ಭಾರತದ ಮೊದಲ ಏಕದಿನ ಗೆಲುವಿಗೆ ತುಂಬಿತು 45 ವರ್ಷ

1975ರ ವಿಶ್ವಕಪ್‌: ಪೂರ್ವ ಆಫ್ರಿಕಾ ವಿರುದ್ಧ 10 ವಿಕೆಟ್‌ ಜಯ

Team Udayavani, Jun 12, 2020, 6:40 AM IST

ಭಾರತದ ಮೊದಲ ಏಕದಿನ ಗೆಲುವಿಗೆ ತುಂಬಿತು 45 ವರ್ಷ

ಹೊಸದಿಲ್ಲಿ: 1975ರ ಜೂನ್‌ 11 ಭಾರತದ ಏಕದಿನ ಕ್ರಿಕೆಟಿನ ಪಾಲಿಗೆ ಐತಿ ಹಾಸಿಕ ದಿನ. ಅಂದು ಭಾರತ ಏಕದಿನದಲ್ಲಿ ತನ್ನ ಮೊದಲ ಗೆಲುವನ್ನು ದಾಖಲಿಸಿತ್ತು. ಗುರುವಾರ ಈ ಸಂಭ್ರಮಕ್ಕೆ ಭರ್ತಿ 45 ವರ್ಷ ತುಂಬಿತು.

ಭಾರತದ ಈ ಗೆಲುವು ಮೊದಲ ವಿಶ್ವಕಪ್‌ನಲ್ಲಿ ಒಲಿದಿತ್ತು. ಕೂಟದ ದ್ವಿತೀಯ ಪಂದ್ಯದಲ್ಲಿ ಎಸ್‌. ವೆಂಕಟರಾಘವನ್‌ ನೇತೃತ್ವದ ಭಾರತ ಲೀಡ್ಸ್‌ ಅಂಗಳದಲ್ಲಿ ಪೂರ್ವ ಆಫ್ರಿಕಾವನ್ನು 10 ವಿಕೆಟ್‌ಗಳಿಂದ ಮಣಿಸಿತ್ತು. ಈಗ ನೋಡಿದರೆ ಇದೇನೂ ಹೆಗ್ಗಳಿಕೆಯ ವಿಜಯವಲ್ಲ. ಆದರೆ ಆಗಷ್ಟೇ ಚಿಗುರೊಡೆಯುತ್ತಿದ್ದ ಏಕದಿನ ಕ್ರಿಕೆಟಿನ ರೋಮಾಂಚನಕ್ಕೆ ಭಾರತ ತನ್ನ ಕೊಡುಗೆ ನೀಡಿದ್ದಂತೂ ಸುಳ್ಳಲ್ಲ. ಇದು ವಿಶ್ವಕಪ್‌ ಇತಿಹಾಸದಲ್ಲಿ ದಾಖಲಾದ 10 ವಿಕೆಟ್‌ ಅಂತರದ ಪ್ರಪ್ರಥಮ ಗೆಲುವು ಎಂಬುದನ್ನು ಮರೆಯುವಂತಿಲ್ಲ.

ಉದ್ಘಾಟನಾ ಪಂದ್ಯದಲ್ಲಿ ಭಾರತ
ಈ ಪಂದ್ಯಾವಳಿಗೂ ಮುನ್ನ ಭಾರತ ಕೇವಲ 2 ಏಕದಿನ ಪಂದ್ಯಗಳನ್ನಷ್ಟೇ ಆಡಿತ್ತು. 1974ರಲ್ಲಿ ಇಂಗ್ಲೆಂಡ್‌ ವಿರುದ್ಧ ಆಡಿದ ಈ ಎರಡೂ ಮುಖಾಮುಖಿಯಲ್ಲಿ ಭಾರತ ಸೋಲನುಭವಿಸಿತ್ತು.

ಕಾಕತಾಳೀಯ ಎಂಬಂತೆ, ವಿಶ್ವಕಪ್‌ ಉದ್ಘಾಟನಾ ಪಂದ್ಯ ದಲ್ಲೂ ಇಂಗ್ಲೆಂಡ್‌-ಭಾರತ ಎದುರಾಗಿದ್ದವು. ಇದನ್ನು ಭಾರತ 202 ರನ್ನುಗಳಿಂದ ಹೀನಾಯವಾಗಿ ಸೋತಿತು. ಇಂಗ್ಲೆಂಡ್‌ 60 ಓವರ್‌ಗಳಲ್ಲಿ 4ಕ್ಕೆ 334 ರನ್‌ ಗಳಿಸಿದರೆ, ಭಾರತ ಟೆಸ್ಟ್‌ ಶೈಲಿಯಲ್ಲಿ ಬ್ಯಾಟ್‌ ಬೀಸಿ, ಪೂರ್ತಿ 60 ಓವರ್‌ ಆಡಿತು. 3 ವಿಕೆಟಿಗೆ ಕೇವಲ 132 ರನ್‌ ಮಾಡಿ ತನ್ನ ಅನನುಭವವನ್ನು ತೆರೆದಿರಿಸಿತು. ಆರಂಭಕಾರ ಗಾವಸ್ಕರ್‌ 60 ಓವರ್‌ ತನಕ ಬ್ಯಾಟಿಂಗ್‌ ವಿಸ್ತರಿಸಿ, ಬರೋಬ್ಬರಿ 174 ಎಸೆತಗಳನ್ನೆದುರಿಸಿ 36 ರನ್‌ ಮಾಡಿ ಅಜೇಯರಾಗಿ ಉಳಿದದ್ದು ಇದೇ ಪಂದ್ಯದಲ್ಲಿ!

ಟೀಕೆಗಳಿಗೆ ಉತ್ತರ
ಆದರೆ ಪೂರ್ವ ಆಫ್ರಿಕಾ ಎದುರಿನ ಮುಂದಿನ ಪಂದ್ಯದಲ್ಲಿ ಭಾರತ ತಿರುಗಿ ಬಿತ್ತು. 10 ವಿಕೆಟ್‌ಗಳ ಜಯ ಸಾಧಿಸಿ ಸಂಭ್ರಮಿಸಿತು. ಪೂರ್ವ ಆಫ್ರಿಕಾ 55.3 ಓವರ್‌ಗಳಲ್ಲಿ 120ಕ್ಕೆ ಕುಸಿದರೆ, ಭಾರತ 29.5 ಓವರ್‌ಗಳಲ್ಲಿ ವಿಕೆಟ್‌ ನಷ್ಟವಿಲ್ಲದೆ 123 ರನ್‌ ಬಾರಿಸಿತು. ಇಂಗ್ಲೆಂಡ್‌ ವಿರುದ್ಧ “ಬ್ಯಾಟಿಂಗ್‌ ಪ್ರ್ಯಾಕ್ಟೀಸ್‌’ ನಡೆಸಿದ್ದ ಗಾವಸ್ಕರ್‌ ಇಲ್ಲಿ 86 ಎಸೆತಗಳಿಂದ ಅಜೇಯ 65 ರನ್‌ ಮಾಡಿ ಟೀಕೆಗಳಿಗೆ ತಕ್ಕ ಉತ್ತರ ನೀಡಿದರು. ಜತೆಗಾರ ಫಾರೂಖ್‌ ಇಂಜಿನಿಯರ್‌ ಅಜೇಯ 54 ರನ್‌ ಮಾಡಿ ಪಂದ್ಯಶ್ರೇಷ್ಠರೆನಿಸಿದರು.

ಟಾಪ್ ನ್ಯೂಸ್

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KKRvsPBKS; Gautam Gambhir’s Heated Argument With Official

IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.