ಪಾಕ್‌ ಆರ್ಥಿಕತೆಯಲ್ಲಿ ಮಹಾಕುಸಿತ: 68 ವರ್ಷದಲ್ಲೇ ಕನಿಷ್ಠ ಮಟ್ಟಕ್ಕೆ


Team Udayavani, Jun 13, 2020, 1:25 PM IST

ಪಾಕ್‌ ಆರ್ಥಿಕತೆಯಲ್ಲಿ ಮಹಾಕುಸಿತ: 68 ವರ್ಷದಲ್ಲೇ ಕನಿಷ್ಠ ಮಟ್ಟಕ್ಕೆ

ಇಸ್ಲಾಮಾಬಾದ್‌: ಕೋವಿಡ್ ಬಾಧಿಸುವ ಮೊದಲೇ ದುರ್ಬಲ ಆರ್ಥಿಕ ಶಕ್ತಿಯಾಗಿದ್ದ ಪಾಕಿಸ್ಥಾನಕ್ಕೆ ಕೋವಿಡ್‌ 19 ಮಹಾ ಆಘಾತ ನೀಡಿದೆ. ಈ ತಿಂಗಳ 30ರಂದು ಕೊನೆಗೊಳ್ಳಲಿರುವ ಹಾಲಿ ವಿತ್ತ ವರ್ಷವು ಕಳೆದ 68 ವರ್ಷದಲ್ಲೇ ಅತಿ ಕನಿಷ್ಠವಾದ ಶೇ. 0.38ಕ್ಕಿಳಿಯಲಿದೆ ಎಂದು ಗುರುವಾರ ನಡೆಸಲಾದ ಆರ್ಥಿಕ ಸಮೀಕ್ಷೆಯಿಂದ ತಿಳಿದು ಬಂದಿದೆ.

ಇದುವರೆಗೆ ದೇಶದಲ್ಲಿ 1,20,000 ಮಂದಿಗೆ ಸೋಂಕು ತಗಲಿಸಿರುವ ಕೋವಿಡ್ ಕಾರಣದಿಂದಾಗಿ ಮಾರ್ಚ್‌ನಿಂದ ಕೆಲವು ವಾರಗಳ ಕಾಲ ಲಾಕ್‌ಡೌನ್‌ ಮಾಡಿದ ಪರಿಣಾಮ ದೇಶದ ಆರ್ಥಿಕತೆಯ ಮೇಲೆ ಗಂಭೀರ ಅಡ್ಡ ಪರಿಣಾಮವಾಗಿದೆ ಎಂದು ಪಾಕಿಸ್ಥಾನ್‌ ಎಕಾನಮಿಕ್‌ ಸರ್ವೆ 2019-20 ಅನ್ನು ಬಿಡುಗಡೆಗೊಳಿಸಿ ಆರ್ಥಿಕ ಸಲಹೆಗಾರ ಅಬ್ದುಲ್‌ ಹಫೀಜ್‌ ಶೇಖ್‌ ಅವರು ಹೇಳಿದ್ದಾರೆ.
ಈ ದೇಶದಲ್ಲಿ ಕೋವಿಡ್ ಗಿಂತ ಮೊದಲೇ ಆರ್ಥಿಕ ಸ್ಥಿರೀಕರಣ ನೀತಿಯಿಂದಾಗಿ ಕೈಗಾರಿಕಾ ವಲಯದ ಮೇಲೆ ಅಡ್ಡ ಪರಿಣಾಮವಾಗಿತ್ತು. ಅದರ ಜತೆಗೆ ಕೋವಿಡ್ ಸೇರಿ ಪರಿಸ್ಥಿತಿ ಮತ್ತಷ್ಟು ಸಂಕೀರ್ಣವಾಗಿದೆ.

