ತಮಿಳು ಕಾಲೋನಿ ತೆರವಿಗೆ ಸೂಚನೆ
Team Udayavani, Jun 13, 2020, 5:01 AM IST
ಮಂಡ್ಯ: ಮಂಡ್ಯ ವೈದ್ಯಕೀಯ ಕಾಲೇಜಿನ ಆಸ್ಪತ್ರೆಗೆ ಸೇರಬೇಕಾದ ಸುಮಾರು 5 ಎಕರೆಗೂ ಹೆಚ್ಚು ಜಾಗದಲ್ಲಿರುವ ತಮಿಳು ಕಾಲೋನಿಯನ್ನು ಶೀಘ್ರ ತೆರವುಗೊಳಿಸುವಂತೆ ಡಿಸಿಎಂ ಡಾ.ಸಿ. ಎನ್. ನಾರಾಯಣ್ ಹೇಳಿದರು. ಸುದಿಗೋಷ್ಠಿಯಲ್ಲಿ ಮಾತನಾಡಿ, ಆಸ್ಪತ್ರೆಗೆ ಹೊಂದಿಕೊಂಡಿರುವ 5 ಎಕರೆ ಜಾಗವನ್ನು ಬಹಳ ಹಿಂದೆಯೇ ತೆರವು ಮಾಡಬೇಕಿತ್ತು.
ಅಲ್ಲಿಯ ನಿವಾಸಿಗಳಿಗೆ ಪರ್ಯಾಯ ವಾಸದ ಮನೆಗಳನ್ನು ನಿರ್ಮಿಸಿಕೊಡುವ ಕಾರ್ಯ ಭರದಿಂದ ಸಾಗಿದೆ. ತಕ್ಷಣ ಅವರನ್ನೆಲ್ಲ ಮನೆಗಳಿಗೆ ಶಿಫ್ಟ್ ಮಾಡಿ ಆ ಜಾಗವನ್ನು ಜಿಲ್ಲಾಸ್ಪತ್ರೆಗೆ ಬಿಡಿಸಿಕೊಡಲಾಗುವುದು. ಆ ಮೂಲಕ ಸಾರ್ವಜನಿಕರಿಗೆ ಇನ್ನೂ ಹೆಚ್ಚಿನ ಸೌಲಭ್ಯ ಕೊಡಲು ಅನುಕೂಲವಾಗುತ್ತದೆ. ಈಗ ಆಸ್ಪತ್ರೆಯ ಅಕ್ಕಪಕ್ಕ ಜಾಗದ ಕೊರತೆಯಿಂದ ಅಭಿವೃದಿ ಕೆಲಸ ಮಾಡಲು ತೊಡಕಾಗಿದೆ ಎಂದು ಹೇಳಿದರು.
ಲಾಕ್ಡೌನ್ ಸಂಪೂರ್ಣ ಸ್ಥಗಿತಗೊಂಡ ನಂತರ ಎಲ್ಲಾ ಉನ್ನತ ಶಿಕ್ಷಣ ಕಾಲೇಜು, ವಿವಿಯ ಪರೀಕ್ಷೆ, ಮುಂದಿನ ತರಗತಿಗಳ ಬಗ್ಗೆ ಕ್ಯಾಲೆಂಡರ್ ಸಿದಟಛಿಪಡಿಸ ಲಾಗುವುದು. ಕೋವಿಡ್ 19 ತಡೆಗೆ ಸರ್ಕಾರ ಕ್ರಮ ಕೈಗೊಂಡಿದೆ. ಈ ವೇಳೆ ಯಲ್ಲಿ ಕಾಲೇಜು ಆರಂಭಿಸಿ ಪರೀಕ್ಷೆ ನಡೆಸುವುದು ಕಷ್ಟ. ಹೀಗಾಗಿ ಯಾವುದೇ ತೀರ್ಮಾನಕ್ಕೆ ನಾವು ಬಂದಿಲ್ಲ ಎಂದರು. ರಾಜ್ಯದಲ್ಲಿ ಅತಿಥಿ ಉಪನ್ಯಾಸಕರನ್ನು ಕಾಯಂ ಮಾಡುವ ಬಗ್ಗೆ ಕೂಗು ಕೇಳಿ ಬಂದಿದೆ. ಆದರೆ, ಏಕಾಏಕಿ ಖಾಯಂ ಮಾಡುವುದು ಕಷ್ಟಸಾಧ್ಯ.
ಅವರಿಗೂ ಸಾಮಾನ್ಯ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಿ ನಂತರ ನೇಮಕಾತಿ ಮಾಡಿ ಕೊಳ್ಳಲು ಚಿಂತನೆ ನಡೆದಿದೆ. ಅತಿಥಿ ಉಪ ನ್ಯಾಸಕರಿಗೆ ಕಳೆದ ಮಾರ್ಚ್ 23ರರವಗೆ ಸಂಬಳ ನೀಡಲು 53 ಕೋಟಿ ರೂ. ಗಳನ್ನು ಬಿಡುಗಡೆ ಮಾಡಲಾಗಿದೆ. ಈ ತಕ್ಷಣ ಅವರ ಸಮಸ್ಯೆ ಪರಿಹರಿಸಲು ಕಷ್ಟ ಸಾಧ್ಯ ಎಂದರು. ಶಾಸಕ ಎಂ.ಶ್ರೀನಿವಾಸ್, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್ ಪ್ರಭಾಕರ್, ಡೀಸಿ ಡಾ.ಎಂ.ವಿ. ವೆಂಕಟೇಶ್, ಎಎಸ್ಪಿ ಶೋಭಾರಾಣಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ
Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
MUST WATCH
ಹೊಸ ಸೇರ್ಪಡೆ
Vijayapura: ಗೃಹಿಣಿ ಮೇಲೆ ಅತ್ಯಾಚಾರ,ಚಿತ್ರೀಕರಣ: ಮಗನೊಂದಿಗೆ ನಾಪತ್ತೆಯಾದ ಸಂತ್ರಸ್ತೆ
Koppala: ವೈದ್ಯರ ನಿರ್ಲಕ್ಷ್ಯ-ಚಿಕಿತ್ಸೆ ಫಲಿಸದೇ ಗರ್ಭಿಣಿ ಸಾವು ; ಕುಟುಂಬಸ್ಥರ ಪ್ರತಿಭಟನೆ
Bengaluru: ಸೈಕಲ್ ಕದಿಯುತ್ತಿದ್ದ ಸೆಕ್ಯೂರಿಟಿ ಗಾರ್ಡ್ ಬಂಧನ
Mudigere: ಹುಲಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ವಶಕ್ಕೆ
Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