ಪತಿಯನ್ನೇ ಅಪಹರಿಸಲು ಸುಪಾರಿ


Team Udayavani, Jun 13, 2020, 5:22 AM IST

uttara vibhaga

ಬೆಂಗಳೂರು: ಎರಡನೇ ಮದುವೆಯಾದ ಎಂಬ ಕಾರಣಕ್ಕೆ ತನ್ನ ಪತಿಯನ್ನೇ ಅಪಹರಿಸಲು ಸುಪಾರಿ ಕೊಟ್ಟಿದ್ದ ಮೊದಲ ಪತ್ನಿ ಪ್ರಕರಣದ ಭೇದಿಸಿರುವ ಉತ್ತರ ವಿಭಾಗದ ಪೊಲೀಸರು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಹೆಸರುಘಟ್ಟದ ಅಭಿಷೇಕ್‌ (26), ನಾಗಸಂದ್ರದ ಭರತ್‌ (25), ಜೆ.ಪಿ.ನಗರದ ಪ್ರಕಾಶ್‌ (22) ಹಾಗೂ ಬ್ಯಾಡರಹಳ್ಳಿಯ ಚೆಲುವಮೂರ್ತಿ (22) ಬಂಧಿತರು. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ್ದ ಕಾರು ವಶಕ್ಕೆ ಪಡೆಯಲಾಗಿದ್ದು, ಇತರೆ  ನಾಲ್ವರು ಆರೋಪಿಗಳಿಗಾಗಿ ಹುಡುಕಾಟ ನಡೆಯುತ್ತಿದೆ.

ಜೂ.7ರಂದು ಆರೋಪಿಗಳು ಶಾಹೀದ್‌ ಶೇಖ್‌ ಎಂಬುವರನ್ನು ಅಪಹರಿಸಿದ್ದರು ಎಂದು ಬಾಗಲಗುಂಟೆ ಪೊಲೀಸರು ಹೇಳಿದರು. ಶಾಹೀದ್‌ ಶೇಖ್‌ ಕಟ್ಟಡ ನಿರ್ಮಾಣದ  ಗುತ್ತಿಗೆದಾರರಾಗಿದ್ದು, ಪತ್ನಿ ರೋಮಾ ಶೇಖ್‌ ಜತೆ ಮಾರತ್ತಹಳ್ಳಿಯಲ್ಲಿ ವಾಸವಾಗಿದ್ದರು. ಮದು ವೆಗೂ ಮೊದಲೇ ಶಾಹೀದ್‌ ಗೆ ರತ್ನಾ ಕಾತುಮ್‌ ಎಂಬಾಕೆ ಜತೆ ಸ್ನೇಹವಿತ್ತು. ಮೊದಲನೇ ಪತ್ನಿ ರೋಮಾ ಕ್ಷುಲ್ಲಕ ವಿಚಾರಕ್ಕೆ ಪತಿ ಶಾಹಿದ್‌  ಜತೆ ಗಲಾಟೆ ಮಾಡುತ್ತಿದ್ದಳು. ಪತಿಯ ವರ್ತನೆಯಿಂದ ಬೇಸತ್ತಿದ್ದ ಶಾಹೀದ್‌ ರತ್ನಾ ಕಾತುಮ್‌ ಜತೆ ಎರಡನೇ ಮದುವೆಯಾಗಿದ್ದ.

ಮೊದಲನೇ ಪತ್ನಿಗೆ ಸೇರಿದ ಚಿನ್ನಾಭರಣ ಹಾಗೂ ಬೆಲೆಬಾಳುವ ವಸ್ತುಗಳನ್ನು ಕೊಂಡೊಯ್ದು ಎರಡನೇ   ಪತ್ನಿಗೆ ಕೊಟ್ಟಿದ್ದ. ಅದೇ ವಿಚಾರಕ್ಕೆ ರೋಮಾ ತನ್ನ ಪತ್ನಿ ಶಾಹಿದ್‌ ಮೇಲೆ ಆಕ್ರೋಶಗೊಂಡಿದ್ದಳು. ಹೇಗಾದರೂ ಮಾಡಿ ಪತಿಯನ್ನು ಆಕೆಯಿಂದ ದೂರ ಮಾಡಬೇಕೆಂದು ನಿರ್ಧರಿಸಿದ್ದ ರೋಮಾ ಶೇಖ್‌ ಅಪಹರಣ ಮಾಡಿಸಲು ಸಲ್ಮಾನ್‌ ಎಂಬಾತನಿಗೆ ಸುಪಾರಿ ನೀಡಿದ್ದಳು.