ಕೃಷಿ ಕ್ಷೇತ್ರದಲ್ಲಿ ಮಾತ್ರ ಶೇ. 2.7ರಷ್ಟು ಏರಿಕೆ ಕಂಡಿದ್ದು, ಕೈಗಾರಿಕೆ ಮತ್ತು ಸೇವಾ ವಲಯಗಳು ಋಣಾತ್ಮಕ ಬೆಳವಣಿಗೆ ದರಕ್ಕೆ ಸಾಕ್ಷಿಯಾಗಿದೆ. ಇವೆಲ್ಲವುಗಳ ಕಾರಣದಿಂದ ಒಟ್ಟು ಬೆಳವಣಿಗೆ ದರವು ಶೇ. 0.38ಕ್ಕೆ ಕುಸಿದಿದೆ ಎಂದು ಆರ್ಥಿಕ ಸರ್ವೇಯಲ್ಲಿ ತಿಳಿಸಲಾಗಿದೆ.

ಡಾಲರ್‌ ಲೆಕ್ಕದಲ್ಲಿ ಹೇಳುವುದಾದರೆ ದೇಶವು ತಲಾ ಆದಾಯವು 1,336ಕ್ಕೆ ಕುಸಿದಿದ್ದು, ಇದು ಶೇ. 6.1ರಷ್ಟು ಇಳಿಕೆಯಾಗಿದೆ. ಆದರೆ ರೂಪಾಯಿ ಲೆಕ್ಕದಲ್ಲಿ ಹೇಳುವುದಾದರೆ 2,14,539 ರೂ. ಗೇರಿದೆ ಎಂದು ತಿಳಿದು ಬಂದಿದೆ. ಕೋವಿಡ್‌ ಕಾರಣದಿಂದಾಗಿ ಉಂಟಾಗಿರುವ ರಫ್ತು ಮತ್ತು ಪಾವತಿ ಕುಸಿತವು ಅಭಿವೃದ್ಧಿ ಹೊಂದುವ ದೇಶಗಳ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆ ಎಚ್ಚರಿಸಿದೆ ಎಂಬುದಾಗಿ ಶೇಖ್‌ ಹೇಳಿದ್ದಾರೆ.

“ಜಾಗತಿಕ ಬೇಡಿಕೆ ಕುಸಿತದಿಂದಾಗಿ ರಫ್ತು ಕುಸಿತವಾಗಿದೆ ಮತ್ತು ವಿದೇಶ ಗಳಲ್ಲಿ ದುಡಿಯುವ ಪಾಕಿಸ್ಥಾನೀಯರು ಉದ್ಯೋಗ ಕಳೆದುಕೊಂಡಿರುವ ಕಾರಣದಿಂದಾಗಿ ಪಾವತಿಯೂ ಕುಸಿದಿದೆ’ ಎಂದು ಅವರು ಹೇಳಿದ್ದಾರೆ.

ತೆರಿಗೆ ಸಂಗ್ರಹ ಲೆಕ್ಕಾಚಾರ
ಜುಲೈ- ಎಪ್ರಿಲ್‌ 2020ರ ಅವಧಿಯಲ್ಲಿ ತೆರಿಗೆ ಸಂಗ್ರಹವು 3,300.6 ರೂ. ಬಿಲಿಯನ್‌ ಆಗಿದ್ದು, ಶೇ. 10.8 ಏರಿಕೆ ಕಂಡಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ 2,980 ರೂ. ಬಿಲಿಯನ್‌ ತೆರಿಗೆ ಸಂಗ್ರಹವಾಗಿತ್ತು. ಈ ಅವಧಿಯಲ್ಲಿ 4,510 ರೂ. ಬಿಲಿಯನ್‌ ತೆರಿಗೆ ಸಂಗ್ರಹಿಸುವ ಗುರಿ ಇರಿಸಿಕೊಳ್ಳಲಾಗಿತ್ತು. ಈ ಬಾರಿ ಖಾತೆ ಕೊರತೆಯು 2.8 ಬಿಲಿಯನ್‌ ಡಾಲರ್‌ ಆಗಿದ್ದು, (ಜಿಡಿಪಿಯ ಶೇ. 1.1) ಶೇ. 73.1ಕ್ಕೆ ಕುಸಿದಿದೆ. ಕಳೆದ ವರ್ಷ ಇದು 10.3 ಬಿಲಿಯನ್‌ ಡಾಲರ್‌ ಆಗಿದ್ದು, ಜಿಡಿಪಿಯ ಶೇ. 3.7 ಆಗಿತ್ತು. ಈ ಬಾರಿ ಖಾತೆ ಕೊರತೆಯು 20 ಬಿಲಿ ಯನ್‌ ಡಾಲರ್‌ ಆಗುವ ಸಾಧ್ಯತೆಯಿತ್ತು. ನಾವದನ್ನು 3 ಬಿಲಿಯನ್‌ ಡಾಲರ್‌ಗೆ ಇಳಿ ಸಿರುವುದು ದೊಡ್ಡ ಸಾಧನೆಯಾಗಿದೆ ಎಂದು ಶೇಖ್‌ ಹೇಳಿದ್ದಾರೆ.

ಟಾಪ್ ನ್ಯೂಸ್

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

ಮಕ್ಕಳ ಕೈಗೆ ಮೊಬೈಲ್‌ ಬದಲು ಪತ್ರಿಕೆ ಕೊಡಿ; ಡಾ| ಜೋಗತಿ ಮಂಜಮ್ಮ

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

Road Mishap ಕಾಸರಗೋಡು; ಕಾರು-ಸ್ಕೂಟರ್‌ ಢಿಕ್ಕಿ: ದಂಪತಿ ಸಾವು

kejriwal

AAP ಮುಗಿಸಲು ಬಿಜೆಪಿ ಆಪರೇಷನ್‌ ಬಲೆ: ಕೇಜ್ರಿವಾಲ್ ಕಿಡಿ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ

Doddangudde ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಮೇ 21-24: ಪ್ರತಿಷ್ಠಾ ವರ್ಧಂತಿ ಮಹೋತ್ಸವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ISREL

Israel–ಹಮಾಸ್‌ಯುದ್ಧ: 70 ಹಮಾಸ್‌ ಉಗ್ರರ ಹತ್ಯೆ

imran-khan

Pak ಅಮೂಲ್ಯ ಗಿಫ್ಟ್ ಮಾರಾಟ: ಇಮ್ರಾನ್‌ ವಿರುದ್ಧ ಪ್ರಕರಣ

1-wqewewqe

Iran ಅಧ್ಯಕ್ಷ ರೈಸಿ ಇದ್ದ ಹೆಲಿಕಾಪ್ಟರ್‌ ಪತನ?; ರಕ್ಷಣ ಕಾರ್ಯ

1-wq-eeqeqwe

Kyrgyzstan:ಭಾರತೀಯ ವಿದ್ಯಾರ್ಥಿಗಳ ಮೇಲೆ ಹಲ್ಲೆ ; ಪಾಕಿಸ್ಥಾನದ 3 ವಿದ್ಯಾರ್ಥಿಗಳ ಕೊಲೆ?

1-wewewqe

Swimwear ಫ್ಯಾಶನ್‌ ಶೋ: ಮೊದಲ ಬಾರಿಗೆ ಸೌದಿಯಿಂದ ಅನುಮತಿ!

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police crime

National Conference ರೋಡ್‌ ಶೋ ವೇಳೆ ಮೂವರಿಗೆ ಚಾಕು ಇರಿತ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

ಸಾವಿರ ವರ್ಷಗಳ ಭಾರತಕ್ಕಾಗಿ ಯೋಜನೆ; ಈಗಿನ ಯೋಜನೆಗಳಿಂದ ಭಾರತದ ಭವಿಷ್ಯ ಉಜ್ವಲ

bCharmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

Charmady: ರಸ್ತೆಯಲ್ಲಿ ಸಿಲುಕಿದ ಕಂಟೈನರ್‌ ಲಾರಿ; ಟ್ರಾಫಿಕ್‌ ಜಾಮ್‌

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

ಅನಾಮಧೇಯ ಲಿಂಕ್‌ ಕ್ಲಿಕ್ಕಿಸಿ ಲಕ್ಷಾಂತರ ರೂ. ಕಳೆದುಕೊಂಡ ವ್ಯಕ್ತಿ

police crime

Madhya Pradesh:ಮಗ ಮಾಡಿದ ತಪ್ಪಿಗೆ ದಲಿತ ತಂದೆ,ತಾಯಿಗೆ ಕಂಬಕ್ಕೆ ಕಟ್ಟಿ ಥಳಿಸಿ,ಬೂಟಿನ ಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.