ಮುದ್ದಳ್ಳಿ ಕೈಗಾರಿಕಾ ಪ್ರದೇಶಕ್ಕೆ ಮರುಜೀವ


Team Udayavani, Jun 14, 2020, 5:04 AM IST

marujeeva

ನಂಜನಗೂಡು: ಹದಿನೇಳು ವರ್ಷಗಳ ಹಿಂದೆ ಕೈಗಾರಿಕಾ ಬಡಾವಣೆ ಮಾಡಲು ಉದ್ದೇಶಿಸಿದ್ದ ಮುದ್ದಳ್ಳಿ ಕೈಗಾರಿಕಾ ಪ್ರದೇಶಕ್ಕೆ ಮರುಜೀವ ನೀಡಲು ಉದ್ದೇಶಿಸಿಲಾಗಿದೆ ಎಂದು ಶಾಸಕ ಹರ್ಷವರ್ಧನ್‌ ತಿಳಿಸಿದರು.

ರಾಜ್ಯ ಕೈಗಾರಿಕಾ  ಅಭಿವೃದಿ ಮಂಡಳಿಯ ಅಧಿಕಾರಿ ಸುರೇಶ್‌ ಕುಮಾರ್‌ ಹಾಗೂ ಜಿಲ್ಲಾ ಕೈಗಾರಿಕಾ ಇಲಾಖೆ ಜಂಟಿ ನಿರ್ದೇಶಕ ಡಿ.ಕೆ.ಲಿಂಗರಾಜು ಅವರೊಂದಿಗೆ ಕೈಗಾರಿಕಾ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿ ಮಾತನಾಡಿದರು. 2003ರಲ್ಲಿ ಈ  ಪ್ರದೇಶದಲ್ಲಿ ಟಿವಿಎಸ್‌ ಕಾರ್ಖಾನೆ ಆರಂಭಿಸಲು ಸಿದ್ದತೆ ನಡೆದಿತ್ತು.

ಆಗ ಗುರುತಿಸಲಾಗಿದ್ದ 475 ಎಕರೆ ಪ್ರದೇಶವನ್ನು ಬಳಸಿಕೊಂಡು ಇಲ್ಲೊಂದು ಕೈಗಾರಿಕಾ ಬಡಾವಣೆ ಸ್ಥಾಪಿಸಲು ಸಿದ್ದತೆ ಮಾಡಲಾಗಿದೆ ಎಂದು ಹೇಳಿದರು. ಹತ್ತು  ದಿನಗಳೊಳಗೆ ಮತ್ತೂಮ್ಮೆ ಸರ್ವೆ ಮಾಡಿ ವಿದ್ಯುತ್‌ ಹಾಗೂ ನೀರಿನ ಸಂಪರ್ಕ ಸೇರಿದಂತೆ ಬಡಾವಣೆಯ ನೀಲನಕ್ಷೆ ಸಿದಟಛಿಪಡಿಸಿ ಕೊಡಬೇಕು. ಯೋಜನಾ ವರದಿ ಸಲ್ಲಿಸಿದ ಕೂಡಲೇ ರಾಜ್ಯ ಕೈಗಾರಿಕಾ ಸಚಿವ ರೊಂದಿಗೆ ಚರ್ಚಿಸಿ ಅನುಮತಿ ಪಡೆಯಲು ಪ್ರಯತ್ನಿಸಲಾಗುವುದು.

ಇದರಿಂದ  ಸ್ಥಳೀಯರ ನಿರುದ್ಯೋಗ ಸಮಸ್ಯೆಯೂ ಬಗೆಹರಿಯಲಿದೆ ಎಂದು ಶಾಸಕ ಹರ್ಷವರ್ಧನ್‌ ವಿಶ್ವಾಸ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ  ನಿರ್ದೇಶಕ ಲಿಂಗರಾಜು, ಕೆಐಡಿಬಿ ಅಭಿವೃದಿ ಅಧಿಕಾರಿ ಶ್ರೀಧರ್‌, ಸರ್ವೆಯರ್‌ ನರಸಯ್ಯ, ನಂಜನಗೂಡು ತಾಪಂ ಅಧ್ಯಕ್ಷ ಮಹದೇವಪ್ಪ, ಇಒ ಶ್ರೀಕಂಠರಾಜ್‌ ಅರಸು, ರಾಜಸ್ವ ನಿರೀಕ್ಷಕ ಪ್ರಕಾಶ, ಜಿಪಂ ಮಾಜಿ ಸದಸ್ಯ ಸಿಂಧುವಳ್ಳಿ  ಕೆಂಪಣ್ಣ ಮತ್ತಿತರರಿದ್ದರು.

ಟಾಪ್ ನ್ಯೂಸ್

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

voter

EC; ಮೊದಲ 4 ಹಂತದ ಚುನಾವಣೆಯಲ್ಲಿ ಶೇ.67 ಮತದಾನ

kejriwal 2

ಜೂ.4ರ ಬಳಿಕ ಐಎನ್‌ಡಿಐಎ ಸರಕಾರ: ಅರವಿಂದ ಕೇಜ್ರಿವಾಲ್‌

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadsadas

Hunsur; ಬೈಕ್‌ಗಳ ಮುಖಾಮುಖಿ: ಓರ್ವ ಸಾವು, ಇಬ್ಬರು ಗಂಭೀರ

Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ

Hunasuru: ಸರಣಿ ಅಪಘಾತ; ಬೈಕ್ ಸವಾರ ಮೃತ್ಯು… ಎರಡು ಬಸ್, ಎರಡು ಕಾರು ಜಖಂ

Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್‌ನೋಟ್‌ ಪತ್ತೆ!

Srikantheshwara temple: ಶ್ರೀಕಂಠನ ಹುಂಡಿಯಲ್ಲಿ ಡೆತ್‌ನೋಟ್‌ ಪತ್ತೆ!

6-hunsur

Hunsur: ನಾಗರಹೊಳೆಯಲ್ಲಿ ಗುಂಡಿಕ್ಕಿ ಅಪರೂಪದ ಕೂರ ಭೇಟೆಯಾಡಿದ್ದ ಇಬ್ಬರ ಬಂಧನ; ಓರ್ವ ಪರಾರಿ

3-hunsur

Hunsur: ಅತಿಯಾದ ಮದ್ಯ ಸೇವನೆ; ಯುವಕ ಸಾವು

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

1-wqeqewqe

Traffic ದಂಡವನ್ನು ತಪ್ಪಿಸಲು ಹೆಲ್ಮೆಟ್‌ ಧರಿಸಿ ಕಾರು ಚಾಲನೆ!

gold-and-silver

Silver ಕೆ.ಜಿ ಗೆ 1,800 ರೂ. ಏರಿಕೆ: ಸಾರ್ವಕಾಲಿಕ ದಾಖಲೆ

rain

Kerala; ಮೂರ್ನಾಲ್ಕು ದಿನ ಭಾರಿ ಮಳೆ: ಹವಾಮಾನ ಇಲಾಖೆ

marriage 2

Wedding gifts ಪಟ್ಟಿ ಇರಿಸಿಕೊಳ್ಳುವುದು ಕಡ್ಡಾಯ

IT WORK

Microsoft ಚಿಂತನೆ : ಚೀನದಿಂದ 800 ನೌಕರರ‌ ವರ್ಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.