ಸೊಹೈಲ್‌ ವಿಕೆಟ್‌ ಬೇಟೆಯನ್ನು ನೆನಪಿಸಿಕೊಂಡ ಪ್ರಸಾದ್‌

ಭಾರತ-ಪಾಕಿಸ್ಥಾನ ವಿಶ್ವಕಪ್‌ ಪಂದ್ಯದ "ಫೇಮಸ್‌ ಸೆಂಡ್‌ಆಫ್' ಘಟನೆ

Team Udayavani, Jun 13, 2020, 6:18 AM IST

ಸೊಹೈಲ್‌ ವಿಕೆಟ್‌ ಬೇಟೆಯನ್ನು ನೆನಪಿಸಿಕೊಂಡ ಪ್ರಸಾದ್‌

ಬೆಂಗಳೂರು: ಭಾರತ- ಪಾಕಿಸ್ಥಾನ ನಡುವಿನ ಕ್ರಿಕೆಟ್‌ ಪಂದ್ಯದ ಜೋಶ್‌ ಹೇಗಿರುತ್ತದೆಂಬುದನ್ನು ಬಣ್ಣಿ ಸುವ ಅಗತ್ಯವಿಲ್ಲ. ಬಿಗಿ ವಾತಾವರಣದಲ್ಲಿ ನಡೆಯುವ ಈ ಮುಖಾಮುಖಿ ಒಂದಲ್ಲ ಒಂದು ಪ್ರಕರಣಕ್ಕೆ, ಕಹಿ ಘಟನೆಗೆ ಸಾಕ್ಷಿ ಯಾಗಿದ್ದನ್ನೂ ಮರೆಯುವಂತಿಲ್ಲ. ಇದರಲ್ಲಿ 1996ರ ವಿಶ್ವಕಪ್‌ ಕ್ವಾರ್ಟರ್‌ ಫೈನಲ್‌ ಪಂದ್ಯದ ಪ್ರಸಾದ್‌-ಸೊಹೈಲ್‌ “ಫೇಮಸ್‌ ಸೆಂಡ್‌ಆಫ್’ ಪ್ರಕರಣವೂ ಒಂದು. 24 ವರ್ಷಗಳ ಬಳಿಕ “ವೆಂಕಿ’ ಈ ಘಟನೆಯನ್ನು ನೆನಪಿಸಿಕೊಂಡಿದ್ದಾರೆ. ಆಗ ವಿಕೆಟಿಗೋಸ್ಕರ ತನ್ನ ರಕ್ತ ಕುದಿಯುತ್ತಿತ್ತು ಎಂದು ಹೇಳಿದ್ದಾರೆ.

ಅಮಿರ್‌ ಸೊಹೈಲ್‌ ಕಿರಿಕ್‌
1996ರ ಮಾ. 9ರಂದು ಬೆಂಗಳೂರಿನಲ್ಲಿ ನಡೆದ ಈ ಪಂದ್ಯದಲ್ಲಿ ಪಾಕಿಸ್ಥಾನ 288 ರನ್‌ ಚೇಸ್‌ ಮಾಡಲಿಳಿದಿತ್ತು. ವೆಂಕಟೇಶ ಪ್ರಸಾದ್‌ ಅವರ ಎಸೆತವನ್ನು ಬೌಂಡರಿಗೆ ಅಟ್ಟಿದ ಆರಂಭಕಾರ ಅಮಿರ್‌ ಸೊಹೈಲ್‌, ನಿಮ್ಮ ಮುಂದಿನ ಎಸೆತವನ್ನೂ ಬೌಂಡರಿಗೆ ಅಟ್ಟುತ್ತೇನೆ ಎಂದು ಬ್ಯಾಟ್‌ ಮೂಲಕ ಸನ್ನೆ ಮಾಡಿದರು. ಆಗ ಇಬ್ಬರ ನಡುವೆಯೂ ಮಾತಿನ ಚಕಮಕಿ ನಡೆಯಿತು. ಭಾರೀ ರೋಷದಲ್ಲಿದ್ದ ಪ್ರಸಾದ್‌ ಮುಂದಿನ ಎಸೆತದಲ್ಲೇ ಸೊಹೈಲ್‌ ಅವರನ್ನು ಕ್ಲೀನ್‌ಬೌಲ್ಡ್‌ ಮಾಡಿದ್ದರು!

ರಕ್ತ ಕುದಿಯುತ್ತಿತ್ತು!
“ಅಭಿಮಾನಿಗಳು ಆ ಘಟನೆಯನ್ನು ಜ್ಞಾಪಿಸದ ದಿನಗಳಿಲ್ಲ. 24 ವರ್ಷಗಳ ಬಳಿಕವೂ ಯಾರಾದರೊಬ್ಬರು ಈ ಬಗ್ಗೆ ನನ್ನಲ್ಲಿ ಕೇಳುತ್ತಲೇ ಇರುತ್ತಾರೆ. ಅಂದೇನು ನಡೆಯಿತು ಎಂಬುದನ್ನು ಇಡೀ ದೇಶವೇ ಗಮನಿಸಿದೆ. ನಮಗೆ ಆಗ ವಿಕೆಟ್‌ ಅಗತ್ಯವಿತ್ತು. ಇದಕ್ಕಾಗಿ ನನ್ನ ರಕ್ತ ಕುದಿಯುತ್ತಿತ್ತು…’ ಎಂದು ಪ್ರಸಾದ್‌ ಯೂ ಟ್ಯೂಬ್‌ ವೀಡಿಯೋದಲ್ಲಿ ಹೇಳಿದ್ದಾರೆ.ಈ ಒಂದು ವಿಕೆಟ್‌ಗೊಸ್ಕರ ಪ್ರಸಾದ್‌ ಮನೆಯಲ್ಲಿ ಉಡುಗೊರೆಯ ರಾಶಿಯೇ ಬಿದ್ದದ್ದು ಅಭಿಮಾನಿಗಳ ಮಹಾಸಂಭ್ರಮಕ್ಕೆ ಸಾಕ್ಷಿಯಾಗಿತ್ತು!

ಶಿಕ್ಷೆಯಿಂದ ಪಾರಾದೆ!
“ನನ್ನ ವರ್ತನೆ ಐಸಿಸಿ ನಿಯಮಕ್ಕೆ ವಿರುದ್ಧವಾಗಿತ್ತು. ಆಗ ನಾನು ಶಿಕ್ಷೆಯಿಂದ ಪಾರಾದದ್ದೇ ಆಶ್ಚರ್ಯ. ಅಂಪಾಯರ್‌ ಡೇವಿಡ್‌ ಶೆಫ‌ರ್ಡ್‌, ನಾಯಕ ಅಜರುದ್ದೀನ್‌, ಶ್ರೀನಾಥ್‌, ಸಚಿನ್‌ ಎಲ್ಲರೂ ಬಂದು ನನ್ನನ್ನು ಸಮಾಧಾನಗೊಳಿಸಿದರು. ಇಲ್ಲವಾದರೆ ನನಗೆ ದಂಡವೋ, ನಿಷೇಧವೋ ಎದುರಾಗುತ್ತಿತ್ತು’ ಎಂದು ಪ್ರಸಾದ್‌ ಹೇಳಿದರು.

ಟಾಪ್ ನ್ಯೂಸ್

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BCCI

T20 World Cup: ಇಂದು ಭಾರತ ತಂಡ ಪ್ರಕಟ?

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.