ಪ್ರಧಾನಿ ಮೋದಿ ಸಂದೇಶ ಮನೆ ಮನೆಗೆ ತಲುಪಿಸಿ


Team Udayavani, Jun 12, 2020, 7:39 AM IST

ಪ್ರಧಾನಿ ಮೋದಿ ಸಂದೇಶ ಮನೆ ಮನೆಗೆ ತಲುಪಿಸಿ

ಮುದ್ದೇಬಿಹಾಳ: ಪ್ರಧಾನಿ ಮೋದಿ ನೇತೃತ್ವದಲ್ಲಿ ಕೇಂದ್ರ ಸರ್ಕಾರ ಎರಡನೇ ಅವಧಿಯನ್ನು ಯಶಸ್ಸಿನೊಂದಿಗೆ ಪೂರೈಸುವತ್ತ ದಾಪುಗಾಲಿಡುತ್ತಿದೆ. ತಮ್ಮ ಆಡಳಿತದ ಯಶಸ್ಸಿನ ಪಾಲುದಾರರಾಗಿರುವ ಜನತೆಗೆ ಮೋದಿ ಅವರು ಪತ್ರ ಬರೆದಿದ್ದು, ಆ ಪತ್ರರೂಪದ ಕರಪತ್ರಗಳನ್ನು ಪ್ರತಿ ಮನೆಗೂ ತಲುಪಿಸುವ ಕೆಲಸ ಕಾರ್ಯಕರ್ತರು ಮಾಡಬೇಕು ಎಂದು ಶಾಸಕ ಎ.ಎಸ್‌.ಪಾಟೀಲ ನಡಹಳ್ಳಿ ಹೇಳಿದರು.

ಇಲ್ಲಿನ ದಾಸೋಹ ನಿಲಯದಲ್ಲಿ ಗುರುವಾರ ಸಂಜೆ ಬಿಜೆಪಿ ಮುದ್ದೇಬಿಹಾಳ ಮಂಡಲ ಪ್ರಮುಖರು, ಬೂತ್‌ಮಟ್ಟದ ಮುಖಂಡರ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ಕಾರ್ಯಕರ್ತರು ಬೂತ್‌ ಮಟ್ಟದಲ್ಲಿ ಉತ್ಸಾಹದಿಂದ ಕೆಲಸ ಮಾಡುತ್ತಿದ್ದಾರೆ. ಮೋದಿ ಅವರ ಸಂದೇಶವನ್ನು ಜನತೆಗೆ ತಲುಪಿಸುತ್ತಿದ್ದಾರೆ. ಇದು ಎಲ್ಲ ಕಡೆಯೂ ಯಶಸ್ವಿಯಾಗಿ ನಡೆಯುವಂತೆ ನೋಡಿಕೊಳ್ಳಬೇಕು. ಪಕ್ಷವನ್ನು ಕೆಳಮಟ್ಟದಿಂದ ಇನ್ನಷ್ಟು ಬಲಪಡಿಸಲು ಮುಂದಾಗಬೇಕು ಎಂದರು.

ಕರ್ನಾಟಕದಲ್ಲಿ ಕೋವಿಡ್  ನಿಯಂತ್ರಣದಲ್ಲಿರುವುದಕ್ಕೆ ಸಿಎಂ ಯಡಿಯೂರಪ್ಪ ಅವರ ಸಮಯೋಚಿತ ನಿರ್ಧಾರಗಳು ಕಾರಣ. ರಾಜ್ಯ ಬಿಜೆಪಿಯಿಂದ ಕೋವಿಡ್  ಸಂಕಷ್ಟಕ್ಕೆ ಸಾಕಷ್ಟು ಸ್ಪಂದನೆ ದೊರೆತಿದೆ. ಈ ಸಂದರ್ಭ ನಮ್ಮ ಜವಾಬ್ದಾರಿ, ನಮ್ಮ ಕರ್ತವ್ಯಗಳ ಕುರಿತು ಪ್ರಧಾನಿಯವರು ನೀಡಿರುವ ನಿರ್ದೇಶನಗಳನ್ನು ಎಲ್ಲರೂ ಪಾಲಿಸಬೇಕು ಎಂದರು.

ಮಂಡಲ ಅಧ್ಯಕ್ಷ ಡಾ| ಪರಶುರಾಮ ಪವಾರ ಮಾತನಾಡಿ, ಈಗಾಗಲೇ ಈ ಭಾಗದಲ್ಲಿ ಪಕ್ಷ ಸಾಕಷ್ಟು ಬಲಿಷ್ಟವಾಗಿದೆ. ಕೇಂದ್ರದಲ್ಲಿ ಮೋದಿ ಅವರು, ರಾಜ್ಯದಲ್ಲಿ ಯಡಿಯೂರಪ್ಪ ಅವರು ಉತ್ತಮ ಕೆಲಸ ಮಾಡುತ್ತಿದ್ದಾರೆ. ಕೊರೊನಾ ಕಷ್ಟಕಾಲದಲ್ಲಿ ಕೇಂದ್ರ, ರಾಜ್ಯ ಸರ್ಕಾರಗಳು ಪರಿಣಾಮಕಾರಿಯಾಗಿ ಕೆಲಸ ಮಾಡಿವೆ. ಎರಡೂ ಸರ್ಕಾರಗಳ ಸಾಧನೆಯನ್ನು ಸಾಮಾನ್ಯ ಜನರಿಗೆ ತಲುಪಿಸುವ ಹೊಣೆ ಬೂತ್‌ ಮಟ್ಟದ ಮುಖಂಡರ ಮೇಲಿದೆ ಎಂದರು.

ಮಲಕೇಂದ್ರಗೌಡ ಪಾಟೀಲ, ಶಿವಶಂಕರ ಹಿರೇಮಠ, ವಾಸುದೇವ ಹೆಬಸೂರ, ಮುತ್ತಪ್ಪ ಚಮಲಾಪುರ, ಮಲ್ಲಿಕಾರ್ಜುನ ತಂಗಡಗಿ, ಮುತ್ತಣ್ಣ ಹುಂಡೇಕಾರ, ಬಸವರಾಜ ಗುಳಬಾಳ, ಲಕ್ಷ್ಮಣ ಬಿಜ್ಜೂರ, ಅಶೋಕ ರಾಠೊಡ ನೇಬಗೇರಿ, ಬಿ.ಜಿ.ಜಗ್ಗಲ್‌ ವಕೀಲರು, ಪುರಸಭೆ ಸದಸ್ಯರಾದ ಸಂಗಮ್ಮ ದೇವರಳ್ಳಿ, ಸಹನಾ ಬಡಿಗೇರ, ಗೌರಮ್ಮ ಹುನಗುಂದ, ಶಿಲ್ಪಾ ಶರ್ಮಾ, ಸುಭಾಷ ಕಾಳಗಿ, ಬಸವರಾಜ ಚಿಂತಾಮಣಿ, ಮಂಜುನಾಥ ರತ್ನಾಕರ, ಶಿವನಗೌಡ ತಾಳಿಕೋಟ ಸೇರಿದಂತೆ ಮುದ್ದೇಬಿಹಾಳ, ತಾಳಿಕೋಟೆ, ನಾಲತವಾಡ ಭಾಗದ ಬೂತ್‌ ಮಟ್ಟದ ಮುಖಂಡರು ಪಾಲ್ಗೊಂಡಿದ್ದರು

ಟಾಪ್ ನ್ಯೂಸ್

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qewqeqw

Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.