ಬೆಳೆಗಾರರಿಗೆ ಮೆಣಸಿನಕಾಯಿ ಖಾರ


Team Udayavani, Jun 11, 2020, 3:55 PM IST

Bg-tdy-4

ಖಾನಾಪುರ: ತಾಲೂಕಿನಲ್ಲಿ ಈ ವರ್ಷ ಅಂದಾಜು ಎರಡು ಸಾವಿರ ಹೆಕ್ಟೇರ್‌ನಲ್ಲಿ ಮೆಣಸಿನಕಾಯಿ ಬೆಳೆದ ರೈತರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಸರ್ಕಾರ ಬಿಡುಗಡೆ ಮಾಡಿದ ಸಬ್ಸಿಡಿ ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆ ಎನ್ನುವಂತಿದೆ.

ಉತ್ತಮ ಇಳುವರಿ ಬಂದಿದ್ದರೂ ರೈತರಿಗೆ ಕೈಗೆ ಬಂದ ತುತ್ತು ಬಾಯಿಗಿಲ್ಲ ಎನ್ನುವಂತಾಗಿದೆ. ಮಾ. 23ರಿಂದ ಲಾಕ್‌ ಡೌನ್‌ ಹಿನ್ನೆಲೆಯಲ್ಲಿ ಮೆಣಸಿನ ಕಾಯಿ ಮಾರುಕಟ್ಟೆಯಲ್ಲಿ ಕೆಜಿಗೆ 2 ರೂ.ಗೆ ಕುಸಿದಿತ್ತು. ನಂತರ ಒಂದಿಷ್ಟು ಚೇತರಿಸಿಕೊಂಡು 8 ರೂ. ದರ ದೊರಕಿತು. ಆದರೆ ರೈತರಿಗೆ ಕೂಲಿ ಹಣ ಮತ್ತು ರಸಗೊಬ್ಬರ ಖರ್ಚು ಕೂಡ ಮರಳಲಿಲ್ಲ. ಇದೀಗ ಕೆಜಿಗೆ 14 ರೂ. ದರ ಇದ್ದರೂ ರೈತರಿಗೆ ಸಂತೃಪ್ತಿಯಾಗಿಲ್ಲ. ಈ ವರ್ಷ 4 ಸಾವಿರ ರೈತರು ಮೆಣಸಿನ ಬೆಳೆ ಬೆಳೆದಿದ್ದು, ಸರ್ಕಾರದ ಘೋಷಿಸಿದ ಸಬ್ಸಿಡಿ ಮರೀಚಿಕೆಯಾಗಿದೆ.

ಸರ್ಕಾರದ ನಿಯಮಾವಳಿಯಲ್ಲಿ 462 ಹೆಕ್ಟೇರ್‌ ಮೆಣಸಿನ ಬೆಳೆಯ ಫಲಾನುಭವಿಗಳು ಇದ್ದು, ಕೇವಲ 450 ಜನರು ಮಾತ್ರ ಫಲಾನುಭವಿಗಳು ಆಗುತ್ತಾರೆ. ಮಾ. 23ರಿಂದ ಹತ್ತು ದಿನಗಳ ಕಾಲ ಮಾರುಕಟ್ಟೆ ಇಲ್ಲದ ಸಮಯದಲ್ಲಿ ಮೆಣಸಿನ ಬೆಳೆ ಮಾರಾಟ ಮಾಡುತ್ತಿದ್ದ ರೈತರು ಮಾತ್ರ ಸಬ್ಸಿಡಿ ಪಡೆಯಲು ಅರ್ಹರಾಗುತ್ತಾರೆ ಎನ್ನುವುದು ತೋಟಗಾರಿಕೆ ಇಲಾಖೆ ಅಭಿಪ್ರಾಯ.

