ಮಳೆಗಾಲಕ್ಕಾಗಿ ತುರ್ತು ನಿಯಂತ್ರಣ ಕೊಠಡಿ ಸ್ಥಾಪನೆ


Team Udayavani, Jun 11, 2020, 8:57 AM IST

ಮಳೆಗಾಲಕ್ಕಾಗಿ ತುರ್ತು ನಿಯಂತ್ರಣ ಕೊಠಡಿ ಸ್ಥಾಪನೆ

ಮುಂಬಯಿ, ಜೂ. 10: ಮುಂಬಯಿ ಮಹಾನಗರ ಪ್ರದೇಶ ಅಭಿವೃದ್ಧಿ ಪ್ರಾಧಿಕಾರವು (ಎಂಎಂಆರ್‌ಡಿಎ) ಮಳೆಗಾಲಕ್ಕಾಗಿ ತುರ್ತು ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಿದೆ. ಈ ನಿಯಂತ್ರಣ ಕೊಠಡಿಯು ಮಳೆ ಸಂಬಂಧಿತ ದೂರುಗಳ ಬಗ್ಗೆ ಮುಂದಿನ ಕ್ರಮಗಳನ್ನು ತೆಗೆದುಕೊಳ್ಳಲಿದೆ,

ರಾಜ್ಯ ಸರಕಾರ, ಬಿಎಂಸಿ, ಪೊಲೀಸ್‌ ಮುಂತಾದ ವಿವಿಧ ವಿಪತ್ತು ನಿಯಂತ್ರಣ ಸಂಸ್ಥೆಗಳೊಂದಿಗೆ ಸಂವಹನ ನಡೆಸಲಿದೆ ಹಾಗೂ ಮಾಹಿತಿ ಮತ್ತು ದತ್ತಾಂಶವನ್ನು ವಿನಿಮಯ ಮಾಡಿಕೊಳ್ಳಲಿದೆ. ನಿಯಂತ್ರಣ ಕೊಠಡಿ ಅಕ್ಟೋಬರ್‌ 15 ರವರೆಗೆ ಕಾರ್ಯನಿರ್ವಹಿಸಲಿದೆ. ನಿಯಂತ್ರಣ ಕೊಠಡಿಯು ಮೂರು ಶಿಫ್ಟ್ ಳೊಂದಿಗೆ ದಿನದ 24 ತಾಸು ಸೇವೆಗೆ ಲಭ್ಯವಾಗಲಿದೆ. ಪ್ರಾಧಿಕಾರವು ಜಾರಿಗೆ ತರುತ್ತಿರುವ ವಿವಿಧ ಯೋಜನಾ ಸ್ಥಳಗಳಲ್ಲಿ ವಾಹನ ಮತ್ತು ಪಾದಚಾರಿಗಳ ಸಂಚಾರಕ್ಕೆ ಅನಾನುಕೂಲತೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಎಂಎಂಆರ್‌ ಡಿಎ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಲಾಗಿದೆ. ನಿಯಂತ್ರಣ ಕೊಠಡಿಯ ಅಧಿಕಾರಿಗಳು ವಿವಿಧ ಯೋಜನಾ ಸ್ಥಳಗಳಲ್ಲಿ ಮಳೆನೀರು ಸುಗಮವಾಗಿ ಹರಿಯುವಂತೆ ನೋಡಿಕೊಳ್ಳಲ್ಲಿದ್ದಾರೆ.

