ಇಂಡೋನೇಷ್ಯಾ: ದಾಖಲೆ ಏರಿಕೆ ; ಇಂಡೋನೇಷ್ಯಾ ಒಂದೇ ದಿನ 1043 ಪಾಸಿಟಿವ್‌ ಕೇಸು


Team Udayavani, Jun 10, 2020, 2:20 PM IST

ಇಂಡೋನೇಷ್ಯಾ: ದಾಖಲೆ ಏರಿಕೆ ; ಇಂಡೋನೇಷ್ಯಾ ಒಂದೇ ದಿನ 1043 ಪಾಸಿಟಿವ್‌ ಕೇಸು

ಸಾಂದರ್ಭಿಕ ಚಿತ್ರ

ಜಕಾರ್ತಾ: ಲಾಕ್‌ಡೌನ್‌ ಸಡಿಲಗೊಳಿಸಿದ ಬಳಿಕ ಇಂಡೋನೇಷ್ಯಾದಲ್ಲಿ ದಾಖಲೆಯ ಸಂಖ್ಯೆಯಲ್ಲಿ ಕೋವಿಡ್‌ ಸೋಂಕು ಪ್ರಕರಣಗಳು ಏರಿಕೆ ಕಂಡಿವೆ.  ಮಂಗಳವಾರ ಒಂದೇ ದಿನ 1043 ಪಾಸಿಟಿವ್‌ ಕೇಸುಗಳು ಪತ್ತೆಯಾಗಿವೆ. ಇಂಡೋನೇಷ್ಯಾದ ಆರೋಗ್ಯ ಸಚಿವಾಲಯದ ಪ್ರಕಾರ, ದೇಶದಲ್ಲಿ 33076 ಪ್ರಕರಣಗಳು ಕಂಡು ಬಂದಿದ್ದು, 1923 ಮಂದಿ ಸಾವಿಗೀಡಾಗಿದ್ದಾರೆ. ಒಟ್ಟು 14414 ಮಂದಿ ಕೋವಿಡ್‌ನಿಂದ ಗುಣಮುಖರಾಗಿದ್ದಾರೆ.

ಈ ಮೊದಲು ಜಕಾರ್ತದಲ್ಲಿ ಕೋವಿಡ್‌ ಪಾಸಿಟಿವ್‌ ಪ್ರಕರಣಗಳು ಇಳಿಕೆಯಾಗುತ್ತಿವೆ ಎಂದು ಹೇಳಲಾಗುತ್ತಿತ್ತು. ಆದರೆ ಒಂದೇ ದಿನ 232 ಕೇಸುಗಳು ಪತ್ತೆಯಾಗಿದ್ದು ಇಡೀ ನಗರವನ್ನು ಬೆಚ್ಚಿ ಬೀಳಿಸಿವೆ. ಲಾಕ್‌ಡೌನ್‌ ಸಡಿಲವಾದ್ದರಿಂದ ಇಲ್ಲಿನ ಜನಜೀವನ ಸಹಜ ಸ್ಥಿತಿಗೆ ಬರುತ್ತಿದ್ದು, ಜನರ ಓಡಾಟವೂ ಹೆಚ್ಚಿತ್ತು ಎಂದು ಹೇಳಲಾಗಿದೆ. ಲಾಕ್‌ಡೌನ್‌ ಅನ್ನು ತರಾತುರಿಯಲ್ಲಿ ಸಡಿಲಗೊಳಿಸಿರುವುದು ಮತ್ತು ಸರಕಾರದ ಕ್ರಮಗಳಿಂದಾಗಿ ಪ್ರಕರಣಗಳು ದೇಶದ ವಿವಿಧೆಡೆ ಏರಿಕೆ ಕಂಡಿವೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ಅದರಲ್ಲೂ ರಾಜಧಾನಿ ಜಕಾರ್ತದಲ್ಲಿ ಕೋವಿಡ್‌ ಪ್ರಕರಣಗಳು ಹೆಚ್ಚಿರುವುದು ನಗರ ವಾಸಿಗಳನ್ನು ಬೆಚ್ಚಿ ಬೀಳಿಸಿದೆ.  ಇನ್ನು ಪೂರ್ವ ಜಾವಾದಲ್ಲಿ 180 ಪ್ರಕರಣಗಳು ಕಂಡು ಬಂದಿದ್ದು, ದಕ್ಷಿಣ ಕಲಿಮಂತನ್‌ನಲ್ಲಿ 91 ಪ್ರಕರಣಗಳು ಕಂಡು ಬಂದಿವೆ.

ಈ ಮೊದಲು ಶನಿವಾರ ದೇಶದಲ್ಲಿ 993 ಪ್ರಕರಣ ಗಳು ಕಂಡು ಬಂದಿದ್ದು ಇದು ಈವರೆಗಿನ ಸರ್ವಾಧಿಕ ದಾಖಲೆಯಾಗಿತ್ತು.  ಕೋವಿಡ್‌ ಲಾಕ್‌ಡೌನ್‌ ತೆರವುಗೊಂಡ ಬಳಿಕ ಪ್ರತ್ಯೇಕ ನಿಯಮಗಳನ್ನು ಇಂಡೋನೇಷ್ಯಾ ಸರಕಾರ ಜಾರಿ ಮಾಡಿದ್ದು, ಸಮೂಹಕ್ಕೆ ಅನ್ವಯವಾಗುವಂತಹ ಕಾನೂನುಗಳನ್ನು ಜಾರಿಗಳಿಸಿತ್ತು. ಅದರಂತೆ ಎ.10ರಿಂದ ಈ ನಿಯಮಗಳು ಜಾರಿ ಯಾಗಿದ್ದವು. ಶಾಲೆ, ಕಚೇರಿ, ಧಾರ್ಮಿಕ ಕೇಂದ್ರಗಳು ಮುಚ್ಚಿದ್ದವು. ಸೋಮವಾರದಿಂದ ಇವುಗಳನ್ನು ತೆರೆಯಲು ಉದ್ದೇಶಿಸಲಾಗಿತ್ತ. ಅದರಂತೆ ರೆಸ್ಟೋರೆಂಟ್‌ಗಳು, ಕಚೇರಿಗಳು, ಮೃಗಾಲಯಗಳು ತೆರೆದುಕೊಂಡಿದ್ದವು.

ಜಕಾರ್ತ ನಗರದಲ್ಲಿ ಸಾರ್ವಜನಿಕ ಸಾರಿಗೆಯನ್ನು ಆರಂಭಿಸಲು ಅನುಮತಿ ನೀಡಿತ್ತು. ವಾಹನಗಳ ಓಡಾಟಕ್ಕೆ ಮುಕ್ತ ಅವಕಾಶವನ್ನು ಕಲ್ಪಿಸಲಾಗಿತ್ತು.  ಕೋವಿಡ್‌ ಪ್ರಕರಣಗಳು ಕಡಿಮೆಯಾಗುತ್ತಿದ್ದಂತೆಯೇ ಜಕಾರ್ತದಲ್ಲಿ ರೆಡ್‌ಝೋನ್‌ಗಳಿಂದ ಗ್ರೀನ್‌ ಝೋನ್‌ಗಳಿಗೆ ಮತ್ತು ಯಲ್ಲೋ ಝೋನ್‌ಗಳಿಗೆ ಸಾರ್ವಜನಿಕ ಸಾರಿಗೆ ಮತ್ತು ವಾಹನಗಳ ಓಡಾಟಕ್ಕೆ ಅನುಮತಿ ಕಲ್ಪಿಸಿದ್ದಾಗಿ ಅಲ್ಲಿನ ಗವರ್ನರ್‌ ಅನೀಸ್‌ ಬಾಸ್ವೀಡನ್‌ ಅವರು ಹೇಳಿದ್ದರು.

ಟಾಪ್ ನ್ಯೂಸ್

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

Covid-19: ಕೋವಿಡ್ ಭೀತಿ; ಮೂರು ರಾಜ್ಯಗಳಲ್ಲಿ ಮಾಸ್ಕ್‌ ಕಡ್ಡಾಯ

UP government mandates Covid testing for arriving international passengers

Covid 19 ವಿದೇಶದಿಂದ ಬರುವವರಿಗೆ ಕೋವಿಡ್ ಟೆಸ್ಟ್ ಕಡ್ಡಾಯ ಮಾಡಿದ ಉತ್ತರ ಪ್ರದೇಶ ಸರ್ಕಾರ

mansukh mandaviya

ಕೋವಿಡ್ ಗೂ ಹೃದಯಾಘಾತಕ್ಕೂ ಸಂಬಂಧವಿದೆಯೇ? ಉತ್ತರ ನೀಡಿದ ಕೇಂದ್ರ ಆರೋಗ್ಯ ಸಚಿವ

India Sees Single-Day Rise Of Over 1,000 Covid-19 Cases

ಎಚ್3ಎನ್2 ಭೀತಿಯ ಮಧ್ಯೆ ಕೋವಿಡ್ ಏರಿಕೆ; ಒಂದೇ ದಿನ ಸಾವಿರ ದಾಟಿದ ಸೋಂಕಿತರ ಸಂಖ್ಯೆ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

ಕೋವಿಡ್ 19 ಲಸಿಕೆಯಿಂದ ಅಡ್ಡಪರಿಣಾಮ ಇರೋದು ನಿಜ: RTIನಲ್ಲಿ ಕೇಂದ್ರದ ಉತ್ತರ ಬಹಿರಂಗ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.