ವೈರಸ್‌ ಕಾಟಕ್ಕೆ ಹೇಗಿದೆ ಭಾರತದ ಪ್ರತ್ಯುತ್ತರ?


Team Udayavani, Jun 11, 2020, 8:51 AM IST

ವೈರಸ್‌ ಕಾಟಕ್ಕೆ ಹೇಗಿದೆ ಭಾರತದ ಪ್ರತ್ಯುತ್ತರ?

ಭಾರತದಲ್ಲಿ ಕೋವಿಡ್‌-19 ಪ್ರಕರಣಗಳ ಸಂಖ್ಯೆ ದಿನೇ ದಿನೇ ಏರುತ್ತಲೇ ಇದೆ. ಜೂನ್‌ 4ರಿಂದ-9ರವರೆಗೆ ನಿತ್ಯ ಸರಾಸರಿ 9,830 ಸೋಂಕಿತರು ಪತ್ತೆಯಾಗಿದ್ದಾರೆ. ಆದರೆ, ಅನ್ಯ ರಾಷ್ಟ್ರಗಳಿಗೆ ಹೋಲಿಸಿದರೆ ಭಾರತದಲ್ಲಿ ಈಗಲೂ ಮರಣ ಪ್ರಮಾಣ ಕಡಿಮೆಯೇ ಇದೆ. ಗಮನಾರ್ಹ ಸಂಗತಿಯೆಂದರೆ, ನಮ್ಮಲ್ಲಿ ಚೇತರಿಕೆಯ ಪ್ರಮಾಣವೂ ವೃದ್ಧಿಸಿದ್ದು, ಇದೇ ಮೊದಲ ಬಾರಿಗೆ ದೇಶದಲ್ಲಿ ಸಕ್ರಿಯ ಪ್ರಕರಣಗಳಿಗಿಂತ ಚೇತರಿಸಿಕೊಂಡವರ ಸಂಖ್ಯೆ ಅಧಿಕವಾಗಿದೆ. ಬುಧವಾರದ ವೇಳೆಗೆ ಭಾರತದಲ್ಲಿ ಗುಣಮುಖರಾದವರ ಪ್ರಮಾಣ 48.8 ಪ್ರತಿಶತ ದಾಖಲಾಗಿದೆ.

ಭಾರತದಲ್ಲಿ ಕೋವಿಡ್‌-19 ಮರಣ ಪ್ರಮಾಣ
3 ಪ್ರತಿಶತಕ್ಕಿಂತಲೂ ಕಡಿಮೆಯಿದ್ದು, ಈ ವಿಚಾರದಲ್ಲಿ ರಷ್ಯಾ ಹಾಗೂ ಪೆರುವಿನ ಅಂಕಿಸಂಖ್ಯೆ ನಮಗಿಂತ ಉತ್ತಮವಾಗಿದೆ. ಇನ್ನೊಂದೆಡೆ ಇಟಲಿಯಲ್ಲಿ ಮರಣ ಪ್ರಮಾಣ 14.45 ಪ್ರತಿಶತ ದಾಖಲಾಗಿದೆ!