ಗುತ್ತಿಗೆದಾರರಿಗೆ ಸೂಚನೆ :  ಸುರಕ್ಷತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಗುತ್ತಿಗೆದಾರರಿಗೆ ಸೂಚನೆ ನೀಡಲಾಗಿದೆ. ಬ್ಯಾರಿಕೇಡಿಂಗ್‌, ಹಾನಿಗೊಳಗಾದ ರಸ್ತೆಗಳು ಮತ್ತು ಕಾಮಗಾರಿಗಳನ್ನು ಪುನಃ ಸ್ಥಾಪಿಸುವುದು, ರಸ್ತೆಗಳಲ್ಲಿರುವ ಅವಶೇಷಗಳನ್ನು ತೆರವುಗೊಳಿಸುವುದು ಮತ್ತು ವಿಲೇವಾರಿ ಮಾಡುವವರೆಗೆ ಎಲ್ಲಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಕೇಳಿಕೊಳ್ಳಲಾಗಿದೆ. ಪ್ರವಾಹ ನೀರಿನ ಚರಂಡಿಗಳಿಗೆ ಯಾವುದೇ ಸಂಪರ್ಕವಿಲ್ಲದ ಮತ್ತು ನೀರು ಜಮಾವಣೆಯಾಗುವಂತಹ ಸ್ಥಳಗಳಲ್ಲಿ ಸಾಕಷ್ಟು ಸಾಮರ್ಥ್ಯದ ನೀರಿನ ಪಂಪ್‌ ಗಳನ್ನು ಅಳವಡಿಸುವಂತೆಯೂ ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದು ಎಂಎಂಆರ್‌ಡಿಎಯ ಮಹಾನಗರ ಆಯುಕ್ತ ಆರ್‌. ಎ. ರಾಜೀವ್‌ ಅವರು ಹೇಳಿದ್ದಾರೆ. ಮುಂಬಯಿಗರಿಗೆ ಈ ನಿಯಂತ್ರಣ ಕೊಠಡಿಯಿಂದ ವಿವಿಧ ಅಂಶಗಳ ಬಗ್ಗೆ ಸಹಾಯ ಪಡೆಯಲು ಸಾಧ್ಯವಾಗಲಿದೆ ಎಂದವರು ತಿಳಿಸಿದ್ದಾರೆ.  ಎಂಎಂಆರ್‌ ಡಿಎ ವ್ಯಾಪ್ತಿಯಲ್ಲಿ ಮರಗಳನ್ನು ಕಿತ್ತುಹಾಕುವುದು, ನೀರು ಜಮಾವಣೆ, ಅಪಘಾತಗಳು, ಸಂಚಾರ ಸಮಸ್ಯೆಗಳು, ರಸ್ತೆ, ಗುಂಡಿಗಳು ಮುಂತಾದ ಸಮಸ್ಯೆಗಳ ಬಗ್ಗೆ ಇದರಲ್ಲಿ ವರದಿ ಮಾಡಬಹುದಾಗಿದೆ.

ದೂರವಾಣಿ ಸಂಖ್ಯೆಗಳು : ಅಸಾಮಾನ್ಯ ಘಟನೆಗಳು ಅಥವಾ ಸನ್ನಿಹಿತ ಅಪಾಯಗಳ ಬಗ್ಗೆ ಮಾಹಿತಿಯನ್ನು ಕೂಡ ನಿಯಂತ್ರಣ ಕೊಠಡಿಯ ಅಧಿಕಾರಿಗಳು ಸ್ವೀಕರಿಸಲಿದ್ದಾರೆ. ನಿಯಂತ್ರಣ ಕೊಠಡಿಯು ರೈಲ್ವೇ, ಮಹಾನಗರ ಪಾಲಿಕೆ, ಸಂಚಾರ ಪೊಲೀಸ್‌, ಬೆಸ್ಟ್‌, ಅಗ್ನಿಶಾಮಕ ದಳ ಮತ್ತು ಇತರ ಏಜೆನ್ಸಿಗಳ ಜತೆಗೂಡಿ ಕಾರ್ಯನಿರ್ವಹಿಸಲಿದೆ ಎಂದು ಅಧಿಕಾರಿ ಹೇಳಿದ್ದಾರೆ. ಡೈರೆಕ್ಟ್ ಲೈನ್‌ ( 022-26591241), ಇಂಟರ್ಕಾಮ್‌ (022-26594176), ಮೊಬೈಲ್‌ ಸಂಖ್ಯೆ (8657402090)

ಟಾಪ್ ನ್ಯೂಸ್

BJP is certain to win in 300 constituencies: Prashant Kishore’s future

Loksabha; ಬಿಜೆಪಿಗೆ 300 ಕ್ಷೇತ್ರಗಳಲ್ಲಿ ಜಯ ನಿಶ್ಚಿತ: ಪ್ರಶಾಂತ್‌ ಕಿಶೋರ್‌ ಭವಿಷ್ಯ

MDH, Everest products passed the quality test!

ಗುಣಮಟ್ಟ ಪರೀಕ್ಷೆಯಲ್ಲಿ ಎಂಡಿಎಚ್‌, ಎವರೆಸ್ಟ್‌ ಉತ್ಪನ್ನಗಳು ಪಾಸ್‌!

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

Ambedkar ಇಲ್ಲದಿದ್ದರೆ ನೆಹರೂ ಮೀಸಲು ನೀಡುತ್ತಿರಲಿಲ್ಲ : ಮೋದಿ

ocon

ಲೀಡ್‌ ಕೊಡಿಸದಿದ್ದರೆ ಅಧಿಕಾರವೂ ಸಿಗದು; ಹುದ್ದೆ ಬಯಸುವ ಕಾರ್ಯಕರ್ತರಿಗೆ ಡಿಕೆಶಿ ಚಾಟಿ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Puttur ಅಂಗಳದಲ್ಲಿದ್ದ ವ್ಯಕ್ತಿ ಸಾವು ಸಿಡಿಲಾಘಾತ / ಹೃದಯಾಘಾತ ಶಂಕೆ

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು

Singapore Airlines; 3 ನಿಮಿಷಗಳಲ್ಲಿ 6 ಸಾವಿರ ಅಡಿ ಕುಸಿದ ವಿಮಾನ: 1 ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

World Mother’s Day 2024: ಅಮ್ಮ ನಿನ್ನ ತೋಳಿನಲ್ಲಿ…..ಕಂದಾ ನಾನು

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

Desi Swara: ಅಮೆರಿಕದಲ್ಲಿ ಲೈಬ್ರರಿ, ಮಕ್ಕಳು ಮತ್ತು ನಾಯಿ….!

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

ಕರ್ನಾಟಕ ಸಂಘ ಕತಾರ್‌: ವಾರ್ಷಿಕ ಸಂಭ್ರಮ ವಸಂತೋತ್ಸವ-24 ಆಚರಣೆ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಮಕ್ಕಳೊಂದಿಗೆ ಬೆರೆತು ಮನಸ್ಸನ್ನು ಅರಿಯೋಣ

Desi Swara: ಸಿರಿಗನ್ನಡ ಮ್ಯೂನಿಕ್‌: ನವವರ್ಷವನ್ನು ಹರುಷದಿ ಸ್ವಾಗತಿಸಿದ ಸಿರಿಗನ್ನಡಿಗರು

Desi Swara: ಸಿರಿಗನ್ನಡ ಮ್ಯೂನಿಕ್‌: ನವವರ್ಷವನ್ನು ಹರುಷದಿ ಸ್ವಾಗತಿಸಿದ ಸಿರಿಗನ್ನಡಿಗರು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

BJP is certain to win in 300 constituencies: Prashant Kishore’s future

Loksabha; ಬಿಜೆಪಿಗೆ 300 ಕ್ಷೇತ್ರಗಳಲ್ಲಿ ಜಯ ನಿಶ್ಚಿತ: ಪ್ರಶಾಂತ್‌ ಕಿಶೋರ್‌ ಭವಿಷ್ಯ

47 Lakhs collected for Kanhaiya Campaign!

Kanhaiya Kumar ಕ್ಯಾಂಪೇನ್‌ಗೆ 47 ಲಕ್ಷ ರೂ. ದೇಣಿಗೆ ಸಂಗ್ರಹ!

MDH, Everest products passed the quality test!

ಗುಣಮಟ್ಟ ಪರೀಕ್ಷೆಯಲ್ಲಿ ಎಂಡಿಎಚ್‌, ಎವರೆಸ್ಟ್‌ ಉತ್ಪನ್ನಗಳು ಪಾಸ್‌!

Balagopal

Kerala; ಕೇಂದ್ರದ ಸವಾಲು ನಡುವೆ ರಾಜ್ಯದ ಆದಾಯ ಹೆಚ್ಚಳ: ಕೇರಳ ಸಚಿವ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Rain ಕರಾವಳಿ ಸಹಿತ ರಾಜ್ಯದ ವಿವಿಧೆಡೆ ಉತ್ತಮ ಮಳೆ, ನಾಲ್ಕು ಜೀವಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.