ರೈತರ ಬಗ್ಗೆ ಅಧಿಕಾರಿಗಳ ನೀತಿ ಕೂಡ ಗೊಂದಲಮಯವಾಗಿದೆ. ತೋಟಗಾರಿಕೆ ಇಲಾಖೆ ಖಾಸಗಿ ವ್ಯಕ್ತಿಗಳಿಂದ ಜನವರಿ-ಫೆಬ್ರವರಿಯಲ್ಲಿ ಮೆಣಸಿನಕಾಯಿ ಬೆಳೆದ ರೈತರ ಗದ್ದೆಗಳ ಸರ್ವೇ ಮಾಡಿಸಿದೆ. ಸರ್ವೇಯಲ್ಲಿ ಸಾಕಷ್ಟು ಲೋಪಗಳಿದ್ದು, ಗೊಂದಲಗಳಿಂದ ರೈತರು ಫಲಾನುಭವಿಗಳಾಗುತ್ತಿಲ್ಲ. ರೈತರು ಕಬ್ಬು ಮತ್ತು ಭತ್ತ ಫಸಲು ಮಾತ್ರ ತೋರಿಸಿ ಕೃಷಿ ಸಾಲ ಪಡೆಯುತ್ತಾರೆ. ಮೆಣಸಿನ ಬೆಳೆ ಪ್ರತ್ಯೇಕವಾಗಿ ತೋರಿಸುವುದಿಲ್ಲ. ಭತ್ತ ಮತ್ತು ಕಬ್ಬು ಕಟಾವು ನಂತರ ಮೆಣಸಿನ ಬೆಳೆ ಬೆಳೆಯಲಾಗುತ್ತದೆ. ತೋಟಗಾರಿಕೆ ಇಲಾಖೆ ಅಧಿಕಾರಿಗಳ ಪ್ರಕಾರ ರೈತರು ಮೆಣಸಿನ ಬೆಳೆ ಕುರಿತು ಫಸಲು ತೋರಿಸದೇ ಇರುವುದರಿಂದ ಇವರಿಗೆ ಸಬ್ಸಿಡಿ ದೊರೆಯುವುದು ಕಷ್ಟ ಎನ್ನುತ್ತಾರೆ. ಖಾನಾಪುರ, ಬೀಡಿ ಮತ್ತು ಜಾಂಬೋಟಿ ಹೋಬಳಿಗಳಲ್ಲಿ ಅಧಿಕ ಮೆಣಸಿನ ಬೆಳೆ ಬೆಳೆಯಲಾಗುತ್ತಿದೆ. ಲಾಕ್‌ ಡೌನ್‌ ಸಂದರ್ಭದಲ್ಲಿ ಚಿಕ್ಕದಿನಕೊಪ್ಪ ಮತ್ತು ಕಡತನಬಾಗೇವಾಡಿ ಗ್ರಾಮಗಳಲ್ಲಿ ಮೆಣಸಿನ ಬೆಳೆಗೆ ಮಾರುಕಟ್ಟೆ ಕಲ್ಪಿಸಲಾಗಿದ್ದರೂ ದಲ್ಲಾಳಿಗಷ್ಟೇ ಲಾಭವಾಗಿದೆ.

ಮೆಣಸಿನ ಬೆಳೆ ಫಲಾನುಭವಿಗಳ ಆಯ್ಕೆ ವಿಷಯದಲ್ಲಿ ಯಾವ ಹಸ್ತಕ್ಷೇಪವೂ ಇಲ್ಲ. ನಿಯಮಾವಳಿ ಪ್ರಕಾರವೇ ಫಲಾನುಭವಿಗಳ ಆಯ್ಕೆ ಇಲ್ಲಿ ನಡೆಯುತ್ತದೆ. ಶಮಂತ, ಸಹಾಯಕ ನಿರ್ದೇಶಕ, ತೋಟಗಾರಿಕೆ ಇಲಾಖೆ

ಮೆಣಸಿನ ಬೆಳೆ ಬೆಳೆದ ರೈತ ಫಲಾನುಭವಿಗಳ ಆಯ್ಕೆ ಅವೈಜ್ಞಾನಿಕವಾಗಿದೆ. ಮೆಣಸಿನ ಬೆಳೆ ಬೆಳೆದ ರೈತರೆಲ್ಲರೂ ಫಲಾನುಭವಿಗಳಾಗಬೇಕು. ಯಶವಂತ ಕೊಡೋಳ್ಳಿ, ನಿರ್ದೇಶಕ ಟಿಎಪಿಸಿಎಂಎಸ್‌ ನಂದಗಡ -ಮೆಣಸಿನ ಬೆಳೆ ಬೆಳೆದ ರೈತರು

