡೆದರೆ ಕಪ್ಪತಗುಡ್ಡ ಉಳಿಸಿ ಅಭಿಯಾನದೊಂದಿಗೆ ಕಾನೂನು ಸಮರ ನಡೆಸಲಾಗುವುದು. ವನ್ಯಜೀವಿಧಾಮದ ಸ್ಥಾನಮಾನವನ್ನು ಹಿಂಪಡೆಯಲು ರಾಜ್ಯ ಸರಕಾರದ ಮೇಲೆ ಈ ಭಾಗದ ಜನಪ್ರತಿನಿ ಧಿಗಳು ಒತ್ತಡ ಹೇರುವ ಹುನ್ನಾರ ನಡೆಸಿದ್ದಾರೆ. ಈ ಹಿಂದೆ ಕಪ್ಪತ್ತಗುಡ್ಡ ಭಾಗದ ಗ್ರಾಮ ಪಂಚಾಯಿತಿಗಳಲ್ಲಿ ವನ್ಯಜೀವಿಧಾಮ ಸ್ಥಾನಮಾನಕ್ಕಾಗಿ ಠರಾವು ಪಾಸು ಮಾಡಿ ಬೆಂಬಲ ಸೂಚಿಸಲಾಗಿತ್ತು.
ಆದರೆ ಈಗ ಶಾಸಕರು, ಸಂಸದರು ಬಂಡವಾಳಶಾಹಿಗಳ ಕುಮ್ಮಕ್ಕಿನಿಂದ ವನ್ಯಜೀವಿಧಾಮದ ಸ್ಥಾನಮಾನ ಹಿಂಪಡೆಯಲು ರಾಜ್ಯ ಸರಕಾರದ ಮೇಲೆ ಪರೋಕ್ಷವಾಗಿ ಪ್ರಭಾವ ಬೀರುತ್ತಿದ್ದಾರೆ. ಕಪ್ಪತ್ತಗುಡ್ಡ ಅಪರೂಪದ ಸಸ್ಯ ಸಂಪತ್ತು ಹೊಂದಿದೆ. ಗಣಗಾರಿಕೆಯು ನಡೆದರೇ ಕಪ್ಪತ್ತಗುಡ್ಡದ ಪರಿಸರ ನಾಶವಾಗಲಿದೆ. ಅಪರೂಪದ ಸಸ್ಯ ಸಂಪತ್ತು, ಸಸ್ಯ ವೈವಿಧ್ಯತೆ, ಜೀವಿ ವೈವಿಧ್ಯತೆಯನ್ನು ಉಳಿಸಿಕೊಳ್ಳುವ ಹೊಣೆಗಾರಿಕೆಯು ಪ್ರತಿಯೊಬ್ಬ ನಾಗರಿಕರದ್ದು ಆಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Central Government ನೀಡಿದ ಬರ ಹಣ ಶೀಘ್ರವೇ ರೈತರ ಖಾತೆಗೆ ಜಮಾ: ಕೃಷ್ಣ ಬೈರೇಗೌಡ
ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ
ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ
ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ
Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು
MUST WATCH
ಹೊಸ ಸೇರ್ಪಡೆ
Dharwad; ಗುಜರಾತ್ ನಿಂದ ಓಡಿ ಹೋದ 12 ಉದ್ಯಮಿಗಳ ಬಗ್ಗೆ ಮಾತನಾಡಿ: ಮೋದಿಗೆ ಲಾಡ್ ಸವಾಲು
Kidnapped: ಹಾಡ ಹಗಲೇ ಮಹಿಳೆಯಿಂದ ಹೋಟೆಲ್ ಮಾಲೀಕನ ಮಗನ ಅಪಹರಣ: CCTVಯಲ್ಲಿ ದೃಶ್ಯ ಸೆರೆ
Jasti Preethi; ಫೇಸ್ ಬುಕ್ ಪೋಸ್ಟ್ ಸಿನಿಮಾವಾಯಿತು..
Eco-friendly Bio Plastic: ಪರಿಸರ ಸ್ನೇಹಿ ಮೆಕ್ಕೆಜೋಳದ ಬಯೋ ಪ್ಲಾಸ್ಟಿಕ್
Aranthodu: ವಾಹನಗಳ ಮಧ್ಯೆ ಸರಣಿ ಅಪಘಾತ; ಬೈಕ್ ಸವಾರ ಗಂಭೀರ ಗಾಯ