ಮಣಿಪಾಲ ದಂತ ವೈದ್ಯಕೀಯ ವಿಜ್ಞಾನಗಳ ಕಾಲೇಜಿಗೆ ದ್ವಿತೀಯ ಸ್ಥಾನ

ಕೇಂದ್ರ ಎನ್‌ಐಆರ್‌ಎಫ್ ರ್‍ಯಾಂಕಿಂಗ್‌ ಪ್ರಕಟ; ಮಾಹೆ ಅಂಗಸಂಸ್ಥೆಗೆ ದೇಶ ಮಟ್ಟದ ಗರಿಮೆ

Team Udayavani, Jun 12, 2020, 6:10 AM IST

ಮಣಿಪಾಲ ದಂತ ವೈದ್ಯಕೀಯ ವಿಜ್ಞಾನಗಳ ಕಾಲೇಜಿಗೆ ದ್ವಿತೀಯ ಸ್ಥಾನ

ಹೊಸದಿಲ್ಲಿ: ಕೇಂದ್ರ ಮಾನವ ಸಂಪದಭಿವೃದ್ಧಿ ಸಚಿವಾಲಯದ ರಾಷ್ಟ್ರೀಯ ಸಾಂಸ್ಥಿಕ ರ್‍ಯಾಂಕಿಂಗ್‌ ಫ್ರೇಮ್ ‌ವರ್ಕ್‌ (ಎನ್‌ಐಆರ್‌ಎಫ್) ದೇಶಾದ್ಯಂತದ ವಿವಿಧ ವೃತ್ತಿಪರ ಶಿಕ್ಷಣ ಸಂಸ್ಥೆಗಳ ರ್‍ಯಾಂಕ್‌ ಪಟ್ಟಿ ಬಿಡುಗಡೆ ಮಾಡಿದ್ದು, ಮಣಿಪಾಲ ದಂತ ವೈದ್ಯಕೀಯ ವಿಜ್ಞಾನಗಳ ಕಾಲೇಜು (ಎಂಸಿಒಡಿಎಸ್‌) ದೇಶದ ಅತ್ಯುತ್ತಮ ದಂತ ವೈದ್ಯಕೀಯ ಕಾಲೇಜುಗಳ ಪೈಕಿ ದ್ವಿತೀಯ ಸ್ಥಾನ ಪಡೆದುಕೊಂಡಿದೆ.

ಕೇಂದ್ರ ಮಾನವ ಸಂಪದಭಿವೃದ್ಧಿ ಸಚಿವ ರಮೇಶ್‌ ಪೊಖ್ರಿಯಾಲ್ ಗುರುವಾರ ರ್‍ಯಾಂಕಿಂಗ್‌ ಪಟ್ಟಿ ಬಿಡುಗಡೆ ಮಾಡಿದರು. ಇದೇ ಮೊದಲ ಬಾರಿಗೆ ದಂತ ವೈದ್ಯಕೀಯ ವಿಭಾಗದಲ್ಲಿ ರಾಷ್ಟ್ರೀಯ ರ್‍ಯಾಂಕಿಂಗ್‌ ಪ್ರಕಟಿಸಲಾಗಿದ್ದು, ಎಂಸಿಒಡಿಎಸ್‌ ಎರಡನೇ ಸ್ಥಾನ ಪಡೆದಿದೆ. ದಿಲ್ಲಿಯ ಮೌಲಾನಾ ಆಜಾದ್‌ ಇನ್‌ಸ್ಟಿಟ್ಯೂಟ್‌ ಆಫ್ ಡೆಂಟಲ್‌ ಸೈನ್ಸಸ್‌ ಮೊದಲ ಮತ್ತು ಪುಣೆಯ ಡಾ| ಡಿ.ವೈ. ಪಾಟೀಲ್‌ ವಿದ್ಯಾಪೀಠ ಮೂರನೇ ಸ್ಥಾನವನ್ನು ಪಡೆದುಕೊಂಡಿವೆ.ಮಣಿಪಾಲ ದಂತ ವೈದ್ಯಕೀಯ ವಿಜ್ಞಾನಗಳ ಕಾಲೇಜು, ಮಣಿಪಾಲ್‌ ಅಕಾಡೆಮಿ ಆಫ್ ಹೈಯರ್‌ ಎಜುಕೇಶನ್‌(ಮಾಹೆ)ನ ಅಂಗಸಂಸ್ಥೆಯಾಗಿದೆ.

ಒಟ್ಟಾರೆ ರ್‍ಯಾಂಕಿಂಗ್‌
ಒಟ್ಟಾರೆ ರ್‍ಯಾಂಕಿಂಗ್‌ನಲ್ಲಿ ಐಐಟಿ ಮದ್ರಾಸ್‌ ಮೊದಲ ಸ್ಥಾನ, ಐಐಎಸ್‌ಸಿ ಬೆಂಗಳೂರು ದ್ವಿತೀಯ ಮತ್ತು ಐಐಟಿ ದಿಲ್ಲಿ ಮೂರನೇ ಸ್ಥಾನ ಪಡೆದುಕೊಂಡಿವೆ.

ಬಿ-ಸ್ಕೂಲ್‌ ವಿಭಾಗ
ಐಐಎಂ-ಅಹ್ಮದಾಬಾದ್‌, ಐಐಎಂ- ಬೆಂಗಳೂರು ಮತ್ತು ಐಐಎಂ- ಕೋಲ್ಕತಾಗಳು ಮೊದಲ ಮೂರು ಸ್ಥಾನಗಳಲ್ಲಿವೆ. ಐಐಟಿ ವಿಭಾಗದಲ್ಲಿ ಐಐಟಿ-ಮದ್ರಾಸ್‌, ಐಐಟಿ-ದಿಲ್ಲಿ ಮತ್ತು ಐಐಟಿ-ಮುಂಬಯಿಗಳು ಕ್ರಮವಾಗಿ ಮೊದಲ ಮೂರು ಸ್ಥಾನಗಳನ್ನು ಪಡೆದಿವೆ.

ಫಾರ್ಮಸಿ ವಿಭಾಗ
ದಿಲ್ಲಿಯ ಜಾಮಿಯಾ ಹಂದದ್‌, ಪಂಜಾಬ್‌ ವಿ.ವಿ., ಚಂಡೀಗಢ ಮತ್ತು ಮೊಹಾಲಿಯ ನ್ಯಾಶನಲ್‌ ಇನ್‌ಸ್ಟಿಟ್ಯೂಟ್‌ ಆಫ್ ಫಾರ್ಮಾಸುಟಿಕಲ್‌ ರಿಸರ್ಚ್‌ ಮೊದಲ 3 ಸ್ಥಾನಗಳನ್ನು ಪಡೆದಿವೆ.

ವಾರ್ಷಿಕ ರ್‍ಯಾಂಕಿಂಗ್‌
ವಿ.ವಿ.ಗಳ ವಿಭಾಗದಲ್ಲಿ ಐಐಎಸ್‌ಸಿ -ಬೆಂಗಳೂರು, ಜವಾಹರಲಾಲ್‌ ನೆಹರೂ ವಿ.ವಿ. ಮತ್ತು ಬನಾರಸ್‌ ಹಿಂದೂ ವಿ.ವಿ. ಕ್ರಮವಾಗಿ ಮೊದಲ ಮೂರು ಸ್ಥಾನಗಳನ್ನು ಪಡೆದಿವೆ.

ವೈದ್ಯಕೀಯ ಕಾಲೇಜು ವಿಭಾಗ
ಏಮ್ಸ್‌ (ಎಐಐ ಎಂಎಸ್‌)- ದಿಲ್ಲಿ, ಪಿಜಿಐ- ಚಂಡೀಗಢ ಮತ್ತು ಸಿಎಂಸಿ- ವೆಲ್ಲೂರು ಕ್ರಮವಾಗಿ ಮೊದಲ ಮೂರು ಸ್ಥಾನಗಳಲ್ಲಿವೆ.

ಕಾಲೇಜು ವಿಭಾಗ
ಮಿರಾಂಡಾ ಕಾಲೇಜು, ಲೇಡಿ ಶ್ರೀರಾಮ್‌ ಮಹಿಳಾ ಕಾಲೇಜು ಮತ್ತು ಸೇಂಟ್‌ ಸ್ಟೀಫ‌ನ್ಸ್‌ ಕಾಲೇಜು  ಕ್ರಮವಾಗಿ ಮೊದಲ ಮೂರು ಸ್ಥಾನ ಗಳನ್ನು ಪಡೆದಿವೆ.

ಕಾನೂನು ಕಾಲೇಜು ವಿಭಾಗ
ರಾಷ್ಟ್ರೀಯ ಕಾನೂನು ಶಿಕ್ಷಣ ಸಂಸ್ಥೆ ವಿ.ವಿ. – ಬೆಂಗ ಳೂರು, ಎನ್‌ಎಲ್‌ಯು- ದಿಲ್ಲಿ, ನಲ್ಸಾರ್‌ ಕಾನೂನು ವಿ.ವಿ. -ಹೈದರಾ ಬಾದ್‌ ಕ್ರಮವಾಗಿ ಮೊದಲ ಮೂರು ಸ್ಥಾನಗಳಲ್ಲಿವೆ.

ಟಾಪ್ ನ್ಯೂಸ್

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾಶ್ರೀ: ಮೇ 27ರವರೆಗೆ ನ್ಯಾಯಾಂಗ ಬಂಧನ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

11

Lok Sabha Elections: ಸೋಲು,ಗೆಲುವಿನ ಲೆಕ್ಕಾಚಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.