ಮದಗಜನ ಸೇರುವ ನಿರೀಕ್ಷೆಯಲ್ಲಿ ಆಶಿಕಾ

ಪ್ಯಾನ್‌ ಇಂಡಿಯಾ ಚಿತ್ರಕ್ಕೆ ಜೋರು ತಯಾರಿ

Team Udayavani, Jun 12, 2020, 4:38 AM IST

ashika-madagaja

ಶ್ರೀಮುರಳಿ ಅಭಿನಯದ “ಮದಗಜ’ ಚಿತ್ರ ಈಗಾಗಲೇ ಮೊದಲ ಹಂತದ ಶೇ.30 ರಷ್ಟು ಚಿತ್ರೀಕರಣ ಮುಗಿಸಿದೆ. ಎರಡನೇ ಹಂತಕ್ಕೆ ತಯಾರಾಗುವ ಹೊತ್ತಲ್ಲೇ ಲಾಕ್‌ ಡೌನ್‌ ಘೋಷಣೆಯಾಗಿದೆ. ಈಗ ಲಾಕ್‌ಡೌನ್‌ ಸಡಿಲಗೊಂಡಿದ್ದು,  ಅಂದುಕೊಂಡಂತೆ ನಡೆದರೆ, ಜೂ.18ರಿಂದ ಚಿತ್ರೀಕರಣಕ್ಕೆ ಅನುಮತಿ ಸಿಗುವ ಸಾಧ್ಯತೆ ಇದೆ. ಹಾಗೇನಾದರೂ, ಚಿತ್ರೀಕರಣಕ್ಕೆ ಅನುಮತಿ ಸಿಕ್ಕರೆ, ಜುಲೈ 6 ರಿಂದ “ಮದಗಜ’ ಚಿತ್ರಕ್ಕೆ ಚಾಲನೆ ಸಿಗಲಿದೆ.

ಈ ಚಿತ್ರಕ್ಕೆ ನಟಿ ಆಶಿಕಾ ನಾಯಕಿಯಾಗಿದ್ದಾರೆ. ಈವರೆಗೆ ಶ್ರೀಮುರಳಿ  ಅವರ ಭಾಗದ ಚಿತ್ರೀಕರಣ ಮಾತ್ರ ನಡೆದಿದೆ. ಆಶಿಕಾ ಅವರ ಭಾಗದ ಚಿತ್ರೀಕರಣವಿನ್ನೂ ಶುರುವಾಗಿಲ್ಲ. ಜು.6ರಿಂದ ಆಶಿಕಾ “ಮದಗಜ’ ತಂಡವನ್ನು ಸೇರಿಕೊಳ್ಳಲಿದ್ದಾರೆ. ಮೈಸೂರು ಹಾಗೂ  ಗುಂಡ್ಲುಪೇಟೆ ಸುತ್ತಮುತ್ತಲ ಸ್ಥಳಗಳಲ್ಲಿ ಒಂದೇ ಹಂತದ 46 ದಿನಗಳ ಕಾಲ ಚಿತ್ರೀಕರಣ ನಡೆಸುವ ಯೋಚನೆ ನಿರ್ದೇಶಕ ಮಹೇಶ್‌ ಕುಮಾರ್‌ ಅವರಿಗಿದೆ. ಸದ್ಯಕ್ಕೆ ನಿರ್ದೇಶಕರು ಹಾಡುಗಳ ತಯಾರಿಯಲ್ಲಿದ್ದಾರೆ.

ಈಗಾಗಲೇ ಸಂಗೀತ  ನಿರ್ದೇಶಕ ರವಿಬಸ್ರೂರ್‌ ಅವರು ಹಾಡುಗಳಿಗೆ ರಾಗ ಸಂಯೋ ಜಿಸಿದ್ದು, ಟ್ರ್ಯಾಕ್‌ ಹಾಡಿಸ್ತಾ ಇದ್ದಾರೆ. “ಬಹ ದ್ದೂರ್‌’ ಚೇತನ್‌ ಕುಮಾರ್‌, ರವಿಬಸ್ರೂರ್‌, ಕಿನ್ನರ ರಾಜ್‌ ಬರೆದಿರುವ ನಾಲ್ಕು ಹಾಡುಗಳು  ರೆಡಿಯಾಗಿವೆ. ಸದ್ಯಕ್ಕೆ ಗಾಯಕ ಸಂತೋಷ್‌ ವೆಂಕಿ ಅವರು ಟ್ರ್ಯಾಕ್‌ ಹಾಡಿದ್ದಾರೆ. ಕೈಲಾಶ್‌ ಖೇರ್‌, ಕಾಲ ಭೈರವ, ಶ್ರೇಯಾಘೋಷಾಲ್‌ ಇತರರು ಹಾಡಲಿದ್ದಾರೆ.

ತಮ್ಮ ಚಿತ್ರದ ಬಗ್ಗೆ ಹೇಳುವ ನಿರ್ದೇಶಕ ಮಹೇಶ್‌ಕುಮಾರ್‌, ಸದ್ಯ ಲಾಕ್‌ಡೌನ್‌ ತೆರವಾಗಿದೆ. ಚಿತ್ರೀಕರಣಕ್ಕೆ ಅನುಮತಿ ಕೊಟ್ಟರೆ, ನಾವು ಶೂಟಿಂಗ್‌ಗೆ ಹೋಗುವ ತಯಾರಿ ಮಾಡಿಕೊಂಡಿದ್ದೇವೆ. ಇಷ್ಟೊತ್ತಿಗಾಗಲೇ ಚಿತ್ರೀಕರಣ ಮುಗಿಯಬೇಕಿತ್ತು. ಆದರೆ, ಲಾಕ್‌ಡೌನ್‌ ಘೋಷಣೆಯಾಯಿತು. ಆದಷ್ಟು ಬೇಗ  ಚಿತ್ರೀಕರಣ ಶುರುವಾದರೆ, ಒಂದೇ ಹಂತದಲ್ಲಿ ಶೂಟಿಂಗ್‌ ಮುಗಿಸಿ, ಎಲ್ಲಾಕೆಲಸಗಳನ್ನು ಮಾಡಿಕೊಂಡು ಡಿಸೆಂಬರ್‌ 25 ರಂದು ಬಿಡುಗಡೆ ಮಾಡುವ ಯೋಚನೆ ಮಾಡಲಾಗಿದೆ.ಆದರೆ, ಅದಕ್ಕೆ ಪೂರಕವಾಗಿ, ಈಗ ಚಿತ್ರೀಕರಣಕ್ಕೆ ಅನುಮತಿ ಸಿಗಬೇಕಿದೆ ಎನ್ನುತ್ತಾರೆ ಮಹೇಶ್‌ ಕುಮಾರ್‌.

ಚಿತ್ರಕ್ಕೆ ನವೀನ್‌ಕುಮಾರ್‌ ಛಾಯಾಗ್ರಹಣವಿದೆ. ಹರೀಶ್‌ ಗೊಂಬೆ ಸಂಕಲನವಿದೆ. ಮೋಹನ್‌ ಬಿ.ಕೆ.ರೆ ಕಲಾ ನಿರ್ದೇಶನವಿದೆ. ಚಿತ್ರದಲ್ಲಿ ಶಿವರಾಜ್‌ ಕೆ.ಆರ್‌.ಪೇಟೆ, ಚಿಕ್ಕಣ್ಣ, ರಂಗಾಯಣ ರಘು ಜೊತೆ ಅನೇಕರು ನಟಿಸುತ್ತಿದ್ದಾರೆ.  ವಿಶೇಷವೆಂದರೆ, ಇದು ಪ್ಯಾನ್‌ ಇಂಡಿಯಾ ಸಿನಿಮಾ ಆಗಲಿದ್ದು, ಪರಭಾಷೆಯ ಖಳನಟರನ್ನು ಕರೆತರಲಾಗುತ್ತಿದೆ. ಹಾಗೆಯೇ ಅವರ ಅಮ್ಮನ  ಪಾತ್ರಕ್ಕೂ ಪರಭಾಷೆಯ ಕಲಾವಿದರೇ ಇರಲಿದ್ದಾರೆ ಎಂಬುದು ಚಿತ್ರತಂಡದ ಹೇಳಿಕೆ.

ಟಾಪ್ ನ್ಯೂಸ್

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Aditya’s kangaroo movie released

Kangaroo; ಥ್ರಿಲ್ಲರ್‌ ಹಾದಿಯಲ್ಲಿ ಆದಿತ್ಯ ಹೆಜ್ಜೆ ಗುರುತು

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ಟ್ರೆಂಡ್‌ ಬದಲಾಗಿದೆ ಹೊಸದೇನೋ ಬೇಕಾಗಿದೆ… ಮಲಯಾಳಂನತ್ತ ಸಿನಿಮಂದಿ ಬೆರಗು ನೋಟ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.