200 ಮೀ. ಕಡಲ ತಡಿಯಲ್ಲಿ 12 ಸಾವಿರ ಕೆ.ಜಿ. ಚಪ್ಪಲಿಗಳು!

ಕ್ಲೀನ್‌ ಕುಂದಾಪುರ ಪ್ರಾಜೆಕ್ಟ್: 60 ವಾರಗಳ ಕಾಲ ಕಡಲ ತಡಿ ಸ್ವಚ್ಛತೆ

Team Udayavani, Jun 12, 2020, 5:56 AM IST

200 ಮೀ. ಕಡಲ ತಡಿಯಲ್ಲಿ 12 ಸಾವಿರ ಕೆ.ಜಿ. ಚಪ್ಪಲಿಗಳು!

ಕುಂದಾಪುರ: ಕ್ಲೀನ್‌ ಕುಂದಾಪುರ ಪ್ರಾಜೆಕ್ಟ್‌ನವರು ಸುಮಾರು 60 ವಾರಗಳ ಕಾಲ ಕುಂದಾಪುರದ ಕಡಲ ತಡಿಯನ್ನು ಸ್ವಚ್ಛ ಗೊಳಿಸಿದ್ದು , ಕೇವಲ ಏಳು ವಾರಗಳ ಅವಧಿ ಸ್ವಚ್ಛತೆ ಸಂದರ್ಭ 200 ಮೀ. ಸಮುದ್ರ ತೀರದಲ್ಲಿ ಒಟ್ಟು 12 ಸಾವಿರ ಕೆ.ಜಿ. ಚಪ್ಪಲಿಗಳು ದೊರೆತಿವೆ ಎಂಬ ಆಘಾತಕಾರಿ ಅಂಶ ಗೊತ್ತಾಗಿದೆ.

3.5 ಕಿ.ಮೀ. ವ್ಯಾಪ್ತಿಯ ಕೋಡಿ ಬೀಚ್‌ ನಲ್ಲಿ ಈವರೆಗೆ ಸಂಗ್ರಹಿಸಿದ ಒಟ್ಟು ತ್ಯಾಜ್ಯದ ಪೈಕಿ ರಬ್ಬರ್‌ ಹಾಗೂ ಪ್ಲಾಸ್ಟಿಕ್‌ನ ಚಪ್ಪಲಿ ಗಳೇ ಅಧಿಕವಿದ್ದು ಸರಿಸುಮಾರು 12 ಸಾವಿರ ಕೆಜಿಯಷ್ಟಾಗಿದೆ. ರೀಫ್ ವಾಚ್‌ ಮರೀನ್‌ ಕನ್ಸರ್ವೇಶನ್‌ ಸಂಸ್ಥೆ, ಕ್ಲೀನ್‌ ಕುಂದಾಪುರ ಪ್ರಾಜೆಕ್ಟ್ ಸಹಯೋಗದಲ್ಲಿ ನಡೆಸಿದ ಅಧ್ಯಯನದಲ್ಲಿ ಈ ಮಾಹಿತಿ ಗೊತ್ತಾಗಿದ್ದು ಕಳೆದ ವರ್ಷ ನವೆಂಬರ್‌ನಿಂದ ಡಿಸೆಂಬರ್‌ ನಡುವಿನ ಸ್ವಚ್ಛತಾ ಕಾರ್ಯದ ಅವಧಿಯಲ್ಲಿ ಈ ಅಧ್ಯಯನ ನಡೆಸಲಾಗಿದೆ. 11 ಕೆಜಿ ಮೀನುಗಾರಿಕೆಗೆ ಬಳಸುವ ಫೈಬರ್‌ ಉತ್ಪನ್ನಗಳು, 540 ಕೆ.ಜಿ .ಗಾಜಿನ ಬಾಟಲಿಗಳು, 167 ಕೆ.ಜಿ. ಪ್ಲಾಸ್ಟಿಕ್‌ ತ್ಯಾಜ್ಯ, 60 ಕೆ.ಜಿ.ಯಷ್ಟು ಥರ್ಮೋಕೂಲ್‌, 185 ಕೆ.ಜಿ. ವೈದ್ಯಕೀಯ ತ್ಯಾಜ್ಯ, 13 ಕೆ.ಜಿ. ಇಲೆಕ್ಟ್ರಾನಿಕ್‌ ತ್ಯಾಜ್ಯ ದೊರೆತಿವೆ.

ತ್ಯಾಜ್ಯ ರಾಶಿಯಿಂದ ಸಮುದ್ರಕ್ಕೆ ಅಪಾರ ಪ್ರಮಾಣದಲ್ಲಿ ಹಾನಿಯಾಗುತ್ತಿರುವುದನ್ನು ಮನಗಂಡು ಕ್ಲೀನ್‌ ಕುಂದಾಪುರ ಪ್ರಾಜೆಕ್ಟ್ ನವರು ಸಮುದ್ರ ತೀರದಲ್ಲಿ ಪ್ರತಿ ವಾರ ಸ್ವಚ್ಛತೆ ನಡೆಸುತ್ತಿದ್ದರು. ಸ್ವಚ್ಛತೆ ಸಂದರ್ಭ ಚಪ್ಪಲಿಗಳಷ್ಟೇ ಅಲ್ಲ; ಮದ್ಯದ, ನೀರಿನ ಬಾಟಲಿ, ಔಷಧದ ಬಾಟಲ್‌ಗ‌ಳು ಕೂಡಾ ದೊಡ್ಡ ಪ್ರಮಾಣದಲ್ಲಿ ಪತ್ತೆಯಾಗಿವೆ.