ಪತಿಯನ್ನು ಅಪಹರಿಸಿ ಪ್ರಕರಣವನ್ನು ರತ್ನಾಳ ತಲೆಗೆ ಕಟ್ಟುವ ಉದ್ದೇಶ ಹೊಂದಿದ್ದರು. ಶಾಹಿದ್‌ ತನ್ನ ಸ್ನೇಹಿತನ ಜತೆ ಜೂ. 7 ರಂದು ಎಂಇಐ ಬಡಾವಣೆಯಲ್ಲಿ ತರಕಾರಿ ತರಲು ಹೋಗಿದ್ದರು. ಈ  ವೇಳೆ ಕಾರಿನಲ್ಲಿ ಬಂದಿದ್ದ ಆರೋಪಿಗಳು, ಶಾಹಿದ್‌ನನ್ನು ಅಪಹರಿಸಿ ಮಾರಕಾಸOಉ ಗಳಿಂದ ಹಲ್ಲೆ ನಡೆಸಿದ್ದರು. ರೋಮಾ ಸೂಚನೆಯಂತೆ 2ನೇ ಪತ್ನಿ ರತ್ನಾಳಿಗೆ ಕರೆ ಮಾಡಿ, 2 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು.

ರತ್ನಾ ಕೊಟ್ಟ ದೂರಿನ  ಮೇರೆಗೆ ಕಾರ್ಯಾ ಚರಣೆಗಿಳಿದ ಪೊಲೀಸರು ಆರೋಪಿಗಳ ಮೊಬೈಲ್‌ ಟವರ್‌ಆಧಾರದ ಮೇಲೆ ಪತ್ತೆ ಹಚ್ಚಿದ್ದಾರೆ. ತನಿಖೆ ವೇಳೆ ಆರೋಪಿಗಳು ಹಾಸನದ ಸಾರಾಪುರದಲ್ಲಿರುವ ಸುಳಿವು ಸಿಕ್ಕಿತ್ತು. ಮಾಹಿತಿ ಆಧರಿಸಿ ಸಾರಾಪುರ ತೋಟದ  ಮನೆ  ಯೊಂದರಲ್ಲಿ ಅಕ್ರಮ ಬಂಧನದಲಿಟ್ಟಿದ್ದ ಶಾಹೀದ್ನನ್ನು ರಕ್ಷಿಸಿ, ಆರೋಪಿಗಳನ್ನು ಬಂಧಿಸಲಾಗಿದೆ. ಸುಪಾರಿ ಕೊಟ್ಟಿದ್ದ ರೋಮಾ ಬಂಧನಕ್ಕೂ ಕ್ರಮಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದರು.

ಟಾಪ್ ನ್ಯೂಸ್

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

Bengaluru: ಬ್ರೇಕ್‌ ಬದಲು ಆ್ಯಕ್ಸಿಲೇಟರ್‌ ಒತ್ತಿದ ಆ್ಯಂಬುಲೆನ್ಸ್‌ ಚಾಲಕ: ಸರಣಿ ಅಪಘಾತ

2

Bengaluru: ಬಿಸಿಲು; ಹೋಟೆಲ್‌ ವ್ಯಾಪಾರ ಶೇ.30 ಕುಸಿತ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ನಗರದಲ್ಲಿ ಕಸದ ಬ್ಲಾಕ್‌ ಸ್ಪಾಟ್‌ ಹೆಚ್ಚಳ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.