ಪಿಲಿಕುಳ ನಿಸರ್ಗಧಾಮ ಸಾರ್ವಜನಿಕ ಪ್ರವೇಶಕ್ಕೆ ಮುಕ್ತ

ಕೋವಿಡ್-19 ನಿಯಂತ್ರಣ ಮಾರ್ಗಸೂಚಿ ಪಾಲನೆ‌

Team Udayavani, Jun 11, 2020, 5:51 AM IST

ಪಿಲಿಕುಳ ನಿಸರ್ಗಧಾಮ ಸಾರ್ವಜನಿಕ ಪ್ರವೇಶಕ್ಕೆ ಮುಕ್ತ

ಮಹಾನಗರ: ಲಾಕ್‌ಡೌನ್‌ ಸಡಿಲಿಕೆ ಆದ ಹಿನ್ನೆಲೆಯಲ್ಲಿ ಪಿಲಿಕುಳದ ಡಾ| ಶಿವರಾಮ ಕಾರಂತ ನಿಸರ್ಗಧಾಮ ಬುಧವಾರದಿಂದ ಸಾರ್ವಜನಿಕ ಪ್ರವೇಶಕ್ಕೆ ತೆರೆದುಕೊಂಡಿದೆ.

ಪಿಲಿಕುಳದಲ್ಲಿ ಪ್ರವಾಸಿಗರು ತೆರಳುವ ವ್ಯಾಪ್ತಿ ಹಾಗೂ ಪ್ರಾಣಿಗಳ ಆವರಣದ ಹೊರಭಾಗದಲ್ಲಿ ಸ್ಯಾನಿಟೈಸರ್‌ ಮಾಡಿ ಎಚ್ಚರಿಕೆ ಕೈಗೊಳ್ಳಲಾಯಿತು. ಪ್ರತಿದಿನ ಬೆಳಗ್ಗೆ ಹಾಗೂ ಸಂಜೆ ಸ್ಯಾನಿಟೈಸರ್‌ ಮಾಡಲಾಗುತ್ತಿದೆ.

ಬುಧವಾರ ಬೆಳಗ್ಗೆ ಕಚೇರಿಯಲ್ಲಿ ಪೂಜೆ ಸಲ್ಲಿಸಿ ಸಾರ್ವಜನಿಕ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಯಿತು. ಮಳೆ ಇದ್ದ ಕಾರಣ ಮೊದಲ ದಿನ ಪ್ರವಾಸಿಗರ ಸಂಖ್ಯೆ ಕಡಿಮೆಯಾಗಿತ್ತು. ಕೋವಿಡ್-19 ನಿಯಂತ್ರಣ ಮಾರ್ಗಸೂಚಿಯನ್ನು ಪಾಲಿಸಿಕೊಳ್ಳುವ ನಿಟ್ಟಿನಲ್ಲಿ ಇಲ್ಲಿ ವಿಶೇಷ ಒತ್ತು ನೀಡಲಾಗಿದೆ.

ಪಿಲಿಕುಳ ನಿಸರ್ಗಧಾಮದ ಆಕರ್ಷಣೆ ವೀಕ್ಷಿಸಲು ಭೇಟಿ ನೀಡುವ ಸಮಯದಲ್ಲಿ ಜನರು ಕನಿಷ್ಠ 6 ಅಡಿ ಭೌತಿಕ ಅಂತರವನ್ನು ಕಾಯ್ದುಕೊಳ್ಳಬೇಕು ಎಂಬ ಸೂಚನೆ ನೀಡಲಾಗುತ್ತಿದೆ. ಮಾಸ್ಕ್ ಧರಿಸದಿದ್ದವರಿಗೆ ಪ್ರವೇಶ ನಿರಾಕರಿಸಲಾಗುತ್ತಿದೆ. ಆಗಮಿಸುವ ಎಲ್ಲ ಸಂದರ್ಶಕರನ್ನು ಥರ್ಮಲ್‌ ಸ್ಕ್ಯಾನಿಂಗ್‌ ಮೂಲಕ ತಪಾಸಣೆ ನಡೆಸಿ ದೇಹದ ಉಷ್ಣತೆ ಮಿತಿಗಿಂತ ಹೆಚ್ಚಿದ್ದರೆ ಅಂತಹ ವ್ಯಕ್ತಿಗಳಿಗೆ, ಜ್ವರ, ಕೆಮ್ಮು, ಶೀತ, ಗಂಟಲು ನೋವು ಅಥವಾ ಉಸಿರಾಟದ ತೊಂದರೆ ಇದ್ದವರಿಗೆ ಪ್ರವೇಶ ನಿರಾಕರಿಸಲಾಗುತ್ತದೆ ಎಂದು ಪಿಲಿಕುಳ ಮೃಗಾಲಯದ ಪ್ರಮುಖರು ತಿಳಿಸಿದ್ದಾರೆ.