ಸಂಕಷ್ಟದಲ್ಲಿದ್ದು ಸರ್ಕಾರ ನೆರವಿಗೆ  ಬರಬೇಕು. ಸರ್ಕಾರದ ನಿಯಮಗಳು ರೈತರಿಗೆ ಅನ್ಯಾಯ ಮಾಡುವಂತಿವೆ. -ಹಣಮಂತ ಪಾಟೀಲ, ಬಿಜೆಪಿ ಮುಖಂಡ  

 

-ಜಗದೀಶ ಹೊಸಮನಿ

ಟಾಪ್ ನ್ಯೂಸ್

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

1-qweqwqwe

Kerala ಕರಾವಳಿಯಲ್ಲಿ 6 ಮೀನುಗಾರರ ಸಹಿತ ಇರಾನ್ ಹಡಗು ಕೋಸ್ಟ್ ಗಾರ್ಡ್ ವಶಕ್ಕೆ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

Bantwala; ಬಾವಿಗೆ ಬಿದ್ದ ನಾಯಿಯನ್ನು ರಕ್ಷಿಸಿದ ಅಗ್ನಿಶಾಮಕ ತಂಡ

foeticide

Mandya: ಮತ್ತೆ ಹೆಣ್ಣುಭ್ರೂಣ ಹತ್ಯೆ ಜಾಲ ಪತ್ತೆ; ನಾಲ್ವರ ಬಂಧನ

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು

Kanniyakumari: ಮದುವೆಗೆಂದು ಆಗಮಿಸಿ ಸಮುದ್ರ ಪಾಲಾದ ಐವರು ವೈದ್ಯಕೀಯ ವಿದ್ಯಾರ್ಥಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

ಕನ್ನಡ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಸವಿತಾ ಹಿರೇಮಠ

ಬೆಳಗಾವಿ-ಸೋಲಿನ ಭಯದಿಂದ ಕಾಂಗ್ರೆಸ್‌ ಹತಾಶ: ಜಗದೀಶ ಶೆಟ್ಟರ

ಬೆಳಗಾವಿ-ಸೋಲಿನ ಭಯದಿಂದ ಕಾಂಗ್ರೆಸ್‌ ಹತಾಶ: ಜಗದೀಶ ಶೆಟ್ಟರ

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

D. K. Shivakumar ಕಾಂಗ್ರೆಸ್‌ನ ಭರವಸೆ, ಬಿಜೆಪಿಯ ಬುರುಡೆ ನಡುವೆ ಹೋರಾಟ

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

Belagavi; ಪ್ರಧಾನಿ ನರೇಂದ್ರ ಮೋದಿ ಬಜರಂಗದಳ ಕಾರ್ಯಕರ್ತರಂತೆ ಮಾತಾಡ್ತಾರೆ: ಸಿದ್ದರಾಮಯ್ಯ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

Lok Sabha Polls ರಬಕವಿ-ಬನಹಟ್ಟಿ: ವಿಶೇಷ ಮತಗಟ್ಟೆಯ ರೂವಾರಿಗಳು ಚಿತ್ರಕಲಾ ಶಿಕ್ಷಕರು

1—wewqeqw

Maharashtra ;120 ಅಡಿ ಜಲಪಾತದಿಂದ ಹಾರಿದ ಯುವಕ ಮೃತ್ಯು: ವಿಡಿಯೋ ವೈರಲ್

India’s first-ever ‘hybrid pitch’ was unveiled at the HPCA stadium

HPCA; ಧರ್ಮಶಾಲಾದಲ್ಲಿ ಭಾರತದ ಮೊದಲ ಹೈಬ್ರಿಡ್ ಪಿಚ್ ಅನಾವರಣ; ಏನಿದು ಹೊಸ ಆವಿಷ್ಕಾರ?

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

65 ವರ್ಷದಿಂದ ದೇಶಕ್ಕೆ ಚೊಂಬು ಹಿಡಿಸಿದ್ದೆ ಕಾಂಗ್ರೆಸ್‌ ಸಾಧನೆ: ಹರಿಪ್ರಕಾಶ ಕೋಣೆಮನೆ

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Delhi police Station: ಪೊಲೀಸ್‌ ಠಾಣೆ ಬಾತ್‌ ರೂಂ ಕಿಟಕಿ ಹಾರಿ ಕೊಲೆ ಆರೋಪಿ ಪರಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.