ವರ್ಷದಿಂದ ವರ್ಷಕ್ಕೆ ಮಲೇರಿಯಾ ಪ್ರಕರಣಗಳ ಕುಸಿತ

 ಉಡುಪಿ ಮಲೇರಿಯ ಮುಕ್ತ ಜಿಲ್ಲೆಯತ್ತ ಹೆಜ್ಜೆ

Team Udayavani, Jun 13, 2020, 6:01 AM IST

ವರ್ಷದಿಂದ ವರ್ಷಕ್ಕೆ ಮಲೇರಿಯಾ ಪ್ರಕರಣಗಳ ಕುಸಿತ

ಉಡುಪಿ: ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಮಲೇರಿಯಾ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತಿರುವುದು, ಆರೋಗ್ಯ ಇಲಾಖೆ 2022ರಲ್ಲಿ ಮಲೇರಿಯಾ ಮುಕ್ತ ಜಿಲ್ಲೆಯತ್ತ ಹೆಜ್ಜೆ  ಇಡುವಲ್ಲಿ ಪ್ರಥಮ ಹಂತದಲ್ಲಿ ಯಶಸ್ವಿಯಾಗಿದೆ.

ಶೇ.50ರಷ್ಟು ಇಳಿಕೆ
ಜಿಲ್ಲೆಯಲ್ಲಿ ವರ್ಷದಿಂದ ವರ್ಷಕ್ಕೆ ಶೇ.50ರಷ್ಟು ಪ್ರಕರಣ ಕಡಿಮೆಯಾಗುತ್ತಿದೆ. 2020ನೇ ಸಾಲಿನ ಜೂನ್‌ 11 ವರೆಗೆ 4,574 ಶಂಕಿತ ವ್ಯಕ್ತಿಗಳ ರಕ್ತವನ್ನು ಪರೀಕ್ಷೆಗೆ ಒಳಪಡಿಸಿದ್ದು, ಅವರಲ್ಲಿ 21 ಮಂದಿಗೆ ಮಲೇರಿಯಾ ಪಾಸಿಟಿವ್‌ ಬಂದಿದೆ. 2017ರಲ್ಲಿ 1,96,499 ಮಲೇರಿಯಾ ಶಂಕಿತ ವ್ಯಕ್ತಿಗಳ ರಕ್ತವನ್ನು ಪರೀಕ್ಷೆಗೆ ಒಳಪಡಿಸಿದ್ದು, ಅವರಲ್ಲಿ 513 ಜನರಲ್ಲಿ ಮಲೇರಿಯಾ ಕಂಡುಬಂದಿದೆ. 2018 ಮತ್ತು 2019ರಲ್ಲಿ ಕ್ರಮವಾಗಿ 1,82,724 ಹಾಗೂ 2,02,110 ಮಲೇರಿಯಾ ಶಂಕಿತ ವ್ಯಕ್ತಿಗಳ ರಕ್ತವನ್ನು ಪರೀಕ್ಷೆಗೆ ಒಳಪಡಿಸಿದ್ದು, ಅವರಲ್ಲಿ ಕ್ರಮ
ವಾಗಿ 221 ಹಾಗೂ 150 ಜನರಿಗೆ ಮಲೇರಿಯಾ ಪತ್ತೆಯಾಗಿತ್ತು.