ದಿಲ್ಲಿ ಆಸ್ಪತ್ರೆಗಳ ಸುಳ್ಳು
ದಿಲ್ಲಿಯಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಬುಧವಾರ ಸಂಜೆಯ ವೇಳೆಗೆ 31 ಸಾವಿರ ದಾಟಿದೆ. ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳು ಅಲ್ಲಿನ ಆಡಳಿತ ಹಾಗೂ ಆರೋಗ್ಯ ವ್ಯವಸ್ಥೆಯ ಮೇಲೆ ಬೃಹತ್‌ ಒತ್ತಡ ಸೃಷ್ಟಿಸಲಾರಂಭಿಸಿವೆ. ಕಳೆದೊಂದು ವಾರದಲ್ಲಿ, ಅರವಿಂದ್‌ ಕೇಜ್ರಿವಾಲ್‌ ಸರಕಾರ‌ ಆರು ಖಾಸಗಿ ಹಾಗೂ ಎರಡು ಸರ್ಕಾರಿ ಪ್ರಯೋಗಾಲಯಗಳಿಗೆ, ಕೋವಿಡ್‌ ಪರೀಕ್ಷೆ ನಡೆಸದಂತೆ ಆದೇಶಿಸಿದೆ. ಈ ಪ್ರಯೋಗಾಲಯಗಳು ಐಸಿಎಂಆರ್‌ ನಿಯಮಾವಳಿಯನ್ನು ಗಾಳಿಗೆ ತೂರಿದ ಆರೋಪ ಎದುರಿಸುತ್ತಿವೆ. ಗಮನಾರ್ಹ ಅಂಶವೆಂದರೆ, ಈ ಆರು ಪ್ರಯೋಗಾಲಯಗಳೇ ದಿನಕ್ಕೆ ನಾಲ್ಕು ಸಾವಿರ ಪರೀಕ್ಷೆ ನಡೆಸುತ್ತಿದ್ದವು! ಇನ್ನು, ಈಗಲೇ ದಿಲ್ಲಿಯ ಅನೇಕ ಖಾಸಗಿ ಆಸ್ಪತ್ರೆಗಳು ತಮ್ಮಲ್ಲಿ ಬೆಡ್‌ಗಳು ಇಲ್ಲ ಎಂದು ಸುಳ್ಳು ಹೇಳಿ ರೋಗಿಗಳನ್ನು ಸಾಗಹಾಕುತ್ತಿರುವ ಬಗ್ಗೆಯೂ ವರದಿಯಾಗುತ್ತಿದ್ದು, ಸದ್ಯಕ್ಕೆ ಕೇಜ್ರಿವಾಲ್‌ ಸರಕಾರ ಎಲ್ಲಾ ಆಸ್ಪತ್ರೆಗಳೂ ಗೇಟ್‌ಗಳ ಮುಂದೆ, ತಮ್ಮಲ್ಲಿ ಎಷ್ಟು ಬೆಡ್‌ಗಳು ಲಭ್ಯವಿವೆ ಎನ್ನುವ ಬಗ್ಗೆ ಡಿಸ್‌ಪ್ಲೇ ಹಾಕಬೇಕು ಎಂದು ಆದೇಶಿಸಿದೆ.

ಭವಿಷ್ಯದ ಬಗ್ಗೆ ಹೇಗಿದೆ ಭಾರತೀಯರ ಭಾವನೆ?
ಕೋವಿಡ್ ಹಾವಳಿಯು ಜನರ ಆರೋಗ್ಯವನ್ನಷ್ಟೇ ಅಲ್ಲದೆ, ದೇಶದ ಆರ್ಥಿಕ ಆರೋಗ್ಯಕ್ಕೂ ಹಾನಿ ಮಾಡುತ್ತಿದೆ. ಕೆಲವು ದಿನಗಳಿಂದ ಆರ್ಥಿಕತೆಯನ್ನು ಹಳಿಯೇರಿಸುವ ಪ್ರಯತ್ನಕ್ಕೆ ವೇಗ ದೊರಕಿದೆಯಾದರೂ, ಜನರಿಗೆ ಭವಿಷ್ಯದ ಬಗ್ಗೆ ಸದ್ಯಕ್ಕೆ ಭರವಸೆಯಂತೂ ಮೂಡುತ್ತಿಲ್ಲ. ಇತ್ತೀಚೆಗೆ, ರಿಸರ್ವ್‌ ಬ್ಯಾಂಕ್‌ ಆಫ್ ಇಂಡಿಯಾ ನಡೆಸಿದ್ದ ಸಮೀಕ್ಷೆಯೊಂದು ಇದೇ ಮಾತನ್ನೇ ಹೇಳುತ್ತಿದೆ.

