ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೆ ರಸ್ತೆಗೆ ಹಾನಿ ಸಂಭವ

ಮಳೆಗಾಲಕ್ಕೆ ಸಿದ್ಧಗೊಳ್ಳಬೇಕಿದೆ ಕೋಟ-ಗೋಳಿಯಂಗಡಿ, ಬ್ರಹ್ಮಾವರ-ಜನ್ನಾಡಿ ಜಿಲ್ಲಾ ಮುಖ್ಯ ರಸ್ತೆಗಳು

Team Udayavani, Jun 13, 2020, 5:45 AM IST

ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದೆ ರಸ್ತೆಗೆ ಹಾನಿ ಸಂಭವ

ಕೋಟ: ಮುಂಗಾರು ಮಳೆ ಆರಂಭ ವಾದರೂ ಚರಂಡಿ ನಿರ್ವಹಣೆ ಕಾಮಗಾರಿ ಇನ್ನೂ ಆರಂಭವಾಗಿಲ್ಲ. ಹೀಗಾಗಿ ಕೋಟ-ಗೋಳಿಯಂಗಡಿ, ಬ್ರಹ್ಮಾವರ-ಜನ್ನಾಡಿ ಜಿಲ್ಲಾ ಮುಖ್ಯ ರಸ್ತೆಯ ಹಲವು ಕಡೆಗಳಲ್ಲಿ ರಸ್ತೆಯ ಮೇಲೆ ಮಳೆ ನೀರು ಹರಿದು ಹಾನಿಯಾಗುತ್ತಿದೆ. ಆದ್ದರಿಂದ ಆದಷ್ಟು ಶೀಘ್ರ ರಸ್ತೆಯ ನಿರ್ವಹಣೆಯ ಕುರಿತು ಪಿಡಬ್ಲ್ಯುಡಿ ಇಲಾಖೆ ಗಮನಹರಿಸಬೇಕಿದೆ.

ಪ್ರತಿ ವರ್ಷ ಸಮಸ್ಯೆ
ಈ ಜಿಲ್ಲಾ ಮುಖ್ಯ ರಸ್ತೆಯ ಹಲವು ಕಡೆಗಳಲ್ಲಿ ಚರಂಡಿ ವ್ಯವಸ್ಥೆ ಸಮರ್ಪಕವಾಗಿಲ್ಲದ ಕಾರಣ ಪ್ರತೀ ವರ್ಷ ಸಮಸ್ಯೆ ಮರುಕಳಿಸುತ್ತಿದೆ. ಇಲ್ಲಿನ ಸಾಹೇಬ್ರಕಟ್ಟೆ ಮೆಸ್ಕಾಂ ಕಚೇರಿ ಎದುರು, ವಡ್ಡರ್ಸೆ, ಬನ್ನಾಡಿ, ಯಡ್ತಾಡಿ, ಬಾರ್ಕೂರು, ಶಿರಿಯಾರ, ಬಿಲ್ಲಾಡಿ, ಶಿರೂರುಮೂಕೈ ಮುಂತಾದ ಸ್ಥಳಗಳು ಖಾಯಂ ಸಮಸ್ಯೆಯ ತಾಣಗಳಾಗಿವೆ.

ಹೂಳೆತ್ತಿ ಸ್ವಚ್ಛಗೊಳಿಸಿದರೆ ಉತ್ತಮ
ಪ್ರತಿ ಬಾರಿ ಮಳೆಗಾಲದಲ್ಲಿ ಕೇವಲ ಚರಂಡಿಯ ಕಸಕಡ್ಡಿಗಳನ್ನು ಸ್ವಚ್ಛಗೊಳಿಸುವುದು ಹೊರತುಪಡಿಸಿದರೆ ಹೂಳೆತ್ತುವ ಕೆಲಸ ಆಗಿಲ್ಲ. ಹೀಗಾಗಿ ತ್ಯಾಜ್ಯ ಗಳಿಂದ ಚರಂಡಿ ಮುಚ್ಚಿ ರಸ್ತೆ ಮೇಲೆ ನೀರು ಹರಿಯುತ್ತಿದೆ. ಆದ್ದರಿಂದ ಹೂಳೆತ್ತಿ ಚರಂಡಿ ಸ್ವಚ್ಛಗೊಳಿಸಬೇಕು ಎನ್ನುವುದು ಸ್ಥಳೀಯರ ಬೇಡಿಕೆಯಾಗಿದೆ.