ತೆಗೆದುಕೊಂಡ ಮುನ್ನೆಚ್ಚರಿಕೆ ಕ್ರಮ
ಜಿಲ್ಲಾ ಆರೋಗ್ಯ ಇಲಾಖೆ ಮಲೇರಿಯಾ ಹಿಡಿತಕ್ಕೆ ತರಲು ವಿಶೇಷ ಯೋಜನೆ ಹಾಕಿಕೊಂಡಿದ್ದು, ಅದರ ಅನ್ವಯ ಹೊಸದಾಗಿ ಕಟ್ಟಡ ನಿರ್ಮಾಣ ಮಾಡುವವರು ಕಡ್ಡಾಯವಾಗಿ ಆರೋಗ್ಯ ಇಲಾಖೆಯಿಂದ ಎನ್‌ಒಸಿ ಪಡೆಯ ಬೇಕಾಗಿದೆ. ಈ ಸಂದರ್ಭದಲ್ಲಿ ಇಲಾಖೆಯು ಕಟ್ಟಡ ಕಾರ್ಮಿಕರಿಗೆ ಕಡ್ಡಾಯ ಆರೋಗ್ಯ ತಪಾಸಣೆ, ಅವರು ವಾಸಿಸುವ ಸ್ಥಳದಲ್ಲಿ ನೀರು ನಿಲ್ಲದಂತೆ ಹಾಗೂ ಮೂಲ ಅವಶ್ಯಕತೆ ಪೂರೈಸುವಂತೆ ಮಾಲಕರಿಗೆ ಷರತ್ತು ವಿಧಿಸಿದೆ. ಜತೆಗೆ ಆರೋಗ್ಯ ಇಲಾಖೆ ಸಿಬಂದಿ ಕಾಲ ಕಾಲಕ್ಕೆ ಸ್ಥಳಕ್ಕೆ ಪರಿಶೀಲನೆ ಮಾಡಿದ್ದಾರೆ. ಜತೆಗೆ ಜಿಲ್ಲೆಯ ಎಲ್ಲ ಖಾಸಗಿ ಆಸ್ಪತ್ರೆಗಳಲ್ಲಿ ಪತ್ತೆಯಾಗುವ ಸಂಶಯಾಸ್ಪದ ಮಲೇರಿಯಾ ಪ್ರಕರಣಗಳ ವರದಿಯನ್ನು ಆರೋಗ್ಯ ಇಲಾಖೆಗೆ ನೀಡುವಂತೆ ಆದೇಶ ಹೊರಡಿಸಲಾಗಿದೆ.

65,000 ಪರದೆ ವಿತರಣೆ
ಸೊಳ್ಳೆ ಉತ್ಪತ್ತಿಯನ್ನು ತಡೆಯಲು ಜನರಲ್ಲಿ ವ್ಯಾಪಕ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಪ್ರದೇಶದ ಜನರಿಗೆ ಸೊಳ್ಳೆ ಪರದೆ ವಿತರಿಸಲು ಕ್ರಮ ಕೈಗೊಂಡಿದ್ದು, ಈ ಬಾರಿ 65,000 ಸೊಳ್ಳೆ ಪರದೆ ಜಿಲ್ಲೆಗೆ ಸರಬರಾಜು ಆಗಿದೆ.

ರೋಗಕ್ಕೆ ಕಾರಣವೇನು?
ವಿವಿಧ ಕಡೆಯ ಕಟ್ಟಡ ಕಾರ್ಮಿಕರು ಉಡುಪಿಯಲ್ಲಿ ವಸತಿ ನಿರ್ಮಾಣದ ಹಂತದಲ್ಲಿ ಕಾಮಗಾರಿ ಕಟ್ಟಡಗಳ ಪಕ್ಕದಲ್ಲೇ ಜೋಪಡಿ ನಿರ್ಮಿಸಿಕೊಳ್ಳುತ್ತಾರೆ. ಈ ಸ್ಥಳದಲ್ಲಿ ನಿಂತ ನೀರಿನಲ್ಲಿ ಮಲೇರಿಯಾ ಸೊಳ್ಳೆ ಉತ್ಪತ್ತಿಯಾಗುತ್ತಿದ್ದು, ಅವುಗಳು ಕಾರ್ಮಿಕರ ಮೇಲೆ ದಾಳಿ ಇಡುತ್ತವೆ. ಇದರ ಪರಿಣಾಮ ಬಹಳಷ್ಟು ಮಂದಿ ಮಲೇರಿಯಾ ರೋಗಕ್ಕೆ ತುತ್ತಾಗುತ್ತಾರೆ .

65 ಸಾವಿರ ಸೊಳ್ಳೆ ಪರದೆ ವಿತರಣೆ
ವರ್ಷದಿಂದ ವರ್ಷಕ್ಕೆ ಮಲೇರಿಯಾ ಪ್ರಕರಣ ಗಣನೀಯವಾಗಿ ಕಡಿಮೆಯಾಗಿದೆ. ನಿರ್ಮಾಣ ಹಂತದಲ್ಲಿ ಇರುವ ಕಟ್ಟಡಗಳಿಗೆ ಭೇಟಿ ನೀಡಿ ಕಾರ್ಮಿಕರ ಆರೋಗ್ಯ ತಪಾಸಣೆ ಹಾಗೂ ಪರಿಸರ ಸ್ವತ್ಛತೆಯ ಕಡೆಗೆ ಗಮನ ಹರಿಸಲಾಗುತ್ತಿದೆ. 2019ರ ನವೆಂಬರ್‌ನಿಂದ 2020 ಮೇ ವರೆಗೆ ಸುಮಾರು 65 ಸಾವಿರ ಸೊಳ್ಳೆ ಪರದೆ ವಿತರಿಸಲಾಗಿದೆ.
 ಡಾ. ಪ್ರಶಾಂತ್‌ ಭಟ್‌, ಮಲೇರಿಯಾ ಅಧಿಕಾರಿ, ಉಡುಪಿ