ದಿಲ್ಲಿ-ಮುಂಬಯಿ ಕಥೆ
ಮುಂಬಯಿ ನಗರಿಯಲ್ಲಿ ಬುಧವಾರದ ವೇಳೆಗೆ 51 ಸಾವಿರ ಪ್ರಕರಣಗಳು ಪತ್ತೆಯಾಗಿದ್ದರೆ, ಅದರಲ್ಲಿ 22 ಸಾವಿರಕ್ಕೂ ಅಧಿಕ ಜನ ಚೇತರಿಸಿಕೊಂಡಿದ್ದಾರೆ. ಕೆಲ ಸಮಯದಿಂದ ಸೋಂಕು ದ್ವಿಗುಣ ದರ ಮುಂಬಯಿಯಲ್ಲಿ ತಗ್ಗಿದೆಯಾದರೂ, ಅಲ್ಲಿನ ಆರೋಗ್ಯ ವ್ಯವಸ್ಥೆಯ ಮೇಲಿನ ಹೊರೆಯೇನೂ ಕಡಿಮೆಯಾಗುವ ಲಕ್ಷಣ ಕಾಣಿಸುತ್ತಿಲ್ಲ. ಬೆಡ್‌ಗಳು, ವೆಂಟಿಲೇಟರ್‌ಗಳ ತೀವ್ರ ಅಭಾವ ಕಾಡಲಾರಂಭಿಸಿದೆ. ಅನ್ಯ ಭಾಗಗಳಂತೆಯೇ ಮುಂಬಯಿಯಲ್ಲೂ ರೋಗ ಲಕ್ಷಣ ಮಂದ ಪ್ರಮಾಣದಲ್ಲಿ ಇರುವವರೇ ಅಧಿಕವಿದ್ದು, ಆಸ್ಪತ್ರೆ ಬೆಡ್‌ಗಳನ್ನು ಖಾಲಿ ಮಾಡಿಸಲು ಅಲ್ಲಿನ ಆಸ್ಪತ್ರೆಗಳು ಇಂಥ ರೋಗಿಗಳನ್ನು ಬೇಗನೇ ಡಿಸಾcರ್ಜ್‌ ಮಾಡುತ್ತಿವೆ ಎಂಬ ಆರೋಪ ಎದುರಾಗುತ್ತಿದೆ. ಇನ್ನೊಂದೆಡೆ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಂಡುಬರುತ್ತಿದ್ದು, ದಿಲ್ಲಿಯ ಉಪಮುಖ್ಯಮಂತ್ರಿ ಮನೀಷ್‌ ಸಿಸೋಡಿಯಾ, ಜುಲೈ-31ರ ವೇಳೆಗೆ ದಿಲ್ಲಿಯಲ್ಲಿ 5 ಲಕ್ಷ 50 ಸಾವಿರಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗಬಹುದೆಂದು ಹೇಳುತ್ತಿದ್ದಾರೆ! ಹೀಗೇನಾದರೂ ಆದರೆ, ದಿಲ್ಲಿಯ 2.8 ಪ್ರತಿಶತದಷ್ಟು ಜನಸಂಖ್ಯೆ ಸೋಂಕಿತವಾದಂತೆ ಆಗುತ್ತದೆ. ಎಲ್ಲಕ್ಕಿಂತ ಮುಖ್ಯವಾಗಿ, ಪ್ರಕರಣಗಳ ಸಂಖ್ಯೆ ವೃದ್ಧಿಸಿದರೆ, ಆಸ್ಪತ್ರೆ ಬೆಡ್‌ಗಳ ಅಗತ್ಯವೂ ಹೆಚ್ಚುತ್ತದೆ. ಅಂದರೆ‡,ಜುಲೈ ಅಂತ್ಯದ ವೇಳೆಗೆ 80 ಸಾವಿರ ಬೆಡ್‌ಗಳಾದರೂ ಬೇಕಾಗುತ್ತವಂತೆ.

ಟಾಪ್ ನ್ಯೂಸ್

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

b y vijayendra

LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ‌ ವ್ಯಂಗ್ಯ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwqewqwq

Bha ಸ್ವದೇಶಿ ವ್ಯವಸ್ಥೆ ; ನಮ್ಮ ಪಾದರಕ್ಷೆಗಳಿಗೆ ನಮ್ಮ ಅಳತೆ: ‘ಭ’ ಗಾತ್ರ ವ್ಯವಸ್ಥೆ!

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

17-voting

Vote: ಮತದಾನದ ಮಹತ್ವ

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

Ram Navami Astrology 2024:ಶ್ರೀರಾಮ ನವಮಿ ಯೋಗ ಫಲಾಫಲ-12 ರಾಶಿಗಳ ಮೇಲಿನ ಪರಿಣಾಮ ಹೇಗಿದೆ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

Raichur: ಹನುಮನ ಗುಡಿಯಲ್ಲಿ ಕಿಚ್ಚನಿಂದ ವಿಶೇಷ ಪೂಜೆ

9-uv-fusion

Importance: ಅನ್ನದ ಒಂದು ಅಗುಳಿನ ಮಹತ್ವ …

8-uv-fusion

UV Fusion: ಅತಿಯಾದ ಒಲವು ಒಳಿತಲ್ಲ

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

MP Tejaswi Surya: ಸಂಸದ ತೇಜಸ್ವಿ ಸೂರ್ಯ ವಿರುದ್ಧ ದೂರು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.