200 ಮೀಟರ್‌ನಷ್ಟು ಸ್ವಚ್ಛ
ಸಾಲಿಗ್ರಾಮ ಪ.ಪಂ. ವ್ಯಾಪ್ತಿಗೆ ಬರುವ ಕೋಟ ಮೂಕೈಯಿಂದ ಬೆಟ್ಲಕ್ಕಿ ಹಡೋಲು ತನಕ ಸುಮಾರು 200ಮೀನಷ್ಟು ದೂರ ರಸ್ತೆಯ ಎಡ ಭಾಗದ ಚರಂಡಿಯನ್ನು ಪಟ್ಟಣ ಪಂಚಾಯತ್‌ ವತಿಯಿಂದ ಸ್ವಚ್ಛಗೊಳಿಸಲಾಗಿದೆ. ಆದರೆ ಇಲ್ಲಿ ಅದನ್ನು ಹೊರತುಪಡಿಸಿ ಎರಡು ಕಡೆ ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದಿರುವುದರಿಂದ ನೀರಿನ ಹರಿವಿಗೆ ಸಮಸ್ಯೆ ಇದೆ.

ತ್ಯಾಜ್ಯ ವಿಲೇವಾರಿಗೆ ಕ್ರಮ ಅಗತ್ಯ
ಕೋಟದ ಬೆಟ್ಲಕ್ಕಿ ಹಡೋಲಿನ ರಸ್ತೆಯ ಇಕ್ಕೆಲಗಳಲ್ಲಿ ತ್ಯಾಜ್ಯವನ್ನು ಎಸೆಯಲಾಗುತ್ತಿದೆ. ಹೀಗಾಗಿ ಮಳೆ ನೀರಿನ ಜತೆ ತ್ಯಾಜ್ಯದ ನೀರು ಸೊಳ್ಳೆ ಉತ್ಪಾದನೆ ಕೇಂದ್ರವಾಗಿ ಮಾರ್ಪಡುವ ಸಾಧ್ಯತೆ ಇದೆ. ಆದ್ದರಿಂದ ಈ ತ್ಯಾಜ್ಯವನ್ನು ಸಮರ್ಪಕವಾಗಿ ವಿಲೇವಾರಿಗೊಳಿಸಿ ಸ್ವಚ್ಛಗೊಳಿಸುವ
ಅಗತ್ಯವಿದೆ.

ಕಾಮಗಾರಿಗೆ ಸೂಚನೆ
ಕೋಟ-ಗೋಳಿಯಂಗಡಿ ಹಾಗೂ ಬ್ರಹ್ಮಾವರ-ಜನ್ನಾಡಿ ಜಿಲ್ಲಾ ಮುಖ್ಯ ರಸ್ತೆಯಲ್ಲಿ ನೀರು ನಿಲ್ಲುವ ಕುರಿತು ಸ್ಥಳೀಯರು ಈಗಾಗಲೇ ದೂರು ನೀಡಿದ್ದಾರೆ.ಇದರ ಚರಂಡಿಗಳನ್ನು ಸ್ವಚ್ಛಗೊಳಿಸಲು ಕ್ರಮಕೈಗೊಳ್ಳುವಂತೆ ಆ ಭಾಗದ ಎಂಜಿನಿಯರ್‌ಗಳಿಗೆ ಈಗಾಗಲೇ ಸೂಚನೆ ನೀಡಿದ್ದೇನೆ.
-ಜಗದೀಶ್‌ ಭಟ್‌, ಎ.ಇ.ಇ.ಪಿ.ಡಬ್ಲ್ಯು.ಡಿ., ಉಡುಪಿ

ಟಾಪ್ ನ್ಯೂಸ್

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

1-wqeewqe

Mumbai Indians ವಿರುದ್ಧ ತವರಿನ ಅಂಗಳ: ರಾಹುಲ್‌ಗೆ ಮಹತ್ವದ ಪಂದ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

Gurpatwant ಪನ್ನು ಹತ್ಯೆಗೆ ರಾ ಅಧಿಕಾರಿ ಸಂಚು; ವಾಷಿಂಗ್ಟನ್‌ ಪೋಸ್ಟ್‌ ವರದಿ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.