ಮಲೇರಿಯಾ ಪ್ರಕರಣ
ಇಸವಿ            ಪ್ರಕರಣ
2012            2,217
2013            2,205
2014            1,639
2015            1,366
2016           1,168
2017            513
2018            221
2019            150

ಟಾಪ್ ನ್ಯೂಸ್

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Rain 2

Tamil Nadu ಭಾರಿ ಮಳೆ ಎಚ್ಚರಿಕೆ: ಊಟಿಗೆ ಬರದಂತೆ ಪ್ರವಾಸಿಗರಿಗೆ ಸೂಚನೆ

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

ಸಾರ್ವತ್ರಿಕ ಚುನಾವಣೆ ಮೇಲೆ ರಾಜ್ಯದ ಗ್ಯಾರಂಟಿ ಪ್ರಭಾವ: ಡಿ.ಕೆ.ಶಿವಕುಮಾರ್‌

air india

Delhi;ಬೆಂಗಳೂರಿಗೆ ಬರುತ್ತಿದ್ದ ವಿಮಾನದಲ್ಲಿ ಬೆಂಕಿ: ದೆಹಲಿಯಲ್ಲಿ ತುರ್ತು ಲ್ಯಾಂಡಿಂಗ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಲೈಂಗಿಕ ದೌರ್ಜನ್ಯ ಬಿಡುಗಡೆಗೆ ಆದೇಶ

Udupi: ಲೈಂಗಿಕ ದೌರ್ಜನ್ಯ ಬಿಡುಗಡೆಗೆ ಆದೇಶ

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

Manipal: ಗಾಂಜಾ ಸೇವನೆ: 6 ಮಂದಿ ವಶಕ್ಕೆ

MLC Election; ಕಣದಿಂದ ಹಿಂದೆ ಸರಿಯಲಾರೆ: ರಘುಪತಿ ಭಟ್‌

MLC Election; ಕಣದಿಂದ ಹಿಂದೆ ಸರಿಯಲಾರೆ: ರಘುಪತಿ ಭಟ್‌

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಹೊಟೇಲಿಗೆ ಬೆಂಕಿ; ನಂದಿಸಲು ಬಂದ ಅಗ್ನಿಶಾಮಕ ವಾಹನದಲ್ಲಿ ನೀರೇ ಇಲ್ಲ!

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

Udupi ಲೈಂಗಿಕ ದೌರ್ಜನ್ಯ: ಆರೋಪಿಗಳಿಬ್ಬರಿಗೆ ಜೈಲು ಶಿಕ್ಷೆ

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

accident

Koppal; ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಢಿಕ್ಕಿ: ಸ್ಥಳದಲ್ಲೇ ನಾಲ್ವರ ಸಾವು

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

ಅಂಜಲಿ ಕೊಲೆಯಲ್ಲಿ ಪೊಲೀಸರ ಲೋಪ: ಡಾ| ಜಿ. ಪರಮೇಶ್ವರ್‌

Lokayukta

Haveri; ಇಸ್ಪೀಟ್ ಆಟಕ್ಕೆ ಲಂಚ:ಪಿಎಸ್ಐ, ಕಾನ್ ಸ್ಟೆಬಲ್ ಲೋಕಾಯುಕ್ತ ಬಲೆಗೆ

1-wewqewq

Kunigal: ಗ್ಯಾಸ್ ಸಿಲಿಂಡರ್ ಸ್ಟವ್ ಸ್ಪೋಟ :6 ಮಂದಿಗೆ ತೀವ್ರ ಗಾಯ

1-qweqwew

Belagavi ರೈಲಿನಲ್ಲಿ ಹತ್ಯೆಗೈದು ಪರಾರಿಯಾದ ಆರೋಪಿ ಪತ್ತೆಗೆ ನಾಲ್ಕು ತಂಡ ರಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.