ಸಂಸದರ ವಿರುದ್ಧ ಅಪಪ್ರಚಾರ
Team Udayavani, Jun 12, 2020, 6:50 AM IST
ಶ್ರೀನಿವಾಸಪುರ: ಎಲ್ಲಾ ಜಾತಿ, ವರ್ಗಗಳನ್ನು ಸಮಾನವಾಗಿ ಕಾಣುವುದರ ಜೊತೆಗೆ ಒಕ್ಕಲಿಗ ಮುಖಂಡರನ್ನು ಮುಂದಿಕ್ಕಿಕೊಂಡು ಅಭಿವೃದಿಟಛಿ ಕೆಲಸ ಮಾಡು ತ್ತಿದ್ದರೂ ಕೆಲವು ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸಂಸದ ಎಸ್. ಮುನಿಸ್ವಾಮಿ ವಿರುದ್ಧ ಅಪಪ್ರಚಾರ ಮಾಡುತ್ತಿರುವುದು ಸರಿಯಲ್ಲ ಎಂದು ಬಿಜೆಪಿ ಜಿಲ್ಲಾ ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿವಣ್ಣ ಹೇಳಿದರು.
ಪಟ್ಟಣದಲ್ಲಿ ಗುರುವಾರ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕ್ಷೇತ್ರದ ಜನತೆ ಭೇದ ಮಾಡದೆ ಎಲ್ಲಾ ಸಮುದಾಯದವರು ಸೇರಿ ಮುನಿಸ್ವಾಮಿ ಅವರನ್ನುಗೌರವದಿಂದ ಆಯ್ಕೆ ಮಾಡಿದ್ದಾರೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಅಭಿವೃದಿ ಕಾರ್ಯಗಳನ್ನು ಮಾಡುತ್ತಿದ್ದಾರೆ ಎಂದು ಹೇಳಿದರು. ರಾಜ್ಯ ಮತ್ತು ಕೇಂದ್ರ ಸರ್ಕಾರದ ಯೋಜನೆಗಳನ್ನು ಜನರ ಬಳಿ ತೆಗೆದುಕೊಂಡು ಹೋಗಲು ಒಕ್ಕಲಿಗರ ಮುಖಂಡರನ್ನು ಮುಂದಿಕ್ಕಿಕೊಂಡು ಕೆಲಸ ಮಾಡಲಾಗುತ್ತಿದೆ.
ಈ ಕ್ಷೇತ್ರದಲ್ಲಿ ಅಧಿಕಾರ ಅನುಭವಿಸಿ 40 ವರ್ಷಗಳಿಂದ ಮಾಡದ ಕೆಲಸಗಳನ್ನು ಸಂಸದರು ಮಾಡುತ್ತಿದ್ದಾರೆ ಎಂದು ತಿಳಿಸಿದರು. ಸಮಯ ವ್ಯರ್ಥ ಮಾಡದೇ ಜನರಿಗೆ ಹತ್ತಿರವಾಗಿ ಕೆಲಸ ಮಾಡುತ್ತಿದ್ದಾರೆ. ಕೆಲ ಕಿಡಿಗೇಡಿಗಳು ಸಂಸದರ ವ್ಯಕ್ತಿತ್ವ ತೇಜೋವಧೆ ಮಾಡಲು ವಿರೋಧ ಪಕ್ಷದವರ ಜೊತೆಗೂಡಿ ಒಕ್ಕಲಿಗರು ಓಟು ಹಾಕಿಲ್ಲವೆಂದು ಸಂಸದರು ಹೇಳುತ್ತಿದ್ದಾರೆಂದು ಅಪಪ್ರಚಾರ ಮಾಡುತ್ತಿದ್ದಾರೆ.
ಇದು ಸತ್ಯಕ್ಕೆ ದೂರವಾಗಿದೆ. ಮುಂದುವರಿದ ಎಲ್ಲಾ ಸಮುದಾಯದವರನ್ನು ಗೌರವದಿಂದ ಕಾಣುತ್ತಿದ್ದಾರೆ ಎಂದು ಹೇಳಿದರು. ಸುದ್ದಿಗೋಷ್ಠಿಯಲ್ಲಿ ವಕೀಲ ಬಂಗವಾದಿ ನಾಗರಾಜ್, ರಾಮಾಂಜಿ, ಸುರೇಶ ನಾಯಕ್, ಎಸ್.ಗಿರೀಶ್, ವೆಂಕಟೇಶ್, ಆನಂದನಾಯಕ್, ಮನೋಜ್ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು
Kolar; ಮೋದಿ ಶನಿ: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ
CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?
ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್ದು: ಕೃಷ್ಣಬೈರೇ ಗೌಡ
Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