ಮಾಂಸದ ಕೊರತೆ ಈಗ ಇಲ್ಲ!
ಜೈವಿಕ ಉದ್ಯಾನವನದಲ್ಲಿ ಸುಮಾರು 100ಕ್ಕೂ ಹೆಚ್ಚು ಜಾತಿಯ 1,200ರಷ್ಟು ಪ್ರಾಣಿ-ಪಕ್ಷಿಗಳಿವೆ. ಇದರಲ್ಲಿ 13 ಹುಲಿ, 4 ಸಿಂಹ, 12 ಚಿರತೆ, 2 ಕರಡಿ, ಕಾಡುಬೆಕ್ಕು, ಚಿರತೆ ಬೆಕ್ಕು ಸಹಿತ ಹಲವು ಮಾಂಸಾಹಾರಿ ಪ್ರಾಣಿಗಳಿವೆ. ನಿತ್ಯ ಇವುಗಳಿಗೆ ಸುಮಾರು 150 ಕೆ.ಜಿ.ಗಿಂತಲೂ ಹೆಚ್ಚು ವಿವಿಧ ರೀತಿಯ ಮಾಂಸ, ಸುಮಾರು 50 ಕೆ.ಜಿ. ಕೋಳಿ ಮಾಂಸ ಅಗತ್ಯವಿದೆ. ಇದರಲ್ಲಿ ಪ್ರತಿ ಹುಲಿಗೆ ದಿನಕ್ಕೆ 8ರಿಂದ 10 ಕಿಲೋ ಮಾಂಸ ಅಗತ್ಯವಿದೆ. ಇದನ್ನು ಪ್ರತಿದಿನ ಆಡಳಿತ ಮಂಡಳಿಯು ಟೆಂಡರ್‌ ಪಡೆದವರಿಂದ ತರಿಸುತ್ತದೆ. ಆದರೆ ದೇಶಾದ್ಯಂತ ಲಾಕ್‌ಡೌನ್‌ ಆದ ಬಳಿಕ ಇಲ್ಲಿನ ಪ್ರಾಣಿಗಳಿಗೆ ಮಾಂಸದ ಕೊರತೆ ಎದುರಾಗಿತ್ತು. ಬದಲಾಗಿ ಕೋಳಿ ಮಾಂಸ ಕೆಲವು ಸಮಯ ನೀಡಲಾಗಿತ್ತು. ಲಾಕ್‌ಡೌನ್‌ ಸಡಿಲಿಕೆ ಆದ ಹಿನ್ನೆಲೆಯಲ್ಲಿ ಈ ಸಮಸ್ಯೆ ಈಗ ನಿವಾರಣೆಯಾಗಿದೆ.

ತಾರಾಲಯಕ್ಕೆ ಪ್ರವೇಶವಿಲ್ಲ
ಪಿಲಿಕುಳದ ಜೈವಿಕ ಉದ್ಯಾನ, ಲೇಕ್‌ ಗಾರ್ಡನ್‌, ಸಂಸ್ಕೃತಿ ಗ್ರಾಮ, ಆಬೋìರೇಟಮ್‌ ಮತ್ತು ಗುತ್ತು ಮನೆಯ ಆಕರ್ಷಣೆಗಳನ್ನು ಮಾತ್ರ ಸಾರ್ವಜನಿಕರ ವೀಕ್ಷಣೆಗೆ ಸದ್ಯ ತೆರೆಯಲಾಗಿದೆ. ಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ತಾರಾಲಯಗಳಿಗೆ ಸದ್ಯಕ್ಕೆ ಸಾರ್ವಜನಿಕ ಪ್ರವೇಶವಿಲ್ಲ.

 ಸುರಕ್ಷತೆಗೆ ಕ್ರಮ
ಪಿಲಿಕುಳದ ಡಾ| ಶಿವರಾಮ ಕಾರಂತ ನಿಸರ್ಗಧಾಮ ಬುಧವಾರದಿಂದ ಸಾರ್ವಜನಿಕ ಪ್ರವೇಶಕ್ಕೆ ತೆರೆದುಕೊಂಡಿದೆ. ಪ್ರವಾಸಿಗರ ಆರೋಗ್ಯ ಸುರಕ್ಷತೆಗಾಗಿ ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ. ಪರಿಸರದಲ್ಲಿ ಪ್ರತಿದಿನ ಸ್ಯಾನಿಟೈಸ್‌ ಮಾಡಲಾಗುತ್ತಿದೆ. ಎಲ್ಲ ಪ್ರವಾಸಿಗರು ಮಾಸ್ಕ್ ಧರಿಸಿಕೊಂಡು ಬರಬೇಕು.
-ಎಚ್‌.ಜಯಪ್ರಕಾಶ್‌ ಭಂಡಾರಿ
ನಿರ್ದೇಶಕ, ಪಿಲಿ ಕುಳ ಜೈವಿಕ ಉದ್ಯಾನವನ

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.