ಕೋವಿಡ್‌ -19 ಲಾಕ್‌ಡೌನ್‌ ಘೋಷಣೆ ಯಾಗುವವರೆಗೂ ಸ್ವಚ್ಛತಾ ಕಾರ್ಯ ನಿರಂತರವಾಗಿ ನಡೆಯುತ್ತಿತ್ತು. ವೈದ್ಯರು, ಟೆಕ್ಕಿಗಳು, ಜನಪ್ರತಿನಿಧಿಗಳು, ಸರಕಾರಿ ಅಧಿಕಾರಿಗಳು ಎಂಬ ಭೇದವಿಲ್ಲದೆ ಎಷ್ಟೇ ಕಡಿಮೆ ಅಥವಾ ಹೆಚ್ಚು ಜನರಿದ್ದರೂ ಸ್ವಚ್ಛತಾ ಕಾರ್ಯ ಮಾತ್ರ ಅನೂಚಾನವಾಗಿ ನಡೆಸಲಾಗಿತ್ತು.

ಮಾಸ್ಕ್ ಎಲ್ಲೆಂದರಲ್ಲಿ ಎಸೆಯುವ ಆತಂಕ
ಲಾಕ್‌ಡೌನ್‌ನಿಂದಾಗಿ ಪರಿಸರವೇನೋ ಸ್ವತ್ಛವಾಗಿದೆ. ಆದರೆ ಪ್ರತಿಯೊಬ್ಬರೂ ಮಾಸ್ಕ್ ಬಳಸುತ್ತಿದ್ದು ಅದನ್ನು ಎಲ್ಲೆಂದರಲ್ಲಿ ಎಸೆದರೆ, ಸರಿಯಾಗಿ ವಿಲೇವಾರಿ ಮಾಡದೆ ಇದ್ದರೆ ಅದೇ ದೊಡ್ಡ ತ್ಯಾಜ್ಯರಾಶಿಯಾಗಿ ಕಂಟಕ ಉಂಟಾಗಲಿದೆ. ಈ ನಿಟ್ಟಿನಲ್ಲಿ ಎಷ್ಟು ಚಿಂತಿಸಿದರೂ ಕಡಿಮೆಯೇ.
-ಭರತ್‌ ಬಂಗೇರ, ಕ್ಲೀನ್‌ ಕುಂದಾಪುರ ಪ್ರಾಜೆಕ್ಟ್ ಸದಸ್ಯ

ಟಾಪ್ ನ್ಯೂಸ್

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Implementation of secular law for Muslim succession: Supreme Court debate

Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್‌ ಚರ್ಚೆ

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’

“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್‌ಐಆರ್‌ ಹಾಕಲಿಲ್ಲವೇ?’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

12

Karkala: ಹಿಮ್ಮುಖ ಚಲಿಸಿದ ಟಿಪ್ಪರ್‌; ಸ್ಕೂಟರ್‌ ಜಖಂ

11-udupi

Udupi: ಬಸ್‌ ಢಿಕ್ಕಿ: ಮಹಿಳೆಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

Loksabha; ಮುಸ್ಲಿಮರಿಗೆ ಅಷ್ಟೇ ಅಲ್ಲ, ನನಗೂ 5 ಮಕ್ಕಳಿದ್ದಾರೆ: ಮೋದಿಗೆ ಖರ್ಗೆ ಟಕ್ಕರ್‌

ಉಗ್ರರಿದ್ದಲ್ಲೇ ನುಗ್ಗಿ ವಿನಾಶ: ಪ್ರಧಾನಿ ಮೋದಿ

ಉಗ್ರರಿದ್ದಲ್ಲೇ ನುಗ್ಗಿ ವಿನಾಶ; ಇದು ನವಭಾರತದ ಹೆಗ್ಗಳಿಕೆ: ಪ್ರಧಾನಿ ಮೋದಿ

Suspense still about Rae Bareli, Amethi Congress candidates!

Lok Sabha; ರಾಯ್‌ಬರೇಲಿ, ಅಮೇಠಿ ಕಾಂಗ್ರೆಸ್‌ ಅಭ್ಯರ್ಥಿಗಳ ಬಗ್ಗೆ ಇನ್ನೂ ಸಸ್ಪೆನ್ಸ್‌!

6-time Madhya Pradesh MLA Ramniwas Rawat quits Congress, joins BJP

Madhya Pradesh; ರಾಹುಲ್‌ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್‌ ಶಾಸಕ!

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Kodaikanal – Ooty ಪ್ರವಾಸಕ್ಕೆ ಇ-ಪಾಸ್‌ ಕಡ್ಡಾಯ: ಹೈಕೋರ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.