ನಿಯಮ ಉಲ್ಲಂಘಿಸಿ ಮರಳುಗಾರಿಕೆ
Team Udayavani, Jun 13, 2020, 6:12 AM IST
ಸಾಂದರ್ಭಿಕ ಚಿತ್ರ
ಮುಂಡರಗಿ: ತುಂಗಭದ್ರಾ ನದಿಯಲ್ಲಿ ಮರಳು ತೆಗೆಯುವಾಗ ನಿಯಮ ಉಲ್ಲಂಘಿಸಲಾಗಿದೆ ಎಂದು ರೈತ ಮುಖಂಡ ವಿಠಲ್ ಗಣಾಚಾರಿ ಹೇಳಿದರು.
ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಕರ್ತರ ಜೊತೆಯಲ್ಲಿ ಮಾತನಾಡಿದ ಅವರು, ಗಣಿ ಮತ್ತು ಭೂವಿಜ್ಞಾನ ಇಲಾಖೆ ನಿಯಮಗಳನ್ನು ಗಾಳಿಗೆ ತೂರಿ ನದಿಯಲ್ಲಿ ಮರಳು ತೆಗೆಯಲಾಗುತ್ತಿದೆ. ಗುತ್ತಿಗೆದಾರರು ಜೆಸಿಬಿಯಿಂದ ನೀರಿನಲ್ಲಿಯೇ ಮರಳು ತೆಗೆಯುತ್ತಾರೆ. ನದಿಯಲ್ಲಿ ಅಡ್ಡಲಾಗಿ ರಸ್ತೆ ನಿರ್ಮಿಸಿದ್ದಾರೆ. ಮುಖ್ಯ ರಸ್ತೆಯಲ್ಲಿ ಮರಳು ಸಾಗಾಟ ಮಾಡುವಾಗ ಚೆಕ್ಪೋಸ್ಟ್ಗಳು ಇಲ್ಲ. ಮರಳು ಪಾಸ್ಗಳ ದುರ್ಬಳಕೆ ವಿಪರೀತವಾಗಿದೆ. ನದಿಯಿಂದ ಮರಳು ತೆಗೆಯುವಾಗ ಎಷ್ಟು ಪ್ರಮಾಣದಲ್ಲಿ ಸಂಗ್ರಹಿಸಲಾಗಿದೆ ಎನ್ನುವುದರ ಬಗ್ಗೆ ದಾಖಲೆ ಇಡಬೇಕು. ತಾಲೂಕು ಟಾಸ್ಕ್ ಪೋರ್ಸ್ ಸಮಿತಿಯವರು ಅಕ್ರಮ ಮರಳು ಸಾಗಾಣಿಕೆಯನ್ನು ತಡೆಯಲು ರಾತ್ರಿ ಗಸ್ತು ತಂಡ ರಚಿಸಿಲ್ಲ. ಈ ಎಲ್ಲ ಕಾರಣಗಳಿಂದ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ. ಅಲ್ಲದೇ ಮರಳು ಅಕ್ರಮ ಸಾಗಾಣಿಕೆ ಕುರಿತು ಕಾನೂನು ಹೋರಾಟ ನಡೆಸುತ್ತಿರುವ ನನ್ನ ಮೇಲೆಯೇ ಜೀವ ಬೆದರಿಕೆ ಇದೆ. ಒಂದು ವೇಳೆ ನನ್ನ ಜೀವಕ್ಕೆ ಅಪಾಯವೇನಾದರೂ ಉಂಟಾದರೇ ಸರಕಾರವೇ ಹೊಣೆಯಾಗಬೇಕಾಗುತ್ತದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಗದಗ: ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