ಹೊರರಾಜ್ಯದವರಿಗೆ ಹೋಂ ಕ್ವಾರಂಟೈನ್‌, ವಿದೇಶದಿಂದ ಬಂದವರಿಗೆ ಸಾಂಸ್ಥಿಕ ಕ್ವಾರಂಟೈನ್‌ ಕಡ್ಡಾಯ


Team Udayavani, Jun 11, 2020, 7:01 AM IST

ಹೊರರಾಜ್ಯದವರಿಗೆ ಹೋಂ ಕ್ವಾರಂಟೈನ್‌, ವಿದೇಶದಿಂದ ಬಂದವರಿಗೆ ಸಾಂಸ್ಥಿಕ ಕ್ವಾರಂಟೈನ್‌ ಕಡ್ಡಾಯ

ಉಡುಪಿ: ಇನ್ನು ಮುಂದೆ ಹೊರರಾಜ್ಯಗಳಿಂದ ಬರುವವರನ್ನು 14 ದಿನ ಹೋಂ ಕ್ವಾರಂಟೈನ್‌ನಲ್ಲಿ ಇಡಲಾಗುವುದು. ವಿದೇಶದಿಂದ ಬರುವವರನ್ನು ಮಾತ್ರ ಸಾಂಸ್ಥಿಕ ಕ್ವಾರಂಟೈನ್‌ನಲ್ಲಿ ಇರಿಸಿ ಅವರ ಪರೀಕ್ಷಾ ವರದಿ ಬಂದ ಬಳಿಕ ಆಸ್ಪತ್ರೆಗೋ ಮನೆಗೋ ಎಂದು ತೀರ್ಮಾನಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್‌ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಹೊರರಾಜ್ಯದವರು ಸೇವಾಸಿಂಧುವಿನಲ್ಲಿ ಅರ್ಜಿ ಸಲ್ಲಿಸಿದರೆ ಅದಾಗಿಯೇ ಮಾನ್ಯವಾಗುತ್ತದೆ. ಮಹಾರಾಷ್ಟ್ರದವರು ಅರ್ಜಿ ಸಲ್ಲಿಸಿದರೆ ಜಿಲ್ಲಾಧಿಕಾರಿ ಕಚೇರಿಯಿಂದ ಅನುಮತಿ ನೀಡಲಾಗುತ್ತದೆ. ಅವರು ಜಿಲ್ಲೆಗೆ ಪ್ರವೇಶಿಸುವಲ್ಲಿ ಆರೋಗ್ಯ ತಪಾಸಣೆ ಮಾಡಿ ಕೊರೊನಾ ಲಕ್ಷಣಗಳಿದ್ದರೆ ಚಿಕಿತ್ಸೆ ನೀಡಲಾಗುವುದು ಎಂದರು.

ನೆರೆಮನೆಯವರೂ ಹೊಣೆ
ಕ್ವಾರಂಟೈನ್‌ಗೆ ಒಳಪಟ್ಟವರ ಮನೆ ಹೊರಗೆ ಸ್ಟಿಕ್ಕರ್‌ ಅಂಟಿಸಲಾಗುತ್ತದೆ. ಅಕ್ಕಪಕ್ಕದ ಎರಡು ಮನೆಯವರಿಗೆ ಸೂಚನೆ ನೀಡಲಾಗುತ್ತದೆ. ಅವರು ಮನೆಯಿಂದ ಹೊರಗೆ ಬಂದರೆ ಪಕ್ಕದ ಮನೆಯವರು ಹೇಳಬೇಕು. ಅಂಥವರ ಮೇಲೆ ಎಫ್ಐಆರ್‌ ದಾಖಲಿಸಲಾಗುತ್ತದೆ. ಹೇಳದೆ ಇದ್ದರೆ ಅದು ಕೂಡ ಕಾಯಿದೆಯ ಉಲ್ಲಂಘನೆಯಾಗುತ್ತದೆ ಎಂದರು.

ಗ್ರಾಮೀಣ ಭಾಗದಲ್ಲಿ ಆಯಾ ಗ್ರಾ.ಪಂ.ಗೆ ಹೊಣೆ ವಹಿಸಿದ್ದು ಕಾರ್ಯಪಡೆ ನಿಗಾ ವಹಿಸಲಿದೆ. ನಗರ ಭಾಗದಲ್ಲಿ ವಾರ್ಡ್‌ವಾರು ಸಮಿತಿಗಳನ್ನು ರಚಿಸಲಾಗಿದೆ ಎಂದು ಅವರು ಹೇಳಿದರು.

ಉಡುಪಿಯಲ್ಲಿ ಮಾತ್ರ ರೈಲು ನಿಲುಗಡೆ
ಉಡುಪಿ ಜಿಲ್ಲೆಯಲ್ಲಿ ಹಾದು ಹೋಗುವ ರೈಲು ಉಡುಪಿ ನಿಲ್ದಾಣದಲ್ಲಿ ಮಾತ್ರ ಜೂ. 11ರಿಂದ ನಿಲುಗಡೆಯಾಗಲಿದೆ.
ಜಿಲ್ಲೆಯಲ್ಲಿ ಹಾದು ಹೋಗುವ ರೈಲುಗಳಿಗೆ ಒಂದು ಕಡೆ ನಿಲುಗಡೆ ಮಾತ್ರ ಕೊಡಬೇಕೆಂದು ಜಿಲ್ಲಾಧಿಕಾರಿಯವರು ಕೋರಿದಂತೆ ಉಡುಪಿ ಜಿಲ್ಲೆಯಲ್ಲಿ ಉಡುಪಿ ನಿಲ್ದಾಣದಲ್ಲಿ ಮಾತ್ರ ನಿಲುಗಡೆ ಕೊಡಲಾಗುತ್ತದೆ. ಉಡುಪಿ ನಿಲ್ದಾಣದಲ್ಲಿ ಜಿಲ್ಲಾಡಳಿತ ಕೌಂಟರ್‌ ಒಂದನ್ನು ತೆರೆದು ಅಲ್ಲಿ ಬಂದವರಿಗೆ ಕ್ವಾರಂಟೈನ್‌ಗೆ ಕಳುಹಿಸಲಿದೆ.

ಯಾರು ಬರಬಾರದು?
ಮನೆಯಲ್ಲಿ ಪ್ರತ್ಯೇಕ ಇರುವ ವ್ಯವಸ್ಥೆ ಇರುವವರು ಮಾತ್ರ ಹೊರರಾಜ್ಯಗಳಿಂದ ಬರಬೇಕು. ಆ ಮನೆಯಲ್ಲಿ ಎಸೆಸೆಲ್ಸಿ ಪರೀಕ್ಷೆ ಬರೆಯುವ ಮಕ್ಕಳಿದ್ದರೆ ಅವಕಾಶ ಕೊಡುತ್ತೇವೆ. ಅನಿವಾರ್ಯ ಸಂದರ್ಭ ಹೊರತು ಬಾರದೆ ಇರುವುದು ಉತ್ತಮ. ಬಂದರೆ 14 ದಿನ ಮನೆಯ ಇತರ ಸದಸ್ಯರ ಜತೆ ಮನೆಯೊಳಗೆ ಇರಬೇಕು ಎಂದರು.

ಆಧಾರರಹಿತ ಆರೋಪ: ಎಚ್ಚರಿಕೆ
ಇಷ್ಟರವರೆಗೆ 900ಕ್ಕೂ ಹೆಚ್ಚು ಪ್ರಕರಣದವರಿಗೆ ಚಿಕಿತ್ಸೆ ನೀಡಲಾಗಿದೆ. ಡಾ| ಟಿಎಂಎ ಪೈ ಆಸ್ಪತ್ರೆಯವರು ಉಚಿತವಾಗಿ ಇಡೀ ಆಸ್ಪತ್ರೆಯನ್ನು ನೀಡಿದ್ದಾರೆ. ಜಾಲತಾಣಗಳಲ್ಲಿ ಹಣ ಪಡೆಯುತ್ತಾರೆಂದು ಆಧಾರರಹಿತ ಆರೋಪ ಮಾಡುವುದು ತಪ್ಪು. ಅವರ ವಿರುದ್ಧ ಕಠಿನ ಕ್ರಮ ಜರಗಿಸುತ್ತೇವೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ದೂರು ನೀಡಿ
ಹೋಂ ಕ್ವಾರಂಟೈನ್‌ನಲ್ಲಿರುವವರು ಮನೆಯಿಂದ ಹೊರಗೆ ಓಡಾಡಿದರೆ 100 ದೂರವಾಣಿ ಸಂಖ್ಯೆಗೆ ತಿಳಿಸಬಹುದು. ಕೂಡಲೇ ಪೊಲೀಸರು ಗಮನ ಹರಿಸುತ್ತಾರೆ.
– ಜಿ. ಜಗದೀಶ್‌, ಉಡುಪಿ ಜಿಲ್ಲಾಧಿಕಾರಿ

ಸಹಾಯವಾಣಿ
ಸಾರ್ವಜನಿಕರ ಅನುಕೂಲಕ್ಕಾಗಿ ಸಹಾಯವಾಣಿಯನ್ನು ಆರಂಭಿಸ ಲಾಗಿದೆ. ಜನರು ದೂರವಾಣಿ ಮೂಲಕ ಅಥವಾ ವಾಟ್ಸ್‌ ಆ್ಯಪ್‌ ಮೂಲಕ ತಮ್ಮ ಕಡತ, ಮನವಿ ಮತ್ತು ಅರ್ಜಿಗಳ ಪ್ರಸ್ತುತ ಸ್ಥಿತಿಯನ್ನು ಪಡೆಯಬಹುದು. ತೀರಾ ಅಗತ್ಯವಿದ್ದರೆ ಕಚೇರಿಗೆ ಬನ್ನಿ ಎಂದು ಡಿಸಿ ತಿಳಿಸಿದ್ದಾರೆ.

ದೂರವಾಣಿ: 0820 2574931, 2571500
ವಾಟ್ಸ್‌ ಆ್ಯಪ್‌: 9880831516
ಇಮೇಲ್‌ ವಿಳಾಸ: [email protected]

ಟಾಪ್ ನ್ಯೂಸ್

Karnataka MLC Election; ಆಗ್ನೇಯ ಶಿಕ್ಷಕರ ಕ್ಷೇತ್ರ: 15 ಮಂದಿ ಅಂತಿಮ

Karnataka MLC Election; ಆಗ್ನೇಯ ಶಿಕ್ಷಕರ ಕ್ಷೇತ್ರ: 15 ಮಂದಿ ಅಂತಿಮ

SSLC Exam 2 ಪರಿಷ್ಕೃತ ವೇಳಾಪಟ್ಟಿ: ಜೂ.14ರಿಂದ ಪರೀಕ್ಷೆ

SSLC Exam 2 ಪರಿಷ್ಕೃತ ವೇಳಾಪಟ್ಟಿ: ಜೂ.14ರಿಂದ ಪರೀಕ್ಷೆ

police crime

Hubli; ನೇಹಾ & ಅಂಜಲಿ ಹತ್ಯೆ ಪ್ರಕರಣ: ಡಿಸಿಪಿ ತಲೆದಂಡ

1-sadasds

IPL ಚೆನ್ನೈ ಗೆ ಗೆಲ್ಲಲು 219 ರನ್ ಗಳ ಗುರಿ ಮುಂದಿಟ್ಟ ಆರ್ ಸಿಬಿ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

1-eweweq

Gadag: ರಥೋತ್ಸವ ವೇಳೆ ರಥದ ಗಾಲಿಗೆ ಸಿಲುಕಿ ಇಬ್ಬರು ಭಕ್ತರು ಮೃತ್ಯು

1-ew-eqw-e

BJP ಕಚೇರಿಗೆ ಬರುತ್ತಿದ್ದೇವೆ.. ಎಲ್ಲರನ್ನೂ ಬಂಧಿಸಿ: ಪ್ರಧಾನಿಗೆ ಕೇಜ್ರಿವಾಲ್ ಸವಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KARಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Karkala ಸಾಗರದಾಚೆಯಿಂದ ತವರಿಗೆ ಕರೆ ತಂದ ಕೃಷಿ ಪ್ರೀತಿ

Udupi ಕುಡಿಯುವ ನೀರು ಕೊರತೆ ನೀಗಿಸಲು ಜಿಲ್ಲಾಧಿಕಾರಿ ಸೂಚನೆ

Udupi ಕುಡಿಯುವ ನೀರು ಕೊರತೆ ನೀಗಿಸಲು ಜಿಲ್ಲಾಧಿಕಾರಿ ಸೂಚನೆ

Malpe ಸೈಂಟ್‌ ಮೇರೀಸ್‌ ಪ್ರವಾಸಿ ಬೋಟ್‌ ಯಾನ, ಜಲಕ್ರೀಡೆ ತಾತ್ಕಾಲಿಕ ಸ್ಥಗಿತ

Malpe ಸೈಂಟ್‌ ಮೇರೀಸ್‌ ಪ್ರವಾಸಿ ಬೋಟ್‌ ಯಾನ, ಜಲಕ್ರೀಡೆ ತಾತ್ಕಾಲಿಕ ಸ್ಥಗಿತ

Udupi ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಕಾನೂನು ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Udupi ಪೊಲೀಸರ ಕರ್ತವ್ಯಕ್ಕೆ ಅಡ್ಡಿ: ಕಾನೂನು ವಿದ್ಯಾರ್ಥಿಗಳ ಮೇಲೆ ಪ್ರಕರಣ ದಾಖಲು

Udupi: ಕಾಲೇಜಿಗೆಂದು ಹೋದ ಯುವತಿ ನಾಪತ್ತೆ

Udupi: ಕಾಲೇಜಿಗೆಂದು ಹೋದ ಯುವತಿ ನಾಪತ್ತೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

Karnataka MLC Election; ಆಗ್ನೇಯ ಶಿಕ್ಷಕರ ಕ್ಷೇತ್ರ: 15 ಮಂದಿ ಅಂತಿಮ

Karnataka MLC Election; ಆಗ್ನೇಯ ಶಿಕ್ಷಕರ ಕ್ಷೇತ್ರ: 15 ಮಂದಿ ಅಂತಿಮ

SSLC Exam 2 ಪರಿಷ್ಕೃತ ವೇಳಾಪಟ್ಟಿ: ಜೂ.14ರಿಂದ ಪರೀಕ್ಷೆ

SSLC Exam 2 ಪರಿಷ್ಕೃತ ವೇಳಾಪಟ್ಟಿ: ಜೂ.14ರಿಂದ ಪರೀಕ್ಷೆ

police crime

Hubli; ನೇಹಾ & ಅಂಜಲಿ ಹತ್ಯೆ ಪ್ರಕರಣ: ಡಿಸಿಪಿ ತಲೆದಂಡ

1-sadasds

IPL ಚೆನ್ನೈ ಗೆ ಗೆಲ್ಲಲು 219 ರನ್ ಗಳ ಗುರಿ ಮುಂದಿಟ್ಟ ಆರ್ ಸಿಬಿ

Lokayukta

Marks card ಕೊಡಲು ಲಂಚ: ಶಿಕ್ಷಣ ಇಲಾಖೆ ಅಧಿಕಾರಿಗಳಿಬ್ಬರು ಲೋಕಾಯುಕ್ತ ಬಲೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.