ಶಿಕ್ಷಣಕ್ಕಿಂತ ಮಕ್ಕಳ ಆರೋಗ್ಯ ಮುಖ್ಯ
Team Udayavani, Jun 11, 2020, 6:28 AM IST
ಚನ್ನಪಟ್ಟಣ: ಕೋವಿಡ್ 19 ಸಂಕಷ್ಟದಲ್ಲಿ ಶಿಕ್ಷಣಕ್ಕಿಂತ ಮಕ್ಕಳ ಆರೋಗ್ಯ ಮುಖ್ಯ ಎಂದು ಬಾಲು ಪಬ್ಲಿಕ್ ಶಾಲೆ ಸಂಸ್ಥಾಪಕ ಕಾರ್ಯದರ್ಶಿ ವಿ.ವೆಂಕಟಸುಬ್ಬಯ್ಯ ಚೆಟ್ಟಿ ಹೇಳಿದರು.ಪಟ್ಟಣದ ಬಾಲು ಪಬ್ಲಿಕ್ ಶಾಲೆಯಲ್ಲಿ ಆಯೋಜಿಸಲಾಗಿದ್ದ ಪೋಷಕರ ಸಭೆಯಲ್ಲಿ ಮಾತನಾಡಿ, ಆರೋಗ್ಯದಿಂದಿದ್ದರೆ ಶಿಕ್ಷಣ ಪಡೆಯಬಹುದು.
ಸರ್ಕಾರ ನೀಡುವ ಆದೇಶದ ಮೇಲೆ ಕೋವಿಡ್ 19 ನಿಯಂತ್ರಿಸುವ ನಿಟ್ಟಿನಲ್ಲಿ ಹಾಗೂ ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರದಂತೆ ಎಚ್ಚರಿಕೆ ವಹಿಸಿ ಪೋಷಕರ ಅಭಿಪ್ರಾಯ ಪಡೆದು ಶಾಲೆ ಪ್ರಾರಂಭಕ್ಕೆ ಸಿದಟಛಿತೆ ಮಾಡಿಕೊಳ್ಳಲಾಗುವುದು ಎಂದರು. ಕೋವಿಡ್ 19 ಹಾವಳಿಯ ಸಂದರ್ಭದಲ್ಲಿ ಶಾಲೆ ಆರಂಭಿಸಬೇಕೋ ಬೇಡವೋ ಎಂಬ ಬಗ್ಗೆ ಪೋಷಕರ ಅಭಿಪ್ರಾಯ ಪಡೆಯಲಾಗುತ್ತಿದೆ.
ಒಬ್ಬರಿಂದ ಒಬ್ಬರಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಕೈಗೆ ಪ್ರತಿ ಗಂಟೆಗೊಮ್ಮೆ ಶುಚಿಗೊಳಿಸಬೇಕು. ಮುಖಕ್ಕೆ ಮಾಸ್ಕ್ ಹಾಕುವುದರ ಜೊತೆಗೆ ಅನಾರೋಗ್ಯ ಪೀಡಿತರೊಂದಿಗಿನ ಸಂಪರ್ಕ ಬಿಡಬೇಕು ಎಂದು ತಿಳಿಸಿದರು. ಶಾಲೆ ಜಂಟಿ ಕಾರ್ಯದರ್ಶಿ ವಿ.ಬಾಲಸುಬ್ರಮಣ್ಯಂ ಮಾತನಾಡಿ, ಶಾಲೆ ಆರಂಭಿಸುವುದು ಮುಖ್ಯವಲ್ಲ. ಮಕ್ಕಳ ಆರೋಗ್ಯ ಮುಖ್ಯ.
ಭವಿಷ್ಯದ ಮುಂದಿನ ಪ್ರಜೆಗಳಾದ ಮಕ್ಕಳ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರದಂತೆ ಜಾಗ್ರತೆ ವಹಿಸುವುದು ನಮ್ಮ ಜವಾಬ್ದಾರಿ ಎಂದರು. ಕೆಲ ಪೋಷಕರು ಕೋವಿಡ್ 19 ಹರಡುತ್ತಿರುವಾಗ ಶಾಲೆ ಆರಂಭಿಸುವುದು ಸರಿಯಲ್ಲ ಎಂದರೆ ಕೆಲವರು ಸೂಕ್ತ ಮುಂಜಾಗ್ರತೆ ಕ್ರಮ ಕೈಗೊಂಡು ಆರಂಭಿಸಬಹುದು ಎಂದರು. ಶಾಲೆ ಪ್ರಾಂಶುಪಾಲರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tourist spot: ಪ್ರವಾಸಿಗರ ಡೆತ್ಸ್ಪಾಟ್ ಆಗಿರುವ ಸಂಗಮ
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ
MUST WATCH
ಹೊಸ ಸೇರ್ಪಡೆ
Yogendra Yadav:ಕೃಷಿ ಉಳಿಯಬೇಕಾದರೆ ರೈತರು ಕಾಂಗ್ರೆಸ್ಗೆ ಮತಹಾಕಲಿ: ಯೋಗೇಂದ್ರ ಯಾದವ್
Manipal ಆಸ್ಪತ್ರೆಯ ಡಾ.ರಾಮದಾಸ್ ಪೈ ಬ್ಲಾಕ್; 161 ವಿಶೇಷ ಹಾಸಿಗೆಗಳ ವಾರ್ಡ್ ಸೇವೆ ಆರಂಭ
ರಜಿನಿಕಾಂತ್ ʼಕೂಲಿʼಯಲ್ಲಿ ಅನುಮತಿಯಿಲ್ಲದೆ ಹಾಡು ಬಳಕೆ: ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ
Viral: ಮದುವೆಯ ದಿನ ವಧುವಿಗೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಭಾವಚಿತ್ರ ಉಡುಗೊರೆ ನೀಡಿದ ವರ
ಅಯ್ಯೋ ಬಿಸಿಲು! ಕರಾವಳಿಯಲ್ಲಿ ಮಣ್ಣಿನ ತೇವಾಂಶ ಕಡಿಮೆ: ನೀರಿಲ್ಲ, ಫಸಲಿಲ್ಲ