ಕುಡುಕರ ತಾಣವಾದ ಕಂಪ್ಲಿ ಹಳೇ ಬಸ್ ನಿಲ್ದಾಣ
Team Udayavani, Jun 12, 2020, 4:35 PM IST
ಕಂಪ್ಲಿ: ಹಳೇ ಬಸ್ ನಿಲ್ದಾಣ ಆವರಣದ ವಾಣಿಜ್ಯ ಮಳಿಗೆ ಮುಂಭಾಗದಲ್ಲಿ ಮದ್ಯ ಸೇವಿಸುತ್ತಿರುವ ಹಗಲು ಕುಡಕರು.
ಕಂಪ್ಲಿ: ಸದಾ ಜನಜಂಗುಳಿಯಿಂದ ಕೂಡಿರುತ್ತಿದ್ದ ಪಟ್ಟಣದ ಹಳೇ ಬಸ್ ನಿಲ್ದಾಣ ಆವರಣ ಹಾಗೂ ವಾಣಿಜ್ಯ ಮಳಿಗೆಗಳ ಮುಂಭಾಗ ಕುಡುಕರ ತಾಣವಾಗಿದೆ. ಕುಡುಕರ ಹಾವಳಿಯಿಂದ ಹೂ-ಹಣ್ಣು, ಕಿರಾಣಿ ಸಾಮಾನು ಖರೀದಿಗೆ ಬರುವವರು, ಪ್ರಯಾಣಿಕರು ಹಾಗೂ ಸಾರ್ವಜನಿಕರು ರೋಸಿ ಹೋಗಿದ್ದಾರೆ.
ಪಟ್ಟಣದ ಹಳೇ ಬಸ್ ನಿಲ್ದಾಣ ಆವರಣವನ್ನು ರಸ್ತೆ ಬದಿಯಲ್ಲಿ ವ್ಯಾಪಾರ ಮಾಡುವ ಹೂ ಮತ್ತು ಹಣ್ಣು ಮಾರಾಟಕ್ಕಾಗಿ ಮೈದಾನವನ್ನು ಅಭಿವೃದ್ಧಿಗೊಳಿಸಿ, ಪಕ್ಕದಲ್ಲಿ ಸಾಲು ವಾಣಿಜ್ಯ ಮಳಿಗೆಗಳನ್ನು ಲಕ್ಷಾಂತರ ರೂ.ಗಳ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಆದರೆ ಇವುಗಳನ್ನು ನಿರ್ಮಿಸಿ ವರ್ಷಗಳೇ ಕಳೆದರೂ ವಾಣಿಜ್ಯ ಮಳಿಗೆಗಳ ಹರಾಜ್ ಹಾಕದೇ ಇರುವುದರಿಂದ ಮತ್ತು ಬೀದಿ ವ್ಯಾಪಾರಿಗಳನ್ನು ಮೈದಾನಕ್ಕೆ ಸ್ಥಳಾಂತರಿಸದೇ ಇರುವುದರಿಂದ ಮಧ್ಯಾಹ್ನವಾದರೆ ಸಾಕು ಕುಡುಕರ ತಾಣವಾಗಿ ಮಾರ್ಪಡುತ್ತದೆ.
ಪಕ್ಕದಲ್ಲಿ ವ್ಯಾಪಾರ ಮಾಡುವ ಬೀದಿ ಬದಿ ವ್ಯಾಪಾರಿಗಳು ಎಷ್ಟೇ ಹೇಳಿದರೂ ಪಕ್ಕದಲ್ಲಿಯೇ ಇರುವ ಎರಡು ಮದ್ಯದದ ಅಂಗಡಿಗಳಿಂದ ಮದ್ಯ ತರುವ ಮದ್ಯಸೇವಕರು ಬಯಲಿನಲ್ಲಿಯೇ ಕುಡಿದು ಇಡೀ ವಾತಾವರಣ ಕಲುಷಿತ ಗೊಳಿಸುತ್ತಿದ್ದಾರೆ. ಮಹಿಳೆಯರು, ಮಕ್ಕಳು ಈ ಪ್ರದೇಶದಲ್ಲಿ ಸಂಚರಿಸಲು ಭಯ ಪಡುತ್ತಿದ್ದಾರೆ. ಪೊಲೀಸರು ಹಾಗೂ ಅಧಿಕಾರಿಗಳು ದಾಳಿ ಮಾಡಿ ಎಚ್ಚರಿಸಿದರೂ ಸಹಿತ ಕುಡುಕರು ಮಾತ್ರ ನಿತ್ಯ ಮದ್ಯ ಸೇವನೆ ನಿಲ್ಲಿಸಿಲ್ಲ. ಸ್ವಚ್ಛತೆ ಹಾಗೂ ಸಾರ್ವಜನಿಕರ ಹಿತಕಾಯಬೇಕಿದ್ದ ಪುರಸಭೆ ಅಧಿಕಾರಿಗಳು ಮಾತ್ರ ಕಣ್ಮುಚ್ಚಿ ಕುಳಿತ್ತಿದ್ದಾರೆಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ
BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ
ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!
Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ
Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ
Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು
PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ ಇದ್ದಾರೆ : ಸಿದ್ದರಾಮಯ್ಯ