ಉಡುಪಿ ಜಿಲ್ಲೆಯಾದ್ಯಂತ ಮುಂಗಾರು ಚುರುಕು


Team Udayavani, Jun 11, 2020, 5:29 AM IST

ಉಡುಪಿ ಜಿಲ್ಲೆಯಾದ್ಯಂತ ಮುಂಗಾರು ಚುರುಕು

ಉಡುಪಿ: ಜಿಲ್ಲೆಯಾದ್ಯಂತ ಮುಂಗಾರು ಚುರುಕು ಪಡೆದುಕೊಂಡಿದೆ. ಬುಧವಾರ ಸಂಜೆ ವೇಳೆಗೆ ಜಿಲ್ಲೆಯ ಹಲವು ಭಾಗಗಳಲ್ಲಿ ಮಳೆಯಾಗಿದೆ.

ಜೂ.12ರಿಂದ 15ರ ವರೆ‌ಗೆ ಕರಾವಳಿ ಭಾಗದಲ್ಲಿ ಭಾರೀ ಗಾಳಿ, ಮಳೆ ಆಗುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಬುಧವಾರ ಮುನ್ಸೂಚನೆ ನೀಡಿದ್ದು, ಅದರ ಬೆನ್ನಲ್ಲೆ ಜಿಲ್ಲೆಯಾದ್ಯಂತ ಮಳೆಯ ತೀವ್ರತೆ ಬಿರುಸು ಪಡೆದುಕೊಂಡಿದೆ.

ನಗರದಲ್ಲಿ ಬೆಳಗ್ಗೆ ತುಸು ಕಾಲ ಸಾಧಾರಣ ಮಳೆಯಾಗಿತ್ತು. ಬಳಿಕ ಮಧ್ಯಾಹ್ನದ ತನಕವೂ ಮೋಡದ ವಾತಾವರಣ ಮುಂದುವರಿದಿತ್ತು. ಅನಂತರದಲ್ಲಿ ಕೆಲಸ ಸಮಯ ಬಿಸಿಲಿನ ವಾತಾವರಣ ಕಂಡು ಬಂದಿತ್ತಾದರೂ, ಸಂಜೆ ವೇಳೆಗೆ ಮಳೆ ಸುರಿದಿದೆ. ಮಳೆಯಿಂದ ನಗರದ ಜನಜೀವನ ಅಸ್ತವ್ಯಸ್ತಗೊಂಡಿತ್ತು.

ನಗರ, ಮಣಿಪಾಲ, ಉದ್ಯಾವರ. ಮಲ್ಪೆ, ಕರಾವಳಿ, ಬನ್ನಂಜೆ, ಶಿರಿಬೀಡು, ಕಲ್ಸಂಕ, ಎಂಜಿಎಂ, ಸಿಂಡಿಕೇಟ್‌ ಸರ್ಕಲ್‌, ಟೈಗರ್‌ ಸರ್ಕಲ್‌, ಎಂಐಟಿ ಜಂಕ್ಷನ್‌, ಪರ್ಕಳ, ಪುತ್ತೂರು, ಬೈಲೂರು, ದೊಡ್ಡಣಗುಡ್ಡೆ, ಆದಿ ಉಡುಪಿ, ಇಂದ್ರಾಳಿ, ಮಲ್ಪೆ ಪರಿಸರ ಮುಂತಾದೆಡೆಗಳಲ್ಲಿ ಉತ್ತಮ ಮಳೆಯಾಗಿತ್ತು.

ಮಳೆಗೆ ನಗರ ಹಾಗೂ ಇತರ ಪ್ರದೇಶಗಳ ಅನೇಕ ಕಡೆಗಳಲ್ಲಿ ರಸ್ತೆ ಮೇಲೆ ನೀರು ಹರಿದು ಸಂಚಾರಕ್ಕೆ ಅಡಚಣೆಯಾಯಿತು. ಹೆದ್ದಾರಿ ಹಾಗೂ ಒಳಭಾಗಗಳ ರಸ್ತೆಗಳ ಎರಡು ಪಾರ್ಶ್ವಗಳಲ್ಲಿ ಮಳೆ ನೀರು ಸರಿಯಾಗಿ ಹರಿದು ಹೋಗಲು ಸೂಕ್ತ ಚರಂಡಿ ವ್ಯವಸ್ಥೆಯಿಲ್ಲದೆ ಎತ್ತರ ಪ್ರದೇಶದಿಂದ ನೀರು ತಗ್ಗು ಪ್ರದೇಶಗಳ ಕಡೆಗೆ ಹರಿದು ಬಂದಿತ್ತು. ಪರಿಣಾಮ ತಗ್ಗು ಪ್ರದೇಶಗಳ ಸ್ಥಳಗಳಲ್ಲಿ ನೀರು ನಿಂತು ವಾಹನ ಸವಾರರು, ಪಾದಚಾರಿಗಳು ತೊಂದರೆ ಅನುಭವಿಸಿದರು.

ಮಂಗಳವಾರ ತಡರಾತ್ರಿ ಕೂಡ ಜಿಲ್ಲೆಯ ಹಲವು ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಉತ್ತಮ ಮಳೆಯಾಗಿತ್ತು. ಬುಧವಾರ ನಸುಕಿನಲ್ಲೂ ಗುಡುಗು, ಮಿಂಚು ಮಳೆಯಾಗಿದೆ.ನಗರದಲ್ಲಿ ಕಳೆದ ಕೆಲ ದಿನಗಳಿಂದ ಮಳೆ ಬಂದು ಹೋಗುವುದು ಮಾಡುತ್ತಿತ್ತು. ಆದರೆ ಇದೀಗ ಮಳೆ ಚುರುಕು ಗೊಂಡಿರುವುದರಿಂದ ಮುಂದಿನ ದಿನಗಳಲ್ಲಿ ಪೂರ್ಣ ಮಳೆ ಹಿಡಿಯುವ ಲಕ್ಷಣಗಳು ಕಾಣಿಸಿಕೊಳ್ಳುತ್ತಿವೆ. ಬುಧವಾರ ಸಂಜೆ ಹೊತ್ತು ಸುದೀರ್ಘ‌ ಅವಧಿ ಮಳೆ ಸುರಿದ ಕಾರಣ ಕೊಡೆ ಇಲ್ಲದೆ ನಾಗರಿಕರು, ಉದ್ಯೋಗಿಗಳು ಒದ್ದೆಯಾಗಿ ಓಡಾಡುತ್ತಿದ್ದ ದೃಶ್ಯ ನಗರದ ಅಲ್ಲಲ್ಲಿ ಕಂಡುಬಂತು.

ಕಾರ್ಕಳದಲ್ಲೂ ಮಳೆ
ಕಾರ್ಕಳ, ಹೆಬ್ರಿ, ಕಾಪು ಈ ಎಲ್ಲ ತಾಲೂಕುಗಳಲ್ಲಿ ಕೂಡ ಉತ್ತಮ ಮಳೆಯಾದ ಬಗ್ಗೆ ವರದಿಯಾಗಿದೆ. ಬೆಳ್ಮಣ್‌, ಮುಂಡ್ಕೂರು ಪರಿಸರದಲ್ಲಿ ಗುಡುಗು ಸಹಿತ ಉತ್ತಮ ಮಳೆಯಾಗಿದೆ. ಜಿಲ್ಲೆಯಲ್ಲಿ ಹಾನಿ ಸಂಭವಿಸಿದ ಬಗ್ಗೆ ಇದುವರೆಗೆ ವರದಿಯಾಗಿಲ್ಲ.

ಕುಂದಾಪುರದಲ್ಲೂ ಬಿರುಸಿನ ಮಳೆ
ಕುಂದಾಪುರ ನಗರವೂ ಸೇರಿದಂತೆ ತಾಲೂಕಿನ ವಿವಿ ಧೆಡೆ ಮಂಗಳವಾರ ರಾತ್ರಿ ಹಾಗೂ ಬುಧವಾರ ಬೆಳಗ್ಗೆ, ಸಂಜೆ ಉತ್ತಮ ಮಳೆಯಾಗಿದೆ. ಬುಧವಾರ ಬೆಳಗ್ಗೆವರೆಗೆ ನಾವುಂದ 11, ಕಾಳಾವರ 5, ಶಂಕರ ನಾರಾಯಣ 6, ಬಿಜೂರು 14, ಹೆಂಗವಳ್ಳಿ 6, ಕೋಣಿ 6, ಕುಂಭಾಶಿ 18, ಮೊಳಹಳ್ಳಿ 4, ಚಿತ್ತೂರು 14, ಗಂಗೊಳ್ಳಿ 7, ಗುಜ್ಜಾಡಿ 7, ಹಕ್ಲಾಡಿ 12, ಹೆಮ್ಮಾಡಿ 5, ಕಟ್‌ಬೆಲೂ¤ರು 4, ತಗ್ಗರ್ಸೆ 19 ಮಿ.ಮೀ. ಮಳೆಯಾಗಿದೆ. ಕೋಟೇಶ್ವರ, ಬೀಜಾಡಿ, ಗೋಪಾಡಿ, ವಕ್ವಾಡಿ, ಕಾಳಾವರ, ಉಳೂ¤ರು, ಬಿದ್ಕಲ್‌ಕಟ್ಟೆ , ಪರಿಸರದಲ್ಲಿ ಗುಡುಗು ಸಹಿತ ಉತ್ತಮ ಮಳೆಯಾಗಿದೆ. ಸಿದ್ದಾಪುರ, ಹೊಸಂಗಡಿ, ಯಡಮೊಗೆ, ಹಳ್ಳಿಹೊಳೆ, ಆಜ್ರಿ, ಅಂಪಾರು, ಶಂಕರನಾರಾಯಣ, ಹಾಲಾಡಿ, ಗೋಳಿಯಂಗಡಿ, ಬೆಳ್ವೆ , ಮಡಾಮಕ್ಕಿ , ಹೆಂಗವಳ್ಳಿ , ಅಮಾಸೆಬೈಲು, ಉಳ್ಳೂರು-74 , ಬಸ್ರೂರು ಪರಿಸರದಲ್ಲಿ ಉತ್ತಮ ಮಳೆಯಾಗಿದೆ.

ಟಾಪ್ ನ್ಯೂಸ್

